NCERT: ಎನ್ಸಿಇಆರ್ಟಿಯ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಪಠ್ಯ ವಿವಾದ: ಪುಸ್ತಕ ಮಾರಾಟ ಸ್ಥಗಿತ, ಸುಪ್ರೀಂ ಚಾಟಿ
NCERT: ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಿದ ನಂತರ ಎನ್ಸಿಇಆರ್ಟಿ (National Council of Educational Research and Training - NCERT) 8ನೇ ತರಗತಿಯ ಸಾಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪ್ರಕಟಿಸಿದ್ದ "ನ್ಯಾಯಾಂಗದಲ್ಲಿ ಭ್ರಷ್ಟಾಚಾರ" ಎನ್ನುವ ವಿವಾದಾತ್ಮಕ ಬರಹವನ್ನು ಕೈಬಿಟ್ಟಿದೆ. ಎನ್ಸಿಇಆರ್ಟಿ ಬಿಡುಗಡೆ ಮಾಡಿದ್ದ 8ನೇ ತರಗತಿಯ ಸಾಮಾಜ - ವಿಜ್ಞಾನ ಪಠ್ಯಪುಸ್ತಕದಲ್ಲಿನ ನಿರ್ದಿಷ್ಟ ಪಠ್ಯವು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಮಾರಾಟದಿಂದ ಹಿಂಪಡೆಯಲಾಗಿದೆ.
"ನ್ಯಾಯಾಂಗದಲ್ಲಿ ಭ್ರಷ್ಟಾಚಾರ" ಎಂಬ ಪಠ್ಯವನ್ನು ಹೊಂದಿದ್ದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಮಾರಾಟದಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವಾಲಯದ ಮೂಲಗಳು ಬುಧವಾರ ದೃಢಪಡಿಸಿವೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಪಠ್ಯ ಪುಸ್ತಕದಲ್ಲಿನ ವಿವಾದಾತ್ಮಕ ಅಂಶಗಳಿಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಈ ಪುಸ್ತಕದಲ್ಲಿ ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ಅಧ್ಯಾಯನವು ವಿವಾದಕ್ಕೆ ಕಾರಣವಾಗಿತ್ತು. ಶಿಕ್ಷಣ ಸಚಿವಾಲಯದ ಮೂಲಗಳ ಪ್ರಕಾರ, ಮಂಗಳವಾರದಿಂದಲೇ ಈ ಪುಸ್ತಕವನ್ನು ಮಾರಾಟವನ್ನು ತಡೆಹಿಡಿಯಲಾಗಿದೆ.
'Exploring Society: India and Beyond - Part 2' ಎಂಬ ಈ ಪುಸ್ತಕವನ್ನು ಸೋಮವಾರ ಬಿಡುಗಡೆ ಮಾಡಲಾಗಿತ್ತು. ಆದರೆ ಬುಧವಾರದಂದು ದೆಹಲಿಯ NCERT ಕ್ಯಾಂಪಸ್ನ ಪುಸ್ತಕ ಕೌಂಟರ್ನಲ್ಲಿ ಈ ಪುಸ್ತಕ ಲಭ್ಯವಿರಲಿಲ್ಲ. ಈ ವಿಷಯದ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ (Surya Kant) ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಯಾಂಗ ಸಂಸ್ಥೆಯನ್ನು ಯಾರೂ ಕೆಟ್ಟ ರೀತಿಯಲ್ಲಿ ಚಿತ್ರಿಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪುಸ್ತಕದಲ್ಲಿ ನ್ಯಾಯಾಧೀಶರು ನ್ಯಾಯಾಲಯದೊಳಗೆ ಮಾತ್ರವಲ್ಲದೆ ಹೊರಗೂ ಹೇಗೆ ವರ್ತಿಸಬೇಕು ಎಂಬುದಕ್ಕೆ ನಿಯಮಾವಳಿ ಇದೆ ಎಂದು ವಿವರಿಸಲಾಗಿತ್ತು. ಅಲ್ಲದೆ 2017 ರಿಂದ 2021ರವರೆಗೆ ನ್ಯಾಯಾಂಗದ ವಿರುದ್ಧ 1,600ಕ್ಕೂ ಹೆಚ್ಚು ದೂರುಗಳು ಬಂದಿದ್ದವು ಎನ್ನುವ ಅಂಶಗಳನ್ನೂ ಸಹ ಪಠ್ಯದಲ್ಲಿ ಮುದ್ರಿಸಲಾಗಿತ್ತು. ಈ ವಿಷಯದ ಹಿನ್ನೆಲೆ ಈಗ NCERT ಆ ಪುಸ್ತಕವನ್ನು ಮಾರಾಟದಿಂದ ಹಿಂಪಡೆದಿದೆ.
ನ್ಯಾಯಾಂಗದಲ್ಲಿ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಅಧ್ಯಾಯನಕ್ಕೆ ಆಕ್ಷೇಪ ಹಾಗೂ ವಿರೋಧ ವ್ಯಕ್ತವಾದ ನಂತರ NCERT 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕವನ್ನು ಹೊರತಂದಿದೆ. ಹಳೆಯ ಪುಸ್ತಕವನ್ನು ಮಂಗಳವಾರ ಮಾರಾಟದಿಂದ ಹಿಂತೆಗೆದುಕೊಳ್ಳಲಾಗಿದೆ. ಬುಧವಾರ, ದೆಹಲಿಯ NCERT ಕ್ಯಾಂಪಸ್ನಲ್ಲಿರುವ ಪ್ರಕಟಣೆ ವಿಭಾಗದ ಪುಸ್ತಕ ಕೌಂಟರ್ನ ಸಿಬ್ಬಂದಿ ಸೋಮವಾರ ಕೌಂಟರ್ನಲ್ಲಿ ಮಾರಾಟಕ್ಕೆ ಲಭ್ಯವಿದ್ದ ಪುಸ್ತಕ ಇನ್ನು ಮುಂದೆ ಲಭ್ಯವಿರುವುದಿಲ್ಲ ಎಂದು ಹೇಳಿದ್ದಾರೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಬುಧವಾರ 'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಎಂಬ ವಿಭಾಗಕ್ಕೆ ಗಂಭೀರ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ ಮತ್ತು "ಯಾರೂ ಸಂಸ್ಥೆಯನ್ನು ದೂಷಿಸಲು ಬಿಡುವುದಿಲ್ಲ" ಎಂದು ಹೇಳಿದ್ದರು.
-
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
Kannada: ನಮ್ಮ ರಕ್ತವೇ ಕನ್ನಡ, ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
‘ಲವ್ ಮಾಕ್ಟೇಲ್ 3’ ಕಥೆ ವಿವಾದ ಸುಖಾಂತ್ಯ: ಫಿಲ್ಮ್ ಚೇಂಬರ್ ಸಭೆಯಲ್ಲಿ ಡಾರ್ಲಿಂಗ್ ಕೃಷ್ಣ-ಗುರು ದೇಶಪಾಂಡೆ ಸಂಧಾನ ಯಶಸ್ವಿ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
CBSE 12ನೇ ತರಗತಿಯ ಜೀವಶಾಸ್ತ್ರ ಪ್ರಶ್ನೆಪತ್ರಿಕೆ ವಿಶ್ಲೇಷಣೆ: ತಜ್ಞರು ಮತ್ತು ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ಮಾಹಿತಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ












Click it and Unblock the Notifications