ಮಹಾರಾಷ್ಟ್ರ: EVM ಲೋಪದ ವಿರುದ್ಧ ಶರದ್ ಪವಾರ್ ಮಹಾ ಅಭಿಯಾನ, ಶೀಘ್ರವೇ ಕೋರ್ಟ್ ಮೊರೆ
ಮುಂಬೈ, ನವೆಂಬರ್ 26: ಮಹಾರಾಷ್ಟ್ರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿ ಮೈತ್ರಿಕೂಟಕ್ಕೆ ನಿರೀಕ್ಷಿತ ಬಹುಮತ ಲಭಿಸಿದೆ. ಇದರ ವಿರುದ್ಧ ಮಹಾ ವಿಕಾಸ್ ಅಘಾಡಿಗೆ ಸೋಲಾಗಿದೆ. ಈ ಸೋಲಿನ ಬಳಿಕ ಪರಾಭವ ಅಭ್ಯರ್ಥಿಗಳು ಇವಿಎಂ ಮತಯಂತ್ರಗಳು ಸರಿ ಇಲ್ಲ. ಇವಿಎಂ ಮೇಲೆ ವಿಪಕ್ಷಗಳೂ ಆರೋಪ ಮಾಡಿವೆ. ಹೀಗಾಗಿ ಎನ್ಸಿಪಿ ನಾಯಕ ಶರದ್ ಪವಾರ್ ನೇತೃತ್ವದಲ್ಲಿ ಮಹಾ ಅಭಿಯಾಣ (ಚಳವಳಿ) ನಡೆಸಲು ಪ್ಲಾನ್ ನಡೆದಿದೆ ಎಂದು ತಿಳಿದು ಬಂದಿದೆ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ-ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಸದರಿ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಕಡಿಮೆ ಮತಗಳನ್ನು ಪಡೆಯುವ ಮೂಲಕ ಕಳಪೆ ಪ್ರದರ್ಶನ ನೀಡಿದ್ದಾರೆ. ಅದರ ಬೆನ್ನಲ್ಲೆ ಇವಿಎಂ ಮಷಿನ್ ಗಳ ಮೇಲೆ ಪರಾಭವ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಹೆಚ್ಚು ಮತಗಳನ್ನು ಪಡೆದು ಗೆದ್ದಿರುವ ಶಾಸಕ ಜಿತೇಂದ್ರ ಅವ್ಹಾದ್ ಅವರು ಮತಗಳ ವ್ಯತ್ಯಾಸ ಕುರಿತು ಪೋಸ್ಟ್ ಹಂಚಿಕೊಂಡಿದ್ದರು.

ಇದೆಲ್ಲ ಬೆಳವಣಿಗೆ ಮಧ್ಯೆ ಶರ್ ಪವಾರ್ ಅವರು ಮಂಗಳವಾರ ಪಕ್ಷದ ನೂತನವಾಗಿ ಚುನಾವಣೆಯಲ್ಲಿ ಗೆದ್ದ ಶಾಸಕರ ಜೊತೆಗೆ ಹಾಗೂ ಸೋತ ಅಭ್ಯರ್ಥಿಗಳ ಜೊತೆಗೆ ಪ್ರಮುಖ ಸಭೆ ನಡೆಸಿದರು. ಮುಂಬೈನ ಯಶವಂತರಾವ್ ಚವಾಣ್ ಕೇಂದ್ರದಲ್ಲಿ ನಡೆದ ಸಭೆಯಲ್ಲಿ ಸೋತ ಅಭ್ಯರ್ಥಿಗಳು ಇವಿಎಂ ಯಂತ್ರಗಳ ಸರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಆಡಳಿತ ಪಕ್ಷದ ಕೈವಾಡದ ಬಗ್ಗೆ ಶಂಕೆ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಳಸಲಾದ ಇವಿಎಂ ಸರಿಯಾಗಿಲ್ಲ. ಅವವುಗಳ ಸಮರ್ಪಕ ಕಾರ್ಯಗಳಿಂದಾಗಿ ಎನ್ಸಿಪಿ ಪಕ್ಷದ ಅಭ್ಯರ್ಥಿಗಳು ಸೋಲುವಂತಾಗಿದೆ. ಇವಿಎಂಗಳ ಬಗ್ಗೆ ವಿವಿಧ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾನೂನು ಹೋರಾಟ ನಡೆಸುವ ಬಗ್ಗೆ ಶರದ್ ಪವಾರ್ ಅವರು ಸಭೆಗೆ ತಿಳಿಸಿದರು ಎನ್ನಲಾಗಿದೆ.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಇವಿಎಂಗಳಿಗೆ ಸಂಬಂಧಿಸಿದ ದೂರುಗಳ ಸಮೇತವಾಗಿ ತಾವು ನ್ಯಾಯಾಲಯ ಮೆಟ್ಟಿಲೇರಲು ಸಜ್ಜಾಗಿರುವುದಾಗಿ ಎನ್ಸಿಪಿ-ಎಸ್ಪಿ ನಾಯಕರು ಒಕ್ಕೋರಲಿನಿಂದ ತಿಳೀಸಿದರು. ಈ ಕುರಿತು ಸೂಕ್ತ ವಕೀಲರ ತಂಡ ನೇಮಕ ಮಾಡಲಾಗುವುದು ಎಂದು ಸಭೆಯಲ್ಲಿ ಶರದ್ ಪವಾರ್ ತಿಳಿಸಿದರು.
ಸಭೆಯ ನಂತರ ಶಾಸಕ ಜಿತೇಂದ್ರ ಅವ್ಹಾದ್ ಅವರು ಮಾತನಾಡಿ, ಇವಿಎಂ ವಿಚಾರವಾಗಿ ಪಕ್ಷವು ಸಾರ್ವಜನಿಕ ಆಂದೋಲನ ಪ್ರಾರಂಭಿಸಲು ಚಿಂತನೆ ನಡೆಸಿದೆ. ಈ ಆಂದೋಲನದ ನೇತೃತ್ವ ವಹಿಸಲು ಶರದ್ ಪವಾರ್ ಅವರನ್ನು ವಿನಂತಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಎರಡು ಬಣಗಳಲ್ಲಿ ಮಹಾಯುತಿಗೆ ಅತ್ಯಧಿಕ ಸೀಟು
ಮಹಾರಾಷ್ಟ್ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಶಿವಸೇನೆ (ಯುಬಿಟಿ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ ಪವಾರ್ ಬಣ, ಬಣ, ಉದ್ಧವ್ ಠಾಕ್ರೆ ಎಲ್ಲರೂ ಕೂಡಿಕೊಂಡು ಮಹಾವಿಕಾಸ್ ಅಘಾಡಿ ಮೈತ್ರಿಕೂಟ ರಚಿಸಿಕೊಂಡಿದ್ದರು.
ಇತ್ತ ಬಿಜೆಪಿ ಹಾಗೂ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ- ಅಜಿತ್ ಪವಾರ್ ಬಣ-), ಶಿವಸೇನಾ (ಏಕ್ನಾಥ್ ಶಿಂಧೆ ಬಣ) ನೇತೃತ್ವದಲ್ಲಿ ಮಹಾಯುತಿ ರಚಿಸಲಾಗಿತ್ತು. ಚುನಾವಣೆಯಲ್ಲಿ ಒಟ್ಟು 288 ಕ್ಷೇತ್ರಗಳ ಪೈಕಿ ಎನ್ಡಿಎ ಮೈತ್ರಿಕೂಟವು 235 ಸೀಟು ಪಡೆದರೆ, ಮಹಾವಿಕಾಸ್ ಅಘಾಡಿ (ಇಂಡಿಯಾ) ಕೂಟವು ಕೇವಲ 49 ಸೀಟು ಪಡೆದುಕೊಂಡು ಹೀನಾಯ ಸೋಲುಂಡಿತು. ಹೀಗಾಗಿಯೇ ಪರಾಜಿತ ಅಭ್ಯರ್ಥಿಗಳು ಇವಿಎಂ ಮೇಲೆ ದೂರುತ್ತಿದ್ದಾರೆ.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications