ಹೋಳಿ ಗಿಫ್ಟ್ : ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ನವದೆಹಲಿ, ಮಾರ್ಚ್ 23: ಕೇಂದ್ರ ಸರ್ಕಾರಿ ನೌಕರರಿಗೆ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೋಳಿ ಹಬ್ಬದ ಗಿಫ್ಟ್ ನೀಡಿದೆ. ತುಟ್ಟಿ ಭತ್ಯೆ(ಡಿಎ) ಹೆಚ್ಚಳವನ್ನು ಶೇ 119 ರಿಂದ ಶೇ 125ಕ್ಕೆ ಏರಿಸಲಾಗಿದೆ.
ಕೈಗಾರಿಕಾ ಕಾರ್ಮಿಕರಿಗೆ ಸಂಬಂಧಿಸಿದ ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕದ (CPI-IW data) ಆಧಾರದಲ್ಲಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗುತ್ತದೆ. [ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ ಯಾವಾಗ ಆಗಿತ್ತು?]
ಜನವರಿ-ಡಿಸೆಂಬರ್ 2015 ರತನಕ ಸೂಚ್ಯಂಕ ಶೇ6.73ರಷ್ಟಿತ್ತು. ಹೀಗಾಗಿ ಶೇ 6 ಅಂಕಗಳಿಂದ 125% ತನಕ ಏರಿಕೆ ನಿರೀಕ್ಷಿಸಬಹುದು ಎಂದು ಕೇಂದ್ರ ಸರ್ಕಾರಿ ನೌಕರರು ಹಾಗೂ ಉದ್ಯೋಗಿಗಳ ಒಕ್ಕೂಟದ ಅಧ್ಯಕ್ಷ ಕೆಕೆಎನ್ ಕುಟ್ಟಿ ಹೇಳಿದ್ದಾರೆ.

ಪರಿಷ್ಕೃತ dearness allowance(ಡಿಎ) ದರಗಳು ಜನವರಿ 01, 2016ರಿಂದ ಜಾರಿಗೆ ಬರಲಿದ್ದು 48 ಲಕ್ಷ ಉದ್ಯೋಗಿಗಳು ಹಾಗೂ 55 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ. ಕಳೆದ ಸೆಪ್ಟೆಂಬರ್ 2015ರಲ್ಲಿ ಡಿಎ ದರವನ್ನು ಶೇ 113ರಿಂದ ಶೇ 119ಕ್ಕೆ (ಜುಲೈ 1, 2015ರಿಂದ ಅನ್ವಯವಾಗುವಂತೆ) ಹೆಚ್ಚಿಸಲಾಗಿತ್ತು.
ತುಟ್ಟಿ ಭತ್ಯೆ (dearness allowance): ತುಟ್ಟಿ ಭತ್ಯೆಯನ್ನು 12 ತಿಂಗಳಿನ ಗ್ರಾಹಕ ಬೆಲೆ ಸೂಚ್ಯಂಕದ ಆಧಾರದ ಮೇರೆಗೆ ನಿಗದಿಪಡಿಸಲಾಗುತ್ತದೆ. ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗವಾಗಿದೆ ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.(ಒನ್ ಇಂಡಿಯಾ ಸುದ್ದಿ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications