ಪಕ್ಷ ವಿರೋಧಿ ಚಟುವಟಿಕೆ: ಎನ್ಸಿಪಿಯಿಂದ ಪ್ರಪುಲ್ ಪಟೇಲ್, ಸುನಿಲ್ ತಟ್ಕರೆ ಉಚ್ಚಾಟನೆ
ಮುಂಬೈ, ಜುಲೈ. 03: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಅಧ್ಯಕ್ಷ ಶರದ್ ಪವಾರ್ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ಅವರನ್ನು ಉಚ್ಚಾಟನೆ ಮಾಡಿದ ನಂತರ, ಅಜಿತ್ ಪವಾರ್ ಬಣವು ಸುನೀಲ್ ತಟ್ಕರೆ ಅವರನ್ನು ಮಹಾರಾಷ್ಟ್ರ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದೆ.
ಸೋಮವಾರ ಸಂಜೆ, ಶರದ್ ಪವಾರ್ ಅವರು ತಮ್ಮ ಟ್ವೀಟ್ನಲ್ಲಿ, "ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಎನ್ಸಿಪಿ ಪಕ್ಷದ ಸದಸ್ಯರ ನೋಂದಣಿಯಿಂದ ಸುನೀಲ್ ತಟ್ಕರೆ ಮತ್ತು ಪ್ರಫುಲ್ ಪಟೇಲ್ ಅವರ ಹೆಸರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ ನಾನು ಈ ಮೂಲಕ ಉಚ್ಛಾಟನೆ ಮಾಡಲು ಆದೇಶಿಸುತ್ತೇನೆ" ಎಂದಿದ್ದಾರೆ.

ಈ ಟ್ವೀಟ್ನ ಕೆಲವೇ ಕ್ಷಣಗಳಲ್ಲಿ, ಎನ್ಸಿಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸಂಸದ ಪ್ರಫುಲ್ ಪಟೇಲ್ ಅವರು ತಮ್ಮ ಬಣ ಸುನೀಲ್ ತಟ್ಕರೆ ಅವರನ್ನು ಮಹಾರಾಷ್ಟ್ರದ ಹೊಸ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ ಎಂದು ಘೋಷಿಸಿದ್ದಾರೆ. ಅಜಿತ್ ಪವಾರ್ ಅವರು ವಿಧಾನಸಭೆಯಲ್ಲಿ ಎನ್ಸಿಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದಲ್ಲಿ ಸಂಘಟನಾ ಬದಲಾವಣೆ ಮಾಡುವ ಅಧಿಕಾರ ಸುನೀಲ್ ತಟ್ಕರೆ ಅವರಿಗೆ ಇರುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಪ್ರಫುಲ್ ಪಟೇಲ್ ಹೇಳಿದ್ದಾರೆ. ಭಾನುವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್ಸಿಪಿ ನಾಯಕರಲ್ಲಿ ಸುನೀಲ್ ತಟ್ಕರೆ ಅವರ ಪುತ್ರಿ ಅದಿತಿ ತಟ್ಕರೆ ಕೂಡ ಸೇರಿದ್ದಾರೆ. ಸುನೀಲ್ ತಟ್ಕರೆ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
"ಮಹಾರಾಷ್ಟ್ರದಲ್ಲಿ ಪಕ್ಷವನ್ನು ಬಲಪಡಿಸುತ್ತೇನೆ. ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದೇನೆ. ಎಲ್ಲಾ ಶಾಸಕರು ಮತ್ತು ಜಿಲ್ಲಾ ಪರಿಷತ್ ಮುಖಂಡರ ಸಭೆಯನ್ನೂ ಕರೆದಿದ್ದೇನೆ" ಎಂದು ಸುನೀಲ್ ತಟ್ಕರೆ ಹೇಳಿದ್ದಾರೆ.
I, as the National President, Nationalist Congress Party hereby order removal of the names of Shri Sunil Tatkare and Shri Praful Patel from the Register of Members of NCP Party for anti-party activities.@praful_patel @SunilTatkare
— Sharad Pawar (@PawarSpeaks) July 3, 2023
ಪಕ್ಷ ಮತ್ತು ಅದರ ಚಿಹ್ನೆ ಬಂಡಾಯ ಬಣಕ್ಕೆ ಸೇರಿದ್ದು, ಮಹಾರಾಷ್ಟ್ರದ ಒಳಿತಿಗಾಗಿ ನಾವು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಅಜಿತ್ ಪವಾರ್ ಹೇಳಿದ್ದಾರೆ. ಎನ್ಸಿಪಿಯ ಬಹುಪಾಲು ಶಾಸಕರು ತಮ್ಮೊಂದಿಗೆ ಇದ್ದಾರೆ, ಅದಕ್ಕಾಗಿಯೇ ನಾನು ಉಪ ಮುಖ್ಯಮಂತ್ರಿಯಾದೆ ಎಂದು ಅವರು ಹೇಳಿದ್ದಾರೆ. ಇದರ ಜೊತೆಗೆ ಶರದ್ ಪವಾರ್ ಎನ್ಸಿಪಿಯ ರಾಷ್ಟ್ರೀಯ ಅಧ್ಯಕ್ಷರೇ ಎಂದೂ ಅವರು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅನಿಲ್ ಪಾಟೀಲ್ ಎನ್ಸಿಪಿಯ ವಿಪ್ ಆಗಿ ಮುಂದುವರಿಯಲಿದ್ದಾರೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ. ಪ್ರಫುಲ್ ಪಟೇಲ್ ಅವರನ್ನು ಶರದ್ ಪವಾರ್ ಅವರು ಎನ್ಸಿಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಇತ್ತೀಚೆಗೆ ನೇಮಿಸಿದ್ದರು. ಅವರು ಶೀಘ್ರದಲ್ಲೇ ದೆಹಲಿಯಲ್ಲಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆಯುತ್ತಾರೆ ಎಂಬ ವದಂತಿ ಇದೆ.
ಸೋಮವಾರ ಮುಂಜಾನೆ, ಎನ್ಸಿಪಿಯ ಸುಪ್ರಿಯಾ ಸುಳೆ ಅವರು ಭಾನುವಾರ ಸುನೀಲ್ ತಟ್ಕರೆ ಮತ್ತು ಪ್ರಫುಲ್ ಪಟೇಲ್ ಅವರು ಪಕ್ಷದ ಸಂವಿಧಾನ ಮತ್ತು ನಿಯಮಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ. ಇದು ಪಕ್ಷದ ಸದಸ್ಯತ್ವದಿಂದ ತೊರೆಯಲು ಮತ್ತು ಅನರ್ಹತೆಗೆ ಸಮಾನವಾಗಿದೆ ಎಂದು ಹೇಳಿದ್ದರು. "ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ" ಪ್ರಫುಲ್ ಪಟೇಲ್ ಮತ್ತು ಸುನೀಲ್ ತಟ್ಕರೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಮತ್ತು ಅನರ್ಹತೆ ಅರ್ಜಿಯನ್ನು ಸಲ್ಲಿಸುವಂತೆ ಅವರು ತಮ್ಮ ತಂದೆ ಮತ್ತು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಮನವಿ ಮಾಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications