ಜನಗಣತಿ ವೇಳೆ ಒಬಿಸಿ ಸಂಖ್ಯೆ ದಾಖಲಿಸಲು ಆಯೋಗ ಮನವಿ
ನವದೆಹಲಿ, ಏಪ್ರಿಲ್ 2: ಜನಗಣತಿ 2021ರ ಭಾಗವಾಗಿ ದೇಶದಲ್ಲಿನ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜನಸಂಖ್ಯೆಯ ದಾಖಲೆಗಳನ್ನು ಸಂಗ್ರಹಿಸುವಂತೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು (ಎನ್ಸಿಬಿಸಿ) ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ಮನವಿ ಮಾಡಿದೆ.
ಎನ್ಸಿಬಿಸಿ ಕಾರ್ಯದರ್ಶಿ ಆನಂದ್ ಕುಮಾರ್ ಅವರು ಸಾಮಾಜಿಕ ನ್ಯಾಯ ಸಚಿವಾಲಯದ ಕಾರ್ಯದರ್ಶಿಗೆ ಗುರುವಾರ ಈ ಶಿಫಾರಸು ಸಲ್ಲಿಸಿದ್ದಾರೆ.
ಜನಗಣತಿಯಲ್ಲಿ ಒಬಿಸಿ ಜನಸಂಖ್ಯೆಯ ಪ್ರತ್ಯೇಕ ಗಣತಿ ವಿವರಕ್ಕಾಗಿ ಮಲ್ಲೇಶ್ ಯಾದವ್ ಎಂಬುವವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವಾಗಲೇ ಈ ಮನವಿ ಮಾಡಲಾಗಿದೆ. ಈ ರಿಟ್ ಅರ್ಜಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಮರ್ಥಿಸಿಕೊಳ್ಳಲಿದೆ ಎಂಬ ಭರವಸೆ ಇರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ಇತ್ತೀಚೆಗಷ್ಟೇ ಎನ್ಸಿಬಿಸಿ ನಡೆಸಿದ್ದ ಪೂರ್ಣ ಪ್ರಮಾಣದ ಆಯೋಗ ಸಭೆಯಲ್ಲಿ ಚರ್ಚೆ ನಡೆಸಿ, ಅವಿರೋಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಎನ್ಸಿಬಿಸಿಗೆ ನರೇಂದ್ರ ಮೋದಿ ಸರ್ಕಾರದ ಮೊದಲನೇ ಅವಧಿಯಲ್ಲಿ ಸಾಂವಿಧಾನಿಕ ಮಾನ್ಯತೆ ನೀಡಲಾಗಿತ್ತು.
ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಜಿ ರೋಹಿಣಿ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಒಬಿಸಿಯಲ್ಲಿನ ದುರ್ಬಲ ವರ್ಗಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಪ್ರಯೋಜನಗಳನ್ನು ನೀಡಲು ಉಪ ವಿಭಾಗಗಳನ್ನು ರಚಿಸುವ ಹೊಣೆ ನೀಡಲಾಗಿತ್ತು. ಆದರೆ ರೋಹಿಣಿ ಆಯೋಗ ಕೂಡ ಒಬಿಸಿ ಅಡಿಯಲ್ಲಿ ವರ್ಗೀಕರಿಸಲಾದ ವಿವಿಧ ಸಮುದಾಯಗಳ ಕುರಿತು ಸೂಕ್ತ ದತ್ತಾಂಶದ ಕೊರತೆ ಇರುವುದರಿಂದ ಇದು ಕಷ್ಟಕರವಾಗಿದೆ ಎಂದು ಹೇಳಿತ್ತು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications