ಕಾಂಗ್ರೆಸ್ಸಿನಿಂದ ಮಣಿಶಂಕರ್ ಅಯ್ಯರ್ ಅಮಾನತು
ಬೆಂಗಳೂರು, ಡಿಸೆಂಬರ್ 07: ಗುಜರಾತ್ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರದ ಅಂತಿಮ ದಿನದಂದು ಕಾಂಗ್ರೆಸ್ ಹಾಗೂ ಬಿಜೆಪಿಯ ವಾಕ್ಸಮರ ತಾರಕಕ್ಕೇರಿದೆ. ಹಿರಿಯ ಕಾಂಗ್ರೆಸ್ಸಿಗ ಮಣಿಶಂಕರ್ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿದ್ದಕ್ಕೆ ಭಾರಿ ಬೆಲೆ ತೆತ್ತಿದ್ದಾರೆ. ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಮಣಿಶಂಕರ್ ಅಯ್ಯರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು 'ನೀಚ' ಎಂದು ಕರೆದಿದ್ದಲ್ಲದೆ 'ಸಭ್ಯತೆ' ಇಲ್ಲದವನು ಎಂದು ಹೇಳಿದ್ದರು. ಈ ಬಗ್ಗೆ ಭಾರಿ ಟೀಕೆಗಳು ವ್ಯಕ್ತವಾಗಿತ್ತು.

ಇದಾದ ಬಳಿಕ ಕ್ಷಮೆ ಕೋರಿದ್ದ ಮಣಿಶಂಕರ್, ನನಗೆ ಮೋದಿ ಅವರ ಜಾತಿ, ಧರ್ಮದ ಬಗ್ಗೆ ಗೊತ್ತಿಲ್ಲ, ನಾನು ಅವರು ನೀಚ ಜಾತಿಯವರು ಎಂದು ಹೇಳಿಲ್ಲ. ನನ್ನ ಮಾತನ್ನು ಬದಲಾಯಿಸಿ, ತಿರುಚಿದ್ದರೆ ನಾನು ಹೊಣೆಗಾರನಲ್ಲ. ಆದರೆ, ಆ ಪದ ಬಳಕೆಯಿಂದ ಯಾರಾಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದರು.
A show cause notice has also been issued to #ManiShankarAiyar by Congress party over his remarks about PM Modi.
— ANI (@ANI) December 7, 2017
ಆದರೆ, ಕಾಂಗ್ರೆಸ್ ಕಠಿಣ ನಿರ್ಧಾರ ಕೈಗೊಂಡಿದ್ದು, ಮಣಿಶಂಕರ್ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಪ್ರಾಥಮಿಕ ಸದಸ್ಯತ್ವವನ್ನು ಅಯ್ಯರ್ ಕಳೆದುಕೊಂಡಿದ್ದಾರೆ. ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದ್ದು, ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಬೇಕಾಗಿದೆ.
ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು ನೀಚ ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಸತ್ಯಂತ ಹೀನಾಯ ರೀತಿಯ ರಾಜಕೀಯವನ್ನು ಮಾಡುತ್ತಿದ್ದಾರೆ ಎಂದು ಎಎನ್ಐ ಜತೆ ಮಾತನಾಡುತ್ತಾ ಅಯ್ಯರ್ ಹೇಳಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications