ಎನ್ ಡಿಟಿವಿ ಶಿಕ್ಷೆಗೆ ತಾತ್ಕಾಲಿಕ ತಡೆಯೊಡ್ಡಿದ ಕೇಂದ್ರ ಸರಕಾರ
ನಿಷೇಧದ ಶಿಕ್ಷೆ ಪ್ರಶ್ನಿಸಿ ಎನ್ ಡಿಟಿವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನವೆಂಬರ್ 9ರಂದು ಹೇರಿದ್ದ ಈ ಶಿಕ್ಷೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಈ ನಿರ್ಧಾರ ಭಾರೀ ಪರಿಣಾಮ ಬೀರುತ್ತೆ ಎಂದು ಹೇಳಿತ್ತು.
ನವದೆಹಲಿ, ನವೆಂಬರ್ 8: ನಿಷೇಧ, ಆ ನಂತರ ತೆರವು. ಎನ್ ಡಿಟಿವಿ ಹಿಂದಿ ಚಾನಲ್ ಮೇಲೆ ಮೊದಲಿಗೆ ಪ್ರಸಾರ ಸ್ಥಗಿತದ ಶಿಕ್ಷೆ ಘೋಷಿಸಿದ್ದು, ಆ ನಂತರ ಅದನ್ನು ತೆರವು ಮಾಡಿದ್ದು ಟ್ವಿಟರ್ ನಲ್ಲಿ ಭಾರಿ ಸುದ್ದಿಯಾಗುತ್ತಿದೆ. ಸೋಮವಾರ ಅಷ್ಟೇ ಮಾಧ್ಯಮದವರ ಜತೆಗೆ ಮಾತನಾಡಿದ್ದ ಸಚಿವ ವೆಂಕಯ್ಯ ನಾಯ್ಡು, ಶಿಕ್ಷೆಯನ್ನು ಸಮರ್ಥಿಸಿಕೊಂಡಿದ್ದರು.
ಆದರೆ, ಸಂಜೆ ಹೊತ್ತಿಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮಾಹಿತಿ ಪ್ರಕಾರ, ನಿಷೇಧವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಈ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಈ ನಿರ್ಧಾರದ ಹಿಂದಿನ ತರ್ಕ ಏನು ಎಂಬುದೇ ಹಲವರ ಪ್ರಶ್ನೆ.[ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಎನ್ ಡಿಟಿವಿ]

ಸರಕಾರ ಈ ರೀತಿ ನಿಷೇಧ ತೆರವು ಮಾಡತ್ತೆ ಅನ್ನೋದಾದರೆ ಹಾಕಿದ್ದಾದರೂ ಏಕೆ? ಎಂದು ಪ್ರಶ್ನಿಸಿದ್ದಾರೆ. ಸಾಯಂಕಾಲದ ಹೊತ್ತಿಗೆಲ್ಲ ತಮ್ಮ ನಿರ್ಧಾರ ಬದಲಿಸೋ ಹಾಗಿದ್ದರೆ ಮಾಧ್ಯಮದ ಎದುರು ಅಷ್ಟೊಂದು ಸಮರ್ಥನೆ ಯಾಕೆ ಮಾಡಿಕೊಳ್ಳಬೇಕಿತ್ತು ಎಂಬುದು ಸದ್ಯಕ್ಕೆ ಚರ್ಚೆಯಲ್ಲಿದೆ.[ಎನ್ ಡಿಟಿವಿಗೆ 24 ಗಂಟೆ ಶಿಕ್ಷೆ: ನಿರ್ಧಾರಕ್ಕೆ ವ್ಯಾಪಕ ಖಂಡನೆ]
ನಿಷೇಧದ ಶಿಕ್ಷೆ ಪ್ರಶ್ನಿಸಿ ಎನ್ ಡಿಟಿವಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ನವೆಂಬರ್ 9ಕ್ಕೆ ಹೇರಿದ್ದ ಈ ಶಿಕ್ಷೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಈ ನಿರ್ಧಾರ ಭಾರೀ ಪರಿಣಾಮ ಬೀರುತ್ತೆ ಎಂದು ಎನ್ ಡಿಟಿವಿ ಹೇಳಿತ್ತು. ಈ ಅರ್ಜಿಯು ಸರಕಾರದ ನಿರ್ಧಾರದ ಮೇಲೆ ಪರಿಣಾಮ ಬೀರಿದೆಯಾ? ನಿರ್ಧಾರದಲ್ಲಿ ಬದಲಾವಣೆ ಅಲ್ಲ, ಆ ತೀರ್ಮಾನವನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದೇವೆ ಎಂದು ಸರಕಾರದ ಪರವಾಗಿ ಹೇಳಲಾಗಿದೆ.
ನಾಯ್ಡು ಹಾಗೂ ಚಾನಲ್ ನ ಪ್ರನಯ್ ರಾಯ್ ಮಧ್ಯೆ ಸಭೆ ನಡೆದಿತ್ತು. ಆ ಸಂದರ್ಭದಲ್ಲೇನೂ ಚಾನಲ್ ಸ್ಪಷ್ಟೀಕರಣವನ್ನು ಪೂರ್ಣವಾಗಿ ಒಪ್ಪಿಲ್ಲ. ಆ ನಂತರ ಸುಪ್ರೀಂ ಕೋರ್ಟ್ ಗೆ ಚಾನಲ್ ಸಲ್ಲಿಸಿದ ಅರ್ಜಿ ವಿಚಾರಣೆಯ ತೀರ್ಪು ಗಮನಿಸಿ, ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ.[NDTV ಮೇಲೆ ಕೇಂದ್ರ ಸರಕಾರದ 'ಸರ್ಜಿಕಲ್ ಸ್ಟ್ರೈಕ್': ಒಂದು ದಿನ ಬ್ಯಾನ್!]
ಮಂಗಳವಾರ ಎನ್ ಡಿಟಿವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಎಲ್ಲರ ಕಣ್ಣು ಆ ಕಡೆಗಿದೆ. ಸರಕಾರ ಕೂಡ ನಿಷೇಧ ಶಿಕ್ಷೆಯ ಸಮರ್ಥನೆ ಮಾಡಿಕೊಳ್ಳುವ ನಿರೀಕ್ಷೆ ಇದೆ. ಪಠಾಣ್ ಕೋಟ್ ನಲ್ಲಿ ನಡೆದಿದ್ದ ಉಗ್ರಗಾಮಿಗಳ ದಾಳಿ ಸುದ್ದಿಯನ್ನು ಬಿತ್ತರಿಸಿದ್ದ ಎನ್ ಡಿಟಿವಿ, ಕೇಬಲ್ ಟಿವಿ ಕಾಯ್ದೆ ಉಲ್ಲಂಘಿಸಿದೆ ಎಂದು ಒಂದು ದಿನದ ಮಟ್ಟಿಗೆ (ನವೆಂಬರ್ 9) ಪ್ರಸಾರ ಸ್ಥಗಿತದ ಶಿಕ್ಷೆ ವಿಧಿಸಿತ್ತು.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications