ಟ್ವಿಟರಿಗರ ಕೆಂಗಣ್ಣಿಗೆ ಗುರಿಯಾದ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ
ನವದೆಹಲಿ, ಅಕ್ಟೋಬರ್ 21: ರಾಷ್ಟ್ರೀಯ ಮಹಿಳಾ ಆಯೋಗದ (ಎನ್ಸಿಡಬ್ಲ್ಯೂ) ಮುಖ್ಯಸ್ಥೆ ರೇಖಾ ಶರ್ಮಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರು ತಮ್ಮ ಹಳೆಯ ಟ್ವೀಟ್ಗಳನ್ನು ಅಳಿಸಿಹಾಕಿದ್ದಾರೆ.
ತಮ್ಮ ಹಳೆಯ ಟ್ವೀಟ್ಗಳಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವುದು ಮತ್ತು ಕೀಳುಮಟ್ಟದ ಸೆಕ್ಸಿಸ್ಟ್ ಜೋಕ್ಗಳನ್ನು ಹಂಚಿಕೊಂಡಿರುವುದು ಟ್ವಿಟ್ಟಗರ ಕೆಂಗಣ್ಣಿಗೆ ಗುರಿಯಾಗಿತ್ತು. ಅವರ ಟ್ವೀಟ್ಗಳ ಸ್ಕ್ರೀನ್ಶಾಟ್ಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
2012ರಿಂದ 2014ರವರೆಗೆ ಅವರು ಮಾಡಿದ್ದ ಟ್ವೀಟ್ಗಳು ವೈರಲ್ ಆಗಿವೆ. ಇದರಲ್ಲಿ ಅವರು ಮಹಿಳೆಯರನ್ನು ಲೇವಡಿ ಮಾಡುವ, ಪ್ರಧಾನಿ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕ ರಾಜಕಾರಣಿಗಳನ್ನು ಅಣಕಿಸುವ ಟ್ವೀಟ್ಗಳನ್ನು ಮಾಡಿದ್ದರು.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಮುಂಬೈನಲ್ಲಿ ಮಂಗಳವಾರ ಭೇಟಿ ಮಾಡಿದ್ದ ರೇಖಾ ಶರ್ಮಾ, 'ಲವ್ ಜಿಹಾದ್' ಹೆಚ್ಚಳವಾಗಿರುವ ಬಗ್ಗೆ ಹಾಗೂ ರಾಜ್ಯದ ಇತರೆ ಸಮಸ್ಯೆಗಳ ಕುರಿತು ಚರ್ಚಿಸಿದ್ದರು. ಒಪ್ಪಿತ ಅಂತರ್ ಧರ್ಮೀಯ ಮದುವೆಗೂ ಲವ್ ಜಿಹಾದ್ಗೂ ತುಂಬಾ ವ್ಯತ್ಯಾಸವಿದೆ ಎಂದು ರೇಖಾ ಶರ್ಮಾ ಹೇಳಿಕೆ ನೀಡಿದ್ದರು. ಲವ್ ಜಿಹಾದ್ ಕುರಿತಾದ ಹೇಳಿಕೆಗೆ ಅವರ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅದರ ಬೆನ್ನಲ್ಲೇ ಅವರ ಹಳೆಯ ಟ್ವೀಟ್ಗಳು ಮುನ್ನೆಲೆಗೆ ಬಂದಿವೆ.

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿರುವ ರೇಖಾ ಶರ್ಮಾ ಈ ಹಿಂದೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಮಹಿಳೆಯರ ವಿರುದ್ಧ ತುಚ್ಛವಾಗಿ ಮಾತನಾಡಿರುವುದು ಅನೇಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆ ಹ್ಯಾಕ್ ಆಗಿದೆ ಎಂದು ರೇಖಾ ಶರ್ಮಾ ಸಮಜಾಯಿಷಿ ನೀಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications