ರಾಹುಲ್ ಗಾಂಧಿ ಫಿರಂಗಿ, ನಾನು AK 47: ಸಿಧು ಸಿಡಿಗುಂಡು!
ಬಿಲಾಸ್ಪುರ, ಮೇ 16: "ರಫೇಲ್ ಒಪ್ಪಂದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬ್ರೋಕರೇಜ್ ಪಡೆದಿದ್ದು ಹೌದೋ ಅಲ್ಲವೋ ಎಂದು ಮೋದಿಯವರು ಸತ್ಯ ಹೇಳಬೇಕು. ರಫೇಲ್ ಗೆ ಸಂಬಂಧಿಸಿದ ಚರ್ಚೆಗೆ ನಾನು ಎಂದಿಗೂ ಸಿದ್ಧ. ರಾಹುಲ್ ಗಾಂಧಿ ಫಿರಂಗಿಯಾದರೆ, ನಾನು ಎಕೆ 47 ಗನ್" ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಅವರು, 2014 ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗಂಗೆಯ ಪುತ್ರ ಎನ್ನುತ್ತ ಅಧಿಕಾರಕ್ಕೆ ಬಂದರು. ಈಗ ರಫೇಲ್ ಏಜೆಂಟ್ ಆಗಿ ವಾಪಸ್ ಹೋಗುತ್ತಿದ್ದಾರೆ ಎಂದು ಮೋದಿ ಅವರನ್ನು ಲೇವಡಿ ಮಾಡಿದರು.
ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ
"ನಾನು ಭ್ರಷ್ಟಾಚಾರ ಮಾಡುತ್ತೇನೆ. ಮತ್ತು ಬೇರೆಯವರಿಗೂ ಮಾಡಲು ಬಿಡುತ್ತೇನೆ ಎಂಬ ವಿಷಯದ ಬಗ್ಗೆ ನಾನು ಮೋದಿ ಅವರೊಂದಿಗೆ ಚರ್ಚೆ ಮಾಡುತ್ತೇನೆ. ಅಕಸ್ಮಾತ್ ಈ ಚರ್ಚೆಯಲ್ಲಿ ನಾನು ಸೋತರೆ ನಾನು ರಾಜಕೀಯವನ್ನೇ ಬಿಡುತ್ತೇನೆ" ಎಂದು ಸಿಧು ಹೇಳಿದರು.

ಇತ್ತೀಚೆಗೆ ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ಮಾಡುತ್ತಲೇ ಇರುವ ಸಿಧು, "ನಿಮ್ಮ ತಪ್ಪಾದ ಒಂದೇ ಒಂದು ಮತ ನಿಮ್ಮ ಮಕ್ಕಳನ್ನು ಪಕೋಡಾ ಮಾರುವಂತೆ ಮಾಡಬಹುದು" ಎಂದು ಮೋದಿ ಸರ್ಕಾರವನ್ನು ಗೇಲಿ ಮಾಡಿದ್ದರು.
ಹಿಮಾಚಲ ಪ್ರದೇಶದಲ್ಲಿ ಮೇ 19 ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ತನ್ನಿಮಿತ್ತ ಅವರು ಪ್ರಚಾರ ನಡೆಸುತ್ತಿದ್ದರು. ಮೇ 23 ರಂದು ಲೋಕಸಭೆ ಚ ಚುನಾವಣೆಯ ಫಲಿತಾಂಶ ಹೊರಬೀಳಲಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications