ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿಗೆ ಚಾಲನೆ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ನವದೆಹಲಿ, ಅಕ್ಟೋಬರ್ 20: ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು(NCF) 2022 ಅನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಾರಂಭಿಸಿದ್ದಾರೆ. ಪ್ರಾಥಮಿಕ ಹಂತಕ್ಕಾಗಿ ಎನ್ಸಿಎಫ್ 2022 ಅನ್ನು ಶಿಕ್ಷಣ ಸಚಿವರು ಪ್ರಾರಂಭಿಸಿದ್ದು, ಇದರ ಜೊತೆಗೆ ಅಕ್ಟೋಬರ್ 20ರ ಗುರುವಾರ ಕೇಂದ್ರೀಯ ವಿದ್ಯಾಲಯದಲ್ಲಿ ಬಾಲವಾಟಿಕಾ ಅನ್ನು ಶುರು ಮಾಡಲಾಗಿದೆ.
ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2022 ಅನ್ನು ರಾಷ್ಟ್ರೀಯ ಶಿಕ್ಷಣ ನೀತಿ(NEP) 2020ರ ಸಲಹೆಗಳ ಆಧಾರದ ಮೇಲೆ ರೂಪಿಸಲಾಗಿದೆ. ಇದರ ಪ್ರಕಾರ, ಪಠ್ಯಕ್ರಮವು ಶಾಲಾ ಶಿಕ್ಷಣ, ಬಾಲ್ಯ ಮತ್ತು ಶಿಕ್ಷಣ, ಶಿಕ್ಷಕ ಶಿಕ್ಷಣ ಮತ್ತು ವಯಸ್ಕ ಶಿಕ್ಷಣ ಎಂಬ 4 ಕ್ಷೇತ್ರಗಳನ್ನು ಒಳಗೊಂಡಿರುತ್ತದೆ.
ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆಯ ಪೋರ್ಟ್ಫೋಲಿಯೊವನ್ನು ಹೊಂದಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಾಥಮಿಕ ಹಂತಕ್ಕಾಗಿ NCF 2022 ಅನ್ನು ಪ್ರಾರಂಭಿಸಿದ್ದಾರೆ. ಎನ್ಸಿಎಫ್ 2022 ರ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ರಾಜ್ಯ ಸಚಿವರು, ಅನ್ನಪೂರ್ಣ ದೇವಿ, ಸುಭಾಸ್ ಸರ್ಕಾರ್ ಮತ್ತು ಡಾ ರಾಜ್ಕುಮಾರ್ ರಂಜನ್ ಸಿಂಗ್ ಸಹ ಉಪಸ್ಥಿತರಿದ್ದರು.

ಬಾಲವಾಟಿಕಾ ಉದ್ಘಾಟಿಸಿದ ಸಚಿವ ಧರ್ಮೇಂದ್ರ ಪ್ರಧಾನ್:
ಎನ್ಸಿಎಫ್ 2022 ಅನ್ನು ಪ್ರಾರಂಭಿಸಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಬಾಲವಾಟಿಕಾ ಉದ್ಘಾಟನೆಗಳನ್ನೂ ಉದ್ಘಾಟಿಸಿದರು. ಕೇಂದ್ರೀಯ ವಿದ್ಯಾಲಯಗಳಲ್ಲಿನ ಬಾಲವಾಡಿ, ಅಂಗನವಾಡಿ ಕೇಂದ್ರಗಳ ಕಾರ್ಯದಂತೆಯೇ ಇರುತ್ತವೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದು ಇದರ ಉದ್ದೇಶವಾಗಿದೆ.
ಎನ್ಸಿಎಫ್ 2022 ಅಡಿ ಪ್ರಾಥಮಿಕ ಹಂತದಲ್ಲಿ 0 ರಿಂದ 8 ವರ್ಷ ವಯಸ್ಸಿನ ಮಕ್ಕಳ ಶಿಕ್ಷಣವನ್ನು ನೀಡಲಾಗುತ್ತದೆ. ಈ ಎನ್ಸಿಎಫ್ 2022ರ ಮುಖ್ಯ ಗುರಿಯೇ ಬಾಲ್ಯದಲ್ಲಿ ಇರುವ ಮಕ್ಕಳಿಗೆ ಆರೈಕೆ ಮತ್ತು ಶಿಕ್ಷಣವನ್ನು ನೀಡುವುದಾಗಿಗಿದೆ.
ನಾಲ್ಕು ಪಠ್ಯಕ್ರಮವಾಗಿ ವಿಂಗಡಣೆ:
ಎನ್ಸಿಎಫ್ 2022 ಅನ್ನು 4 ಪಠ್ಯಕ್ರಮದ ಚೌಕಟ್ಟುಗಳಾಗಿ ವಿಂಗಡಿಸಲಾಗಿದೆ. ಶಾಲಾ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFSE), ಪ್ರಾರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFECCE), ಶಿಕ್ಷಕರ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು (NCFTE) ಮತ್ತು ವಯಸ್ಕರ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು NCFAE) ಎಂದು ವಿಂಗಡಣೆ ಮಾಡಲಾಗಿದೆ.
ಎನ್ಸಿಎಫ್ 2022 ಗಾಗಿ ರಾಷ್ಟ್ರೀಯ ಮಟ್ಟದಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್(NCERT) ಸಮೀಕ್ಷೆಯನ್ನು ನಡೆಸಿತು. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಎನ್ಸಿಎಫ್ಗೆ ಸಂಬಂಧಿಸಿದ ಸಮೀಕ್ಷೆಗಳನ್ನು ಕೈಗೊಳ್ಳಲು ಕೇಳಲಾಯಿತು. ಎನ್ಸಿಎಫ್ 2022 ಮತ್ತು ಅದರ 4 ಭಾಗಗಳನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ರೂಪಿಸಲಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications