Get Updates
Get notified of breaking news, exclusive insights, and must-see stories!

ವಿಪಕ್ಷಗಳ ಸಭೆಗೆ ಆಗಮಿಸಿದ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌

ಬೆಂಗಳೂರು, ಜುಲೈ 18: 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗ್ಗಟ್ಟಿನ ಮೈತ್ರಿ ಮಾಡಿಕೊಳ್ಳಲು ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಎರಡನೇ ಸಭೆಯಲ್ಲಿ 26 ಪಕ್ಷಗಳ ಬಿಜೆಪಿಯೇತರ ನಾಯಕರು ಮಾತುಕತೆ ಆರಂಭಿಸಲಿದ್ದಾರೆ.

ಮೊದಲನೇ ಸಭೆಯು ಬಿಹಾರದಲ್ಲಿ ನಡೆದಿತ್ತು. ಅಲ್ಲಿಗೂ ಈ ನಾಯಕರು ಸೇರಿದ್ದರು. ಔಪಚಾರಿಕ ಸಭೆಯು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, 1ನೇ ದಿನದ ಔತಣಕೂಟದ ನಂತರ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡ ಪಾಲ್ಗೊಳ್ಳಲಿದ್ದಾರೆ, ಈ ಸಭೆಗೆ ಈಗಾಗಲೇ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.

NCP chief Sharad Pawar arrive to the opposition meeting in Bengaluru

ಸೋಮವಾರ ನಡೆದ ಅನೌಪಚಾರಿಕ ಚರ್ಚೆಯಲ್ಲಿ ವಿವಿಧ ಪಕ್ಷಗಳ 50 ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು. ನಂತರ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟವನ್ನು ಏರ್ಪಡಿಸಿದ್ದರು. ಸಭೆಯ ಸಿದ್ಧತೆಗಳನ್ನು ಗಮನಿಸಲು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಪಾಟ್ನಾದಲ್ಲಿ ಕರೆದಿದ್ದ ಸಭೆಯ ಒಂದು ತಿಂಗಳ ನಂತರ ಬೆಂಗಳೂರಿನಲ್ಲಿ ಎರಡನೇ ಸಭೆ ನಡೆಯುತ್ತಿದೆ. ಆರಂಭದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಈ ಸಭೆಯನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ರಾಜ್ಯದ ಪ್ರತಿಕೂಲ ಹವಾಮಾನದ ಕಾರಣ ಬೆಂಗಳೂರಿಗೆ ಸಭೆಯನ್ನು ಸ್ಥಳಾಂತರಿಸಲಾಯಿತು.

ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾನ ಮನಸ್ಕ ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯ, ದೇಶದ ಅಭಿವೃದ್ಧಿ ಮತ್ತು ರಾಷ್ಟ್ರೀಯ ಕಲ್ಯಾಣದ ಕಾರ್ಯಸೂಚಿಯನ್ನು ಮುನ್ನಡೆಸಲು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಹೇಳಿದರು.

ಎರಡು ದಿನಗಳ ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಕಾಂಗ್ರೆಸ್ ವರಿಷ್ಠರು ಸಮಾವೇಶಗೊಂಡಿದ್ದರೆ, ಪಕ್ಷದ ಹಿರಿಯ ನಾಯಕ ಉಮ್ಮನ್ ಚಾಂಡಿ ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಮುಂಜಾನೆ ನಗರದ ಚಿನ್ಮಯ ಮಿಷನ್ ಆಸ್ಪತ್ರೆಯಲ್ಲಿ ನಿಧನರಾದರು. ಇದು ಕಾಂಗ್ರೆಸ್ಸಿಗರಿಗೆ ದುಃಖ ತಂದಿದೆ.

ಏತನ್ಮಧ್ಯೆ, ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್‌ಡಿಎ ಒಕ್ಕೂಟವು ಜುಲೈ 18 ರಂದು ನವದೆಹಲಿಯಲ್ಲಿ ದೊಡ್ಡ ಸಭೆಯನ್ನು ನಡೆಸಲಿದೆ. ಅಲ್ಲಿ ಸುಮಾರು 38 ಪಕ್ಷಗಳು ಸೇರುವ ನಿರೀಕ್ಷೆಯಿದೆ. ಬಿಜೆಪಿ ಪಕ್ಷಕ್ಕೆ ಸವಾಲೆಸೆಯಲು ವಿರೋಧ ಪಕ್ಷಗಳು ಕೈಜೋಡಿಸಿದಾಗ ಅದರ ಮೈತ್ರಿ ಪಾಲುದಾರರ ಸಭೆಯನ್ನು ಕರೆದಿದ್ದಕ್ಕಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಎನ್‌ಡಿಎ ಪ್ರಹಸನವಾಗಿ ಮಾರ್ಪಟ್ಟ ವರ್ಷಗಳ ನಂತರ ಪುನಶ್ಚೇತನಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಇಂದು ಬೆಳಗ್ಗೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜಂಟಿ ವಿರೋಧ ಪಕ್ಷದ ಎರಡನೇ ದಿನದ ಸಭೆಗೆ ಬೆಂಗಳೂರಿನ ತಾಜ್ ವೆಸ್ಟ್ ಎಂಡ್‌ಗೆ ಆಗಮಿಸಿದರು. ಮಲ್ಲಿಕಾರ್ಜುನ ಅವರ ಪುತ್ರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಮಾತನಾಡಿ, ಭಾರತದ ಕಲ್ಪನೆ ಮತ್ತು ಸಂವಿಧಾನವನ್ನು ಕಾಪಾಡಲು ವಿರೋಧ ಪಕ್ಷಗಳ ನಾಯಕರು ಬೆಂಗಳೂರಿನಲ್ಲಿ ಸೇರುತ್ತಿದ್ದಾರೆ. ಬಿಜೆಪಿಯವರ ನೀತಿಗಳು ಭಾರತವನ್ನು ನೋಯಿಸುತ್ತಿವೆ ಎಂದು ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+