ಹಿಂಡೆನ್ಬರ್ಗ್ ವರದಿ: ಅದಾನಿ ಪರ ಶರದ್ ಪವಾರ್ ಬ್ಯಾಟಿಂಗ್; ಆಶ್ಚರ್ಯದಲ್ಲಿ ಮಿತ್ರ ಪಕ್ಷಗಳು!
ನವದೆಹಲಿ, ಏಪ್ರಿಲ್ .07: ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶುಕ್ರವಾರದಂದು ಅದಾನಿ ಸಮೂಹದ ಒಡೆತನದ ಸುದ್ದಿ ವಾಹಿನಿ ಎನ್ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅದಾನಿ ಗ್ರೂಪ್ಗೆ ಬೆಂಬಲ ನೀಡಿದ್ದಾರೆ. ಇದು ಅವರ ವಿರೋಧ ಪಕ್ಷದ ಮಿತ್ರರನ್ನು ಆಶ್ಚರ್ಯಕ್ಕೆ ನೂಕಿದೆ. ಈಗಾಗಲೇ ವಿರೋಧ ಪಕ್ಷಗಳು ಹಿಂಡೆನ್ಬರ್ಗ್ ವರದಿ ವಿಷಯವಾಗಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.
ಜಾರಿ ನಿರ್ದೇಶನಾಲಯಕ್ಕೆ (ಇಡಿ) ಜಂಟಿ ದೂರು ಸೇರಿದಂತೆ ಅದಾನಿ ವಿರುದ್ಧದ ವಿರೋಧ ಪಕ್ಷದ ಪ್ರತಿಭಟನೆಯಿಂದ ದೂರ ಉಳಿದಿರುವ ಶರದ್ ಪವಾರ್, ಹಿಂಡೆನ್ಬರ್ಗ್ ವರದಿಯನ್ನು ಪ್ರಶ್ನಿಸುತ್ತಿರುವ ಪ್ರತಿಪಕ್ಷಗಳ ಒಗ್ಗಟ್ಟಿನ ಬಗ್ಗೆ ಮತ್ತು ಇದನ್ನೇ ಇಟ್ಟುಕೊಂಡು ಸಂಸತ್ತಿನಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು, ಶರದ್ ಪವಾರ್ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಹೆಚ್ಚಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಆದರೆ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಟ್ವೀಟ್ ಮಾಡಿ, "ಅವರು (ಅದಾನಿ) ಹೇಗೆ ಗುರಿಯಾಗುತ್ತಿದ್ದಾರೆಂದು ನಮಗೆ ತಿಳಿಸಲು ಅದಾನಿ ಒಡೆತನದ ಚಾನೆಲ್ ಅದಾನಿ ಅವರ ಸ್ನೇಹಿತರನ್ನು ಸಂದರ್ಶಿಸುತ್ತಿದೆ. ಭಾರತೀಯ ಮಾಧ್ಯಮ - ನೀವು ನಿಜವಾಗಿ ಅಪರೂಪದ ಪ್ರಾಣಿಗಳು!" ಎಂದು ವ್ಯಂಗ್ಯವಾಡಿದ್ದಾರೆ.
ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆಗೆ ಬಹಿರಂಗವಾಗಿ ಒಲವು ತೋರಿದ ತೃಣಮೂಲ ಕಾಂಗ್ರೆಸ್ ಹೊರತುಪಡಿಸಿ, ಬಹುತೇಕ ಎಲ್ಲಾ ವಿರೋಧ ಪಕ್ಷಗಳು ಜಂಟಿಯಾಗಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಬೇಡಿಕೆಯನ್ನು ಒತ್ತಾಯಿಸಿವೆ. ಶರದ್ ಪವಾರ್ ನೇತೃತ್ವದ ಎನ್ಸಿಪಿ ಕೂಡ ಸಂಸತ್ತಿನ ಒಳಗೆ ವಿರೋಧ ಪಕ್ಷವನ್ನು ಬೆಂಬಲಿಸಿದೆ. ಆದರೆ ಅದಾನಿ ವಿರುದ್ಧದ ಜಂಟಿ ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ.

ಹಿಂಡೆನ್ಬರ್ಗ್ ವರದಿಯನ್ನು ಉಲ್ಲೇಖಿಸಿ ಮಾತನಾಡಿರುವ ಶರದ್ ಪವಾರ್ ಎನ್ಡಿಟಿವಿಗೆ ಸಂದರ್ಶನ ನೀಡಿದ್ದಾರೆ. "ಇಂತಹ ಹೇಳಿಕೆಗಳನ್ನು ಇತರ ವ್ಯಕ್ತಿಗಳು ಈ ಹಿಂದೆ ನೀಡಿದ್ದರು. ಕೆಲವು ದಿನಗಳವರೆಗೆ ಸಂಸತ್ತಿನಲ್ಲಿ ಗದ್ದಲವಿತ್ತು. ಆದರೆ ಈ ಬಾರಿ ಈ ವಿಷಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹೇಳಿಕೆ ನೀಡಿದ ಇವರನ್ನು ಹಿನ್ನೆಲೆ ಏನು ಎಂದು ನಾವು ಕೇಳಿರಲಿಲ್ಲ.. ಅವರು ದೇಶದಾದ್ಯಂತ ಗದ್ದಲವನ್ನು ಉಂಟುಮಾಡುವ ಸಮಸ್ಯೆಗಳನ್ನು ಎತ್ತಿದಾಗ, ದೇಶದ ಆರ್ಥಿಕತೆಯಿಂದ ವೆಚ್ಚವನ್ನು ಭರಿಸಲಾಗುತ್ತದೆ. ನಾವು ಈ ವಿಷಯಗಳನ್ನು ನಿರ್ಲಕ್ಷಿಸಲಾಗುವುದಿಲ್ಲ. ಈ ಬಾರಿ ಇದನ್ನು ಟಾರ್ಗೆಟ್ ಮಾಡಲಾಗಿದೆ ಎಂದು ತೋರುತ್ತದೆ" ಎಂದಿದ್ದಾರೆ.
"ದೇಶದ ಪ್ರತ್ಯೇಕ ಕೈಗಾರಿಕಾ ಗುಂಪನ್ನು ಗುರಿಯಾಗಿಸಲಾಗಿದೆ. ಅದು ತೋರುತ್ತಿದೆ. ಅವರು ಏನಾದರೂ ತಪ್ಪು ಮಾಡಿದ್ದರೆ, ತನಿಖೆಯಾಗಬೇಕು."ಎಂದು ಹೇಳಿದ್ದಾರೆ ಎಂದು ಕಳೆದ ವರ್ಷ ಡಿಸೆಂಬರ್ನಲ್ಲಿ ಅದಾನಿ ಗ್ರೂಪ್ ಖರೀದಿಸಿದ ಎನ್ಡಿಟಿವಿ ಅವರನ್ನು ಉಲ್ಲೇಖಿಸಿದೆ. ಜೆಪಿಸಿ ಬೇಡಿಕೆಯನ್ನು ತಾನು ಬೆಂಬಲಿಸುವುದಿಲ್ಲ ಎಂದ ಅವರು, ತನಿಖೆ ಮಾಡಲು ಸುಪ್ರೀಂ ಕೋರ್ಟ್ ನ್ಯಾಯಾಧೀಶರು, ತಜ್ಞರು, ಆಡಳಿತಾಧಿಕಾರಿ ಮತ್ತು ಅರ್ಥಶಾಸ್ತ್ರಜ್ಞರನ್ನೊಳಗೊಂಡ ಸಮಿತಿಯನ್ನು ತನಿಖೆ ಮಾಡಲು ಸುಪ್ರೀಂ ಕೋರ್ಟ್ ನೇಮಿಸಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ, ಪ್ರತಿಪಕ್ಷಗಳು ಸಂಸದೀಯ ಸಮಿತಿಯನ್ನು ನೇಮಿಸಬೇಕೆಂದು ಒತ್ತಾಯಿಸಿವೆ. "ತನಿಖೆ ನಡೆಸಿದರೆ ಯಾರೂ ಪ್ರಭಾವ ಬೀರಲು ಸಾಧ್ಯವಿಲ್ಲದ ಸುಪ್ರೀಂ ಕೋರ್ಟ್ ತನಿಖೆಯನ್ನು ಘೋಷಿಸಿದ ನಂತರ ಸತ್ಯ ಬೆಳಕಿಗೆ ಬರುವ ಹೆಚ್ಚಿನ ಅವಕಾಶವಿತ್ತು. ಹಾಗಾಗಿ, ಜೆಪಿಸಿ ತನಿಖೆಗೆ ಯಾವುದೇ ಮಹತ್ವವಿರಲಿಲ್ಲ ಮತ್ತು ಅದರ ಅಗತ್ಯವಿರಲಿಲ್ಲ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ಜೆಪಿಸಿಗೆ ಏಕೆ ಒತ್ತಾಯಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಉದ್ದೇಶ ಏನೆಂದು ಹೇಳಲು ಸಾಧ್ಯವಿಲ್ಲ ಆದರೆ ಮಾಧ್ಯಮಗಳು ಜೆಪಿಸಿ ಪ್ರಕ್ರಿಯೆಗಳನ್ನು ಪ್ರತಿದಿನ ವರದಿ ಮಾಡುತ್ತವೆ ಮತ್ತು ಬಹುಶಃ ಯಾರಾದರೂ ಸಮಸ್ಯೆಯನ್ನು ನಾಲ್ಕು ತಿಂಗಳವರೆಗೆ ಎರಡುಪಟ್ಟು ಉಲ್ಬಣಗೊಳಿಸಬೇಕೆಂದು ಬಯಸುತ್ತಾರೆನೋ ಎಂದು ಅವರು ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications