Haryana: ಹರಿಯಾಣ ಸಿಎಂ ಆಗಿ ನಾಳೆ ಸೈನಿ ಪ್ರಮಾಣ ವಚನ ಸ್ವೀಕಾರ, ಮೋದಿ ಭಾಗಿ!
ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಬಿಜೆಪಿಯ ಹೊಸ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಅ.17) ಹರಿಯಾಣ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಅವರ ಪ್ರಮಾಣವಚನ ಕಾರ್ಯಕ್ರಮ ಪಂಚಕುಲದಲ್ಲಿ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಜರಾಗುವುದರಿಂದ ಫುಲ್ ಟೈಟ್ ಸೆಕ್ಯುರಿಟಿ ವ್ಯವಸ್ಥೆ ಕೂಡ ಮಾಡಲಾಗಿದೆ. ಹರಿಯಾಣ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಇತರ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಹಾಗಾಗಿ ಇಂದೇ ಅಲ್ಲಿ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ 48 ಸ್ಥಾನಗಳನ್ನು ಗೆದ್ದು ಬಿಜೆಪಿ ಸತತ ಮೂರನೇ ಬಾರಿ ಅಧಿಕಾರಕ್ಕೆ ಬರಲು ಸಜ್ಜಾಗಿದೆ. ಇನ್ನು ಈ ಕಾರ್ಯಕ್ರಮದಲ್ಲಿ 14 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಬಿಜೆಪಿ ಕೇಂದ್ರ ನಾಯಕರು ಸೇರಿದಂತೆ 500 ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಹರಿಯಾಣ ಪೊಲೀಸರ ಮಾಹಿತಿ ಪ್ರಕಾರ, ಕೆಲವು ನಾಯಕರು ಚಾರ್ಟರ್ ವಿಮಾನಗಳ ಮೂಲಕ ಈ ಕಾರ್ಯಕ್ರಮಕ್ಕೆ ಬರುವವರಿದ್ದಾರೆ. ಹಾಗಾಗಿ ಪಂಚಕುಲ ಹೆಲಿಪ್ಯಾಡ್ ಮತ್ತು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗಣ್ಯರು ಬಂದಿಳಿಯಲಿದ್ದಾರೆ. ಅವರಿಗೆ ಸೂಕ್ತ ಬಂದೋಬಸ್ತ್ ಕೂಡ ಮಾಡಲಾಗಿದೆಯಂತೆ.
ಅವರನ್ನು ಬರಮಾಡಿಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿದೆ. ದಸರಾ ಮೈದಾನದಲ್ಲಿ ಹಲವು ನಾಯಕರಿಗೆ ಅವಕಾಶ ಕಲ್ಪಿಸಲು ಬೃಹತ್ ವೇದಿಕೆ ಸಜ್ಜಾಗಿದೆ. ನೆಲದ ಮಧ್ಯದಲ್ಲಿ ಸುಲಭವಾಗಿ ಚಲಿಸುವಂತೆ ಮಾಡಲು ನೆಲಗಟ್ಟುಗಳನ್ನು ಹೊಂದಿರುವ ವಿಶೇಷ ಮಾರ್ಗವನ್ನು ನಿರ್ಮಿಸಲಾಗುತ್ತಿದೆ.

ಇನ್ನು ಗಣ್ಯರನ್ನು ಬರಮಾಡಿಕೊಳ್ಳಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ಅಲ್ಲಿನ ದಸರಾ ಮೈದಾನದಲ್ಲಿ ಹಲವು ನಾಯಕರಿಗೆ ಅವಕಾಶ ಕಲ್ಪಿಸಲು ಬೃಹತ್ ವೇದಿಕೆ ಕೂಡ ಸಜ್ಜಾಗಿದೆ.
ಹರಿಯಾಣದ ಕೇಂದ್ರ ವೀಕ್ಷಕರಾಗಿ ನೇಮಕಗೊಂಡಿರುವ ಗೃಹ ಸಚಿವ ಅಮಿತ್ ಶಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹರಿಯಾಣದ ಮುಂದಿನ ಮುಖ್ಯಮಂತ್ರಿ ಆಯ್ಕೆ ಮಾಡಲು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಇಂದು ಚಂಡೀಗಢಕ್ಕೆ ಬರಲಿದ್ದಾರೆ.
ಬಿಜೆಪಿ ತನ್ನ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಹೊಸದಾಗಿ ಚುನಾಯಿತ 48 ಶಾಸಕರ ಸಭೆಯನ್ನು ಚಂಡೀಗಢದಲ್ಲಿ ಕರೆದಿದ್ದು, ಸಿಎಂ ಆಗಲಿರುವ ನಯಾಬ್ ಸಿಂಗ್ ಸೈನಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ನಯಾಬ್ ಸಿಂಗ್ ಸೈನಿ ಅವರು ಕಳೆದ ವಾರ ದೆಹಲಿಯಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಇತರ ಹಿರಿಯ ನಾಯಕರನ್ನು ಭೇಟಿಯಾಗಿದ್ದರು. ಆದರೆ ಪ್ರಧಾನಿ ಕಾರ್ಯಾಲಯದಿಂದ ಪಿಎಂ ಮೋದಿ ಅವರ ಲಭ್ಯತೆ ಖಚಿತಪಡಿಸಿಕೊಂಡು ಪ್ರಮಾಣ ವಚನ ಸ್ವೀಕಾರದ ದಿನಾಂಕವನ್ನು ಫೈನಲ್ ಮಾಡಲಾಯಿತು. ಅದರಂತೆ ಹರಿಯಾಣ ರಾಜಧಾನಿ ಚಂಡೀಗಢದ ಸಮೀಪವೇ ಇರುವ ಪಂಚಕುಲದಲ್ಲಿ ಮೂರನೇ ಬಾರಿ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications