ಛತ್ತೀಸ್ಗಢ: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ಕೋಸಾ ಹತ್ಯೆ
ದಂತೇವಾಡ, ಏಪ್ರಿಲ್ 20: ಪೊಲೀಸರು ಸಾಕಷ್ಟು ದಿನಗಳಿಂದ ಹುಡುಕುತ್ತಿದ್ದ ನಕ್ಸಲ್ ನಾಯಕ ಕೋಸಾನನ್ನು ಎನ್ಕೌಂಟರ್ನಲ್ಲಿ ಭದ್ರತಾ ಪಡೆ ಹತ್ಯೆ ಮಾಡಿವೆ. ಕೋಸಾನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ಬಹುಮಾನ ಎಂದು ಪೊಲೀಸರು ಈ ಹಿಂದೆ ಘೋಷಿಸಿದ್ದರು.
ಅಂತೆಯೇ ಮೃತ ನಕ್ಸಲ್ ನಾಯಕ ಕೋಸಾ ಕಳೆದ 15 ವರ್ಷಗಳಿಂದ ನಕ್ಸಲ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಮೂಲತಃ ನೀಲವಾಯದ ಮಲ್ಲಪಾರ ನಿವಾಸಿಯಾಗಿದ್ದ ಕೋಸಾ ಪ್ರಸ್ತುತ ಮಲಂಗೀರ್ ಪ್ರದೇಶ ಸಮಿತಿ ಸದಸ್ಯನಾಗಿದ್ದ ಮತ್ತು ಮಿಲಿಟರಿ ಗುಪ್ತಚರ ಉಸ್ತುವಾರಿ ವಹಿಸಿದ್ದ. ಅಲ್ಲದೆ ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕ್ಕೂ ಹೆಚ್ಚು ಅಪರಾಧಗಳು ದಾಖಲಾಗಿದ್ದವು.
ಮಂಗಳವಾರ ಬೆಳಿಗ್ಗೆ ಛತ್ತೀಸ್ ಘಡದ ನೀಲವಾಯಾ ಅರಣ್ಯದಲ್ಲಿ ದಂತೇವಾಡ ಜಿಲ್ಲಾ ಮೀಸಲು ಪಡೆ ಕಾರ್ಯಾಚರಣೆ ನಡೆಸಿ ಎನ್ಕೌಂಟರ್ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ ಛತ್ತೀಸ್ ಘಡದ ಮೋಸ್ಟ್ ನಟೋರಿಯಸ್ ನಕ್ಸಲ್ ನಾಯಕ 'ಕೋಸಾ' ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

ಅಲ್ಲದೆ ಘಟನಾ ಸ್ಥಳದಲ್ಲಿ ಒಂದು 9 ಎಂಎಂ ಪಿಸ್ತೂಲ್, ಒಂದು ದೇಶೀ ನಿರ್ಮಿತ ಭರ್ಮಾರ್, 3 ಕೆಜಿ ಐಇಡಿ ಸ್ಫೋಟಕ, ಪಿಥೂಸ್, ಔಷಧಿಗಳು ಮತ್ತು ದೈನಂದಿನ ಬಳಕೆಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ದಂತೇವಾಡ ಎಸ್ಪಿ ಅಭಿಷೇಕ್ ಪಲ್ಲವ್ ಅವರು, 'ದಂತೇವಾಡ ಡಿಆರ್ಜಿ (ದಂತೇವಾಡ ಡಿಸ್ಟಿಕ್ಟ್ ರಿಸರ್ವ್ ಗಾರ್ಡ್)ಯೊಂದಿಗೆ ಇಂದು ಬೆಳಿಗ್ಗೆ 6 ಗಂಟೆಗೆ ನೀಲವಾಯದ ಕಾಡಿನಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮಾವೋವಾದಿ ಮೃತ ದೇಹವನ್ನು ವಶಪಡಿಸಿಕೊಳ್ಳಲಾಗಿತ್ತು. ಮೃತ ಮಾವೋವಾದಿಯನ್ನು ನಟೋರಿಯಸ್ ನಕ್ಸಲ್ ನಾಯಕ ಕೋಸಾ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.
ಇದೇ ಏಪ್ರಿಲ್ ತಿಂಗಳ ಆರಂಭದಲ್ಲಿ ಛತ್ತೀಸ್ಗಢದ ಸುಕ್ಮಾ ಮತ್ತು ಬಿಜಾಪುರ್ ನಡುವಿನ ಜುನಾಗಢದಲ್ಲಿ ನಕ್ಸಲರು ನಡೆಸಿದ್ದ ಭೀಕರ ದಾಳಿಯಲ್ಲಿ 22 ಯೋಧರು ಹುತಾತ್ಮರಾಗಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications