ಏಕಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗೊಳಿಸಿದ ಎನ್ ಡಿಎ
ನವದೆಹಲಿ, ಸೆ. 05: ನಿವೃತ್ತ ಯೋಧರ ನಾಲ್ಕು ದಶಕಗಳ ಬೇಡಿಕೆಗೆ ಕೊನೆಗೂ ಬೆಲೆ ಸಿಕ್ಕಿದೆ. ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಏಕಶ್ರೇಣಿ ಏಕ ಪಿಂಚಣಿ(OROP) ಯೋಜನೆ ಜಾರಿಗೊಳಿಸಿ ಶನಿವಾರ ಮಧ್ಯಾಹ್ನ ಪ್ರಕಟಣೆ ಹೊರಡಿಸಿದೆ. ರಕ್ಷಣಾ ಸಚಿವ ಮನೋಹರ್ ಪಾರಿಕ್ಕಾರ್ ಅವರು ಈ ಬಗ್ಗೆ ನೀಡಿದ ಘೋಷಣೆಗೆ ಪ್ರತಿಭಟನಾ ನಿರತ ನಿವೃತ್ತ ಯೋಧರು ಸಮ್ಮತಿಸಿದ್ದಾರೆ.
ನಿವೃತ್ತ ಯೋಧರು ಆ.14 ರಿಂದ ಪಟ್ಟು ಹಿಡಿದು ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಅವರ ಪ್ರತಿಭಟನೆ ತೀವ್ರವಾದ ಹಿನ್ನಲೆಯಲ್ಲಿ ರಕ್ಷಣಾ ಸಚಿವ ಮನೋಹರ್ ಅವರು ಶನಿವಾರ ಬೆಳಗ್ಗೆ ನಿವೃತ್ತ ಯೋಧರ ಜೊತೆಗೆ ಸಮಾಲೋಚನೆ ನಡೆಸಿ ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗೊಳಿಸಿದ್ದಾರೆ. ಕೇಂದ್ರ ಸರ್ಕಾರ 2014ರ ಜುಲೈನಿಂದ ಅನ್ವಯವಾಗುವಂತೆ ಯೋಜನೆಯನ್ನು ಅಧಿಕೃತವಾಗಿ ಘೋಷಿಸಿದೆ.

ಪ್ರತಿ ಎರಡು ವರ್ಷಗಳಿಗೆ ಪಿಂಚಣಿ ಪರಿಷ್ಕರಣೆಯಾಗಬೇಕು ಎಂಬುದು ಯೋಧರ ವಾದವಾಗಿದ್ದರೆ, ಸರ್ಕಾರ ಪ್ರತಿ 5 ವರ್ಷಗಳಿಗೊಮ್ಮೆ ಪರಿಷ್ಕರಣೆ ಮಾಡುವುದಾಗಿ ಹೇಳಿದೆ. ಪ್ರತಿ ಐದು ವರ್ಷಕ್ಕೊಮ್ಮೆ ಪೆನ್ಷನ್ ಪರಿಷ್ಕೃತ ಮಾಡುವ ಒಪ್ಪಂದಕ್ಕೆ ಆರ್ಎಸ್ಎಸ್ ಬಿಜೆಪಿ ಹಾಗೂ ಸಂಘ ಪರಿವಾರದ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಏಕ ಶ್ರೇಣಿ ಏಕ ಪಿಂಚಣಿ ಯೋಜನೆ ಜಾರಿಗೊಂಡಿರುವುದರಿಂದ ಸುಮಾರು 22 ಲಕ್ಷ ನಿವೃತ್ತ ಯೋಧರು ಹಾಗೂ 6 ಲಕ್ಷಕ್ಕೂ ಅಧಿಕ ಹುತಾತ್ಮ ಯೋಧರ ಪತ್ನಿಯರಿಗೆ ಪಿಂಚಣಿ ಸಿಗಲಿದೆ.

ಏಕಶ್ರೇಣಿ- ಏಕ ಪಿಂಚಣಿ ಈ ದಿನದ ಬೆಳವಣಿಗೆ:
* ಈ ಒಂದು ಯೋಜನೆಯ ಜಾರಿಗಾಗಿಯೇ ಸರ್ಕಾರಿ ಬೊಕ್ಕಸಕ್ಕ್ಕೆ 10,000 ದಿಂದ 12,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಹಾಗಾಗಿ ಯೋಜನೆ ಜಾರಿ ವಿಳಂಬವಾಯಿತು.
* 'ರಕ್ಷಣಾ ಖಾತೆಯಲ್ಲಿ ವಿಆರ್ಎಸ್ನಂಥ (ಸ್ವಯಂ ನಿವೃತ್ತಿ ಯೋಜನೆ) ಇಲ್ಲ, ವಿಆರ್ ಎಸ್ ಪಡೆದವರಿಗೆ ಏಕಶ್ರೇಣಿ- ಏಕ ಪಿಂಚಣಿ ಯೋಜನೆ ಪ್ರಯೋಜನ ಸಿಗುವುದಿಲ್ಲ.
* ಸಶಸ್ತ್ರ ಪಡೆಗಳ ನಿವೃತ್ತ ಸೇನಾ ಸಿಬ್ಬಂದಿ ಜಂತರ್ ಮಂತರ್ನಲ್ಲಿ ನಡೆಸುತ್ತಿರುವ ಚಳವಳಿ ಶನಿವಾರ 83ನೇ ದಿನ ಪ್ರವೇಶಿಸಿದೆ.
* ನಿವೃತ್ತ ಯೋಧರು ಸರ್ಕಾರದ ಮುಂದಿಟ್ಟಿದ 6 ಬೇಡಿಕೆಗಳ ಪೈಕಿ ಕೆಲವು ಸರ್ಕಾರದ ಒಪ್ಪಿಗೆ ಸಿಗದ ಕಾರಣ ಪ್ರತಿಭಟನೆ ಮುಂದುವರೆಯುವ ಸಾಧ್ಯತೆ ಕಂಡು ಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications