ಅಡ್ವಾಣಿ ಬುದ್ಧಿಮಾತು ರಾಜೇ, ಸುಷ್ಮಾಗೆ ಕೇಳಿಸುವುದೇ?
ನವದೆಹಲಿ, ಜೂ.28: ಹಗರಣದಲಿ ಸಿಲುಕಿರುವ ಸುಷ್ಮಾ ಸ್ವರಾಜ್ ಹಾಗೂ ವಸುಂಧರಾ ರಾಜೇ ಅವರಿಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಬುದ್ಧಿಮಾತು ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನಪ್ರತಿನಿಧಿಗಳು ಪ್ರಾಮಾಣಿಕರಾಗಿರಬೇಕು. ಹವಾಲಾ ಕೇಸಿನಲ್ಲಿ ನನ್ನ ಹೆಸರು ಕೇಳಿ ಬಂದಾಗ ನಾನು ತಕ್ಷಣ ರಾಜೀನಾಮೆ ನೀಡಿದ್ದೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. [ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ನಾಲ್ಕು ಘಟವಾಣಿಯರು]
"ರಾಜಕಾರಣಿಗಳಿಗೆ ಜನರ ನಂಬಿಕೆ, ವಿಶ್ವಾಸ ಮುಖ್ಯವಾಗಿದೆ, ನಂಬಿಕೆ ಉಳಿಸಿಕೊಳ್ಳುವುದು ದೊಡ್ಡ ಜವಾಬ್ದಾರಿ. ನೈತಿಕತೆಯೇ ರಾಜಧರ್ಮ. ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಅತ್ಯವಶ್ಯ' ಎಂದು ಅವರು ಖ್ಯಾತ ಬಂಗಾಳಿ ದೈನಿಕ "ಆನಂದ ಬಜಾರ್ ಪತ್ರಿಕಾ' ಜೊತೆ ಮಾತನಾಡುತ್ತ ಹೇಳಿದ್ದಾರೆ.[ವಿವಾದಿತ ವಿದೇಶಾಂಗ ಖಾತೆ ಮಂತ್ರಿಗಳು]
1996ರಲ್ಲಿ ಬೆಳಕಿಗೆ ಬಂದ ಹವಾಲಾ ಹಗರಣದಲ್ಲಿ ಹವಾಲಾ ಬ್ರೋಕರ್ ಎಸ್.ಕೆ.ಜೈನ್ ಡೈರಿಯಲ್ಲಿ ಅಡ್ವಾಣಿ ಹೆಸರು ಪತ್ತೆಯಾಗಿತ್ತು. ಸಿಬಿಐ ಈ ಬಗ್ಗೆ ಕೋರ್ಟಿಗೆ ಮಾಹಿತಿ ನೀಡಿತ್ತು. ನಂತರ ಅಡ್ವಾಣಿ ರಾಜೀನಾಮೆ ನೀಡಿದ್ದರು. 1998ರಲ್ಲಿ ಆರೋಪ ಮುಕ್ತರಾದ ಮೇಲೆ ಮರು ಆಯ್ಕೆಯಾಗಿದ್ದರು.

ಹಗರಣದಲ್ಲಿ ಹೆಸರು ಕೇಳಿ ಬಂದ ಕ್ಷಣ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕರೆ ಮಾಡಿ ನನ್ನ ನಿರ್ಧಾರ ತಿಳಿಸಿದೆ. ಕೂಡಲೇ ಆದರೆ ಅವರು ರಾಜೀನಾಮೆ ನೀಡದಿರಲು ಹೇಳಿದರು. ಆದರೆ ನನ್ನ ನಿರ್ಧಾರ ಅಚಲವಾಗಿತ್ತು' ಎಂದು ಅಡ್ವಾಣಿ ಹೇಳಿದ್ದಾರೆ.[ಲಲಿತ್ ಮೋದಿ-ಸುಷ್ಮಾ ವಿವಾದದ ಸಂಪೂರ್ಣ ಚಿತ್ರಣ]
ಲಲಿತ್ ಮೋದಿಗೆ ನೆರವಾದ ಆರೋಪ ಹೊತ್ತಿರುವ ಸುಷ್ಮಾ ಹಾಗೂ ರಾಜೇ ಅವರ ರಾಜೀನಾಮೆ ಅಗತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಡ್ವಾಣಿ, ನಾನು ನನ್ನ ವಿಚಾರವನ್ನು ಹೇಳಿದ್ದೇನಷ್ಟೆ. ಬೇರೆಯವರು ಏನು ಮಾಡುತ್ತಾರೆ, ಅವರ ವಿಚಾರ, ತೊಂದರೆಗಳೇನೆಂದು ನನಗೆ ಗೊತ್ತಿಲ್ಲ, ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ' ಎಂದಿದ್ದಾರೆ.[ಲಮೋ ಕಂಡರೆ ರಾಜಕಾರಣಿಗಳು ಏಕೆ ಹೆದರುತ್ತಾರೆ?]
ಈ ಹಿಂದೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಾಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದನ್ನು ಸ್ಮರಿಸಿದ ಅಡ್ವಾಣಿ ಆರೆಸ್ಸೆಸ್ ಶಾಖೆಗಳಲ್ಲಿ ನಿಷ್ಠೆ, ಪ್ರಮಾಣಿಕತೆ ಬಗ್ಗೆ ಪಾಠ ಕಲಿತವರು ಭ್ರಷ್ಟಾಚಾರದ ಜೊತೆ ಬಾಳುವುದಿಲ್ಲ ಎಂದರು. (ಪಿಟಿಐ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications