ಆರು ರಾಜ್ಯಗಳು ವಿಶೇಷ ಆರ್ಥಿಕ ಅನುದಾನವನ್ನು ಪಡೆಯುವ ಸಾಧ್ಯತೆ
ನವದೆಹಲಿ, ಜುಲೈ 17: ವಿಶೇಷ ವರ್ಗದ ಸ್ಥಾನಮಾನದ ಚರ್ಚೆಗಳ ನಡುವೆ, ಬೆಳವಣಿಗೆಗಳ ಸೂಚ್ಯಂಕದಲ್ಲಿ ಕೊರತೆಯಿರುವ ಸುಮಾರು ಆರು ರಾಜ್ಯಗಳಿಗೆ ವಿಶೇಷ ಆರ್ಥಿಕ ಅನುದಾನವನ್ನು ನೀಡುವ ಬಗ್ಗೆ ಕೇಂದ್ರದ ಎನ್ಡಿಎ ಸರ್ಕಾರ ಪರಿಗಣಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷೇತ್ರವಾರು ಬೆಳವಣಿಗೆಗಳಿಗಾಗಿ ಮುಂಬರುವ ಬಜೆಟ್ನಲ್ಲಿ ಕ್ರೋಢೀಕೃತ ವಿಶೇಷ ಆರ್ಥಿಕ ಅನುದಾನವನ್ನು ಪಡೆಯಬಹುದಾದ ಈ ಆರು ರಾಜ್ಯಗಳಲ್ಲಿ ಬಿಹಾರ ಕೂಡ ಒಂದು. ಅಂತಹ ಅನುದಾನವನ್ನು ಪಡೆಯುವ ಇತರ ರಾಜ್ಯಗಳಲ್ಲಿ ಆಂಧ್ರ ಪ್ರದೇಶ, ಜಾರ್ಖಂಡ್, ಛತ್ತೀಸ್ಗಢ ಮತ್ತು ಒಡಿಶಾ ಮತ್ತು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷಗಳಲ್ಲಿ ಒಂದಾಗಿರುವ ಜೆಡಿಯು ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದು, ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಈ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಸಿಗುವುದು ಗ್ಯಾರಂಟಿ ಎನ್ನಲಾಗಿದೆ. ಚುನಾವಣಾ ದೃಷ್ಟಿಯಿಂದಲೂ ಇದು ಕೆಲಸ ಮಾಡಬಹುದು.
ಇನ್ನು, ಮಂಗಳವಾರ ದೆಹಲಿಗೆ ಭೇಟಿ ನೀಡಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಮ್ಮ ರಾಜ್ಯಕ್ಕೆ ಕೆಲವು ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಪೂರ್ಣಗೊಳಿಸಲು ವಿಶೇಷ ಆರ್ಥಿಕ ಅನುದಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಬಿಹಾರದ ಜೊತೆಗೆ ಆಂಧ್ರಪ್ರದೇಶಕ್ಕೂ ವಿಶೇಷ ಸ್ಥಾನಮಾನ ಸಿಗುವ ಸಾಧ್ಯತೆಯಿದೆ.
ಬಿಹಾರಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯು ಅದರ ಕಳಪೆ ಆರ್ಥಿಕ ಸ್ಥಿತಿ ಮತ್ತು ಅದರ ಪ್ರಮುಖ ಭಾಗವು ಪ್ರವಾಹ ಪೀಡಿತವಾಗಿದೆ ಎಂಬ ಆಧಾರದ ಮೇಲೆ ದೀರ್ಘಕಾಲದಿಂದ ಸರ್ಕಾರದ ಮುಂದಿದೆ. "ನೀತಿ ಆಯೋಗವು ಕೆಲವು ಮಾನದಂಡಗಳನ್ನು ನಿಗದಿಪಡಿಸಿದ ನಂತರ ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದು ಈಗ ಕಾರ್ಯಸಾಧ್ಯವಲ್ಲ.
ಆದರೆ, ಕೇಂದ್ರದ ಎನ್ಡಿಎ-III ಸರ್ಕಾರವು ಬಿಹಾರ ಅಥವಾ ಆಂಧ್ರಪ್ರದೇಶದ ಎಲ್ಲಾ ರಾಜ್ಯಗಳ ಅಭಿವೃದ್ಧಿಗೆ ಬದ್ಧವಾಗಿದೆ. ಮುಂಬರುವ ಬಜೆಟ್ನಲ್ಲಿ 5 ರಿಂದ 6 ರಾಜ್ಯಗಳಿಗೆ ವಿಶೇಷ ಆರ್ಥಿಕ ಅನುದಾನ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ" ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರು ರಾಜ್ಯಗಳು ವಿಶೇಷ ಆರ್ಥಿಕ ಅನುದಾನ
ಕೇಂದ್ರವು ಬಜೆಟ್ನಲ್ಲಿ ಪ್ರತಿ ರಾಜ್ಯದಿಂದ ಸಲಹೆಗಳನ್ನು ಕೇಳಿದೆ. ಇದರ ಭಾಗವಾಗಿ, ಕೆಲವು ರಾಜ್ಯಗಳು ವಿಶೇಷ ಆರ್ಥಿಕ ಬೆಂಬಲಕ್ಕಾಗಿ ಮನವಿ ಮಾಡಿವೆ. ಈ ವರ್ಷ ವಿಧಾನಸಭಾ ಚುನಾವಣೆಗೆ ಹೋಗಲು ಸಿದ್ಧವಾಗಿರುವ ಜಮ್ಮು ಮತ್ತು ಕಾಶ್ಮೀರ ತನ್ನ ಸರ್ವತೋಮುಖ ಅಭಿವೃದ್ಧಿಗಾಗಿ ಏಕೀಕೃತ ಆರ್ಥಿಕ ಪ್ಯಾಕೇಜ್ ಅನ್ನು ಸಹ ಪಡೆಯಬಹುದು ಎಂದು ಹಿರಿಯ ಅಧಿಕಾರಿಯೊಬ್ಬರು ಸುಳಿವು ನೀಡಿದ್ದಾರೆ.
"ವಿಶೇಷ ಸ್ಥಾನಮಾನದ ರೂಪದಲ್ಲಿ ವಿಶೇಷ ಆರ್ಥಿಕ ಬೆಂಬಲಕ್ಕಾಗಿ ಪಿಚ್ ಮಾಡುತ್ತಿರುವ ಬಿಹಾರ ಮತ್ತು ಆಂಧ್ರದಂತಹ ಇತರ ರಾಜ್ಯಗಳು ರಸ್ತೆ, ಕೈಗಾರಿಕೆ, ವಿದ್ಯುತ್, ಉದ್ಯೋಗ ಮತ್ತು ಕೃಷಿಯಂತಹ ವಲಯವಾರು ಅಭಿವೃದ್ಧಿಗೆ ಬಲವಾದ ಆರ್ಥಿಕ ಅನುದಾನವನ್ನು ಪಡೆಯಬಹುದು" ಎಂದು ಅಧಿಕಾರಿ ಹೇಳಿದ್ದಾರೆ.
ವಿಶೇಷ ವರ್ಗದ ಸ್ಥಾನಮಾನಕ್ಕಾಗಿ ಬೇಡಿಕೆಯಿಡುತ್ತಿರುವ ಬಿಹಾರವು ವಿಶೇಷ ಆರ್ಥಿಕ ಅನುದಾನವನ್ನು ಕ್ರೋಢೀಕರಿಸಬಹುದು. ಆಂಧ್ರ ಪ್ರದೇಶ, ಜಾರ್ಖಂಡ್, ಛತ್ತೀಸ್ಗಢ ಮತ್ತು ಒಡಿಶಾ ಮತ್ತು ಜಮ್ಮು & ಕಾಶ್ಮಿರ ಕೇಂದ್ರಾಡಳಿತ ಪ್ರದೇಶಗಳು ಅನುದಾನವನ್ನು ಪಡೆಯುವ ಇತರ ರಾಜ್ಯಗಳು ಎನ್ನಲಾಗಿದೆ. ಇನ್ನು, ನೀತಿ ಆಯೋಗದ ಕೆಲವು ಮಾರ್ಗಸೂಚಿಗಳನ್ನು ರೂಪಿಸಿದ ನಂತರ ಯಾವುದೇ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವುದು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications