ಜನಗಣತಿ ವೇಳೆ ಒಬಿಸಿ ಸಂಖ್ಯೆ ದಾಖಲಿಸಲು ಆಯೋಗ ಮನವಿ
ನವದೆಹಲಿ, ಏಪ್ರಿಲ್ 2: ಜನಗಣತಿ 2021ರ ಭಾಗವಾಗಿ ದೇಶದಲ್ಲಿನ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಜನಸಂಖ್ಯೆಯ ದಾಖಲೆಗಳನ್ನು ಸಂಗ್ರಹಿಸುವಂತೆ ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು (ಎನ್ಸಿಬಿಸಿ) ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯಕ್ಕೆ ಮನವಿ ಮಾಡಿದೆ.
ಎನ್ಸಿಬಿಸಿ ಕಾರ್ಯದರ್ಶಿ ಆನಂದ್ ಕುಮಾರ್ ಅವರು ಸಾಮಾಜಿಕ ನ್ಯಾಯ ಸಚಿವಾಲಯದ ಕಾರ್ಯದರ್ಶಿಗೆ ಗುರುವಾರ ಈ ಶಿಫಾರಸು ಸಲ್ಲಿಸಿದ್ದಾರೆ.
ಜನಗಣತಿಯಲ್ಲಿ ಒಬಿಸಿ ಜನಸಂಖ್ಯೆಯ ಪ್ರತ್ಯೇಕ ಗಣತಿ ವಿವರಕ್ಕಾಗಿ ಮಲ್ಲೇಶ್ ಯಾದವ್ ಎಂಬುವವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಇರುವಾಗಲೇ ಈ ಮನವಿ ಮಾಡಲಾಗಿದೆ. ಈ ರಿಟ್ ಅರ್ಜಿಯನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಸಮರ್ಥಿಸಿಕೊಳ್ಳಲಿದೆ ಎಂಬ ಭರವಸೆ ಇರುವುದಾಗಿ ಪತ್ರದಲ್ಲಿ ತಿಳಿಸಲಾಗಿದೆ.

ಇತ್ತೀಚೆಗಷ್ಟೇ ಎನ್ಸಿಬಿಸಿ ನಡೆಸಿದ್ದ ಪೂರ್ಣ ಪ್ರಮಾಣದ ಆಯೋಗ ಸಭೆಯಲ್ಲಿ ಚರ್ಚೆ ನಡೆಸಿ, ಅವಿರೋಧ ನಿರ್ಣಯ ತೆಗೆದುಕೊಳ್ಳಲಾಗಿದೆ. ಎನ್ಸಿಬಿಸಿಗೆ ನರೇಂದ್ರ ಮೋದಿ ಸರ್ಕಾರದ ಮೊದಲನೇ ಅವಧಿಯಲ್ಲಿ ಸಾಂವಿಧಾನಿಕ ಮಾನ್ಯತೆ ನೀಡಲಾಗಿತ್ತು.
ದೆಹಲಿ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಜಿ ರೋಹಿಣಿ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಒಬಿಸಿಯಲ್ಲಿನ ದುರ್ಬಲ ವರ್ಗಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಪ್ರಯೋಜನಗಳನ್ನು ನೀಡಲು ಉಪ ವಿಭಾಗಗಳನ್ನು ರಚಿಸುವ ಹೊಣೆ ನೀಡಲಾಗಿತ್ತು. ಆದರೆ ರೋಹಿಣಿ ಆಯೋಗ ಕೂಡ ಒಬಿಸಿ ಅಡಿಯಲ್ಲಿ ವರ್ಗೀಕರಿಸಲಾದ ವಿವಿಧ ಸಮುದಾಯಗಳ ಕುರಿತು ಸೂಕ್ತ ದತ್ತಾಂಶದ ಕೊರತೆ ಇರುವುದರಿಂದ ಇದು ಕಷ್ಟಕರವಾಗಿದೆ ಎಂದು ಹೇಳಿತ್ತು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications