NCERT: ಎನ್ಸಿಇಆರ್ಟಿಯ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಪಠ್ಯ ವಿವಾದ: ಪುಸ್ತಕ ಮಾರಾಟ ಸ್ಥಗಿತ, ಸುಪ್ರೀಂ ಚಾಟಿ
NCERT: ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿದ ನಂತರ ಎನ್ಸಿಇಆರ್ಟಿ (National Council of Educational Research and Training - NCERT) 8ನೇ ತರಗತಿಯ ಸಾಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪ್ರಕಟಿಸಿದ್ದ "ನ್ಯಾಯಾಂಗದಲ್ಲಿ ಭ್ರಷ್ಟಾಚಾರ" ಎನ್ನುವ ವಿವಾದಾತ್ಮಕ ಬರಹವನ್ನು ಕೈಬಿಟ್ಟಿದೆ. ಎನ್ಸಿಇಆರ್ಟಿ ಬಿಡುಗಡೆ ಮಾಡಿದ್ದ 8ನೇ ತರಗತಿಯ ಸಾಮಾಜ - ವಿಜ್ಞಾನ ಪಠ್ಯಪುಸ್ತಕದಲ್ಲಿನ ನಿರ್ದಿಷ್ಟ ಪಠ್ಯವು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಮಾರಾಟದಿಂದ ಹಿಂಪಡೆಯಲಾಗಿದೆ.
"ನ್ಯಾಯಾಂಗದಲ್ಲಿ ಭ್ರಷ್ಟಾಚಾರ" ಎಂಬ ಪಠ್ಯವನ್ನು ಹೊಂದಿದ್ದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಮಾರಾಟದಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಮೂಲಗಳು ಬುಧವಾರ ದೃಢಪಡಿಸಿವೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪಠ್ಯ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಅಧ್ಯಾಯನವು ವಿವಾದಕ್ಕೆ ಕಾರಣವಾಗಿತ್ತು. ಶಿಕ್ಷಣ ಸಚಿವಾಲಯದ ಮೂಲಗಳ ಪ್ರಕಾರ, ಮಂಗಳವಾರದಿಂದಲೇ ಈ ಪುಸ್ತಕವನ್ನು ಮಾರಾಟವನ್ನು ತಡೆಹಿಡಿಯಲಾಗಿದೆ.
'Exploring Society: India and Beyond - Part 2' ಎಂಬ ಈ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಲಾಗಿತ್ತು. ಆದರೆ ಬುಧವಾರದಂದು ದೆಹಲಿಯ NCERT ಕ್ಯಾಂಪಸ್ನ ಪುಸ್ತಕ ಕೌಂಟರ್ನಲ್ಲಿ ಈ ಪುಸ್ತಕ ಲಭ್ಯವಿರಲಿಲ್ಲ. ಈ ವಿಷಯದ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ (Surya Kant) ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಸಂಸ್ಥೆಯನ್ನು ಯಾರೂ ಕೆಟ್ಟ ರೀತಿಯಲ್ಲಿ ಚಿತ್ರಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪುಸ್ತಕದಲ್ಲಿ ನ್ಯಾಯಾಧೀಶರು ನ್ಯಾಯಾಲಯದೊಳಗೆ ಮಾತ್ರವಲ್ಲದೆ ಹೊರಗೂ ಹೇಗೆ ವರ್ತಿಸಬೇಕು ಎಂಬುದಕ್ಕೆ ನಿಯಮಾವಳಿ ಇದೆ ಎಂದು ವಿವರಿಸಲಾಗಿತ್ತು. ಅಲ್ಲದೆ 2017 ರಿಂದ 2021ರವರೆಗೆ ನ್ಯಾಯಾಂಗದ ವಿರುದ್ಧ 1,600ಕ್ಕೂ ಹೆಚ್ಚು ದೂರುಗಳು ಬಂದಿದ್ದವು ಎನ್ನುವ ಅಂಶಗಳನ್ನೂ ಸಹ ಪಠ್ಯದಲ್ಲಿ ಮುದ್ರಿಸಲಾಗಿತ್ತು. ಈ ವಿಷಯದ ಹಿನ್ನೆಲೆ ಈಗ NCERT ಆ ಪುಸ್ತಕವನ್ನು ಮಾರಾಟದಿಂದ ಹಿಂಪಡೆದಿದೆ.
ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಅಧ್ಯಾಯನಕ್ಕೆ ಆಕ್ಷೇಪ ಹಾಗೂ ವಿರೋಧ ವ್ಯಕ್ತವಾದ ನಂತರ NCERT 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಹೊರತಂದಿದೆ. ಹಳೆಯ ಪುಸ್ತಕವನ್ನು ಮಂಗಳವಾರ ಮಾರಾಟದಿಂದ ಹಿಂತೆಗೆದುಕೊಳ್ಳಲಾಗಿದೆ. ಬುಧವಾರ, ದೆಹಲಿಯ NCERT ಕ್ಯಾಂಪಸ್ನಲ್ಲಿರುವ ಪ್ರಕಟಣೆ ವಿಭಾಗದ ಪುಸ್ತಕ ಕೌಂಟರ್ನ ಸಿಬ್ಬಂದಿ ಸೋಮವಾರ ಕೌಂಟರ್ನಲ್ಲಿ ಮಾರಾಟಕ್ಕೆ ಲಭ್ಯವಿದ್ದ ಪುಸ್ತಕ ಇನ್ನು ಮುಂದೆ ಲಭ್ಯವಿರುವುದಿಲ್ಲ ಎಂದು ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಬುಧವಾರ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ವಿಭಾಗಕ್ಕೆ ಗಂಭೀರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಮತ್ತು "ಯಾರೂ ಸಂಸ್ಥೆಯನ್ನು ದೂಷಿಸಲು ಬಿಡುವುದಿಲ್ಲ" ಎಂದು ಹೇಳಿದ್ದರು.
-
Pratham: ಡಿಬಾಸ್ ಅಂತ ಕೂಗಾಡಿ ದರ್ಶನ್ ಅವ್ರನ್ನ ಬೀದಿಗೆ ತರ್ತೀರಿ: ಫ್ಯಾನ್ಸ್ಗೆ ನಟ ಪ್ರಥಮ್ ಬುದ್ಧಿವಾದ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ













Click it and Unblock the Notifications