ಅಡ್ವಾಣಿ ಬುದ್ಧಿಮಾತು ರಾಜೇ, ಸುಷ್ಮಾಗೆ ಕೇಳಿಸುವುದೇ?
ನವದೆಹಲಿ, ಜೂ.28: ಹಗರಣದಲಿ ಸಿಲುಕಿರುವ ಸುಷ್ಮಾ ಸ್ವರಾಜ್ ಹಾಗೂ ವಸುಂಧರಾ ರಾಜೇ ಅವರಿಗೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಬುದ್ಧಿಮಾತು ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನಪ್ರತಿನಿಧಿಗಳು ಪ್ರಾಮಾಣಿಕರಾಗಿರಬೇಕು. ಹವಾಲಾ ಕೇಸಿನಲ್ಲಿ ನನ್ನ ಹೆಸರು ಕೇಳಿ ಬಂದಾಗ ನಾನು ತಕ್ಷಣ ರಾಜೀನಾಮೆ ನೀಡಿದ್ದೆ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ. [ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ನಾಲ್ಕು ಘಟವಾಣಿಯರು]
"ರಾಜಕಾರಣಿಗಳಿಗೆ ಜನರ ನಂಬಿಕೆ, ವಿಶ್ವಾಸ ಮುಖ್ಯವಾಗಿದೆ, ನಂಬಿಕೆ ಉಳಿಸಿಕೊಳ್ಳುವುದು ದೊಡ್ಡ ಜವಾಬ್ದಾರಿ. ನೈತಿಕತೆಯೇ ರಾಜಧರ್ಮ. ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ ಅತ್ಯವಶ್ಯ' ಎಂದು ಅವರು ಖ್ಯಾತ ಬಂಗಾಳಿ ದೈನಿಕ "ಆನಂದ ಬಜಾರ್ ಪತ್ರಿಕಾ' ಜೊತೆ ಮಾತನಾಡುತ್ತ ಹೇಳಿದ್ದಾರೆ.[ವಿವಾದಿತ ವಿದೇಶಾಂಗ ಖಾತೆ ಮಂತ್ರಿಗಳು]
1996ರಲ್ಲಿ ಬೆಳಕಿಗೆ ಬಂದ ಹವಾಲಾ ಹಗರಣದಲ್ಲಿ ಹವಾಲಾ ಬ್ರೋಕರ್ ಎಸ್.ಕೆ.ಜೈನ್ ಡೈರಿಯಲ್ಲಿ ಅಡ್ವಾಣಿ ಹೆಸರು ಪತ್ತೆಯಾಗಿತ್ತು. ಸಿಬಿಐ ಈ ಬಗ್ಗೆ ಕೋರ್ಟಿಗೆ ಮಾಹಿತಿ ನೀಡಿತ್ತು. ನಂತರ ಅಡ್ವಾಣಿ ರಾಜೀನಾಮೆ ನೀಡಿದ್ದರು. 1998ರಲ್ಲಿ ಆರೋಪ ಮುಕ್ತರಾದ ಮೇಲೆ ಮರು ಆಯ್ಕೆಯಾಗಿದ್ದರು.

ಹಗರಣದಲ್ಲಿ ಹೆಸರು ಕೇಳಿ ಬಂದ ಕ್ಷಣ, ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕರೆ ಮಾಡಿ ನನ್ನ ನಿರ್ಧಾರ ತಿಳಿಸಿದೆ. ಕೂಡಲೇ ಆದರೆ ಅವರು ರಾಜೀನಾಮೆ ನೀಡದಿರಲು ಹೇಳಿದರು. ಆದರೆ ನನ್ನ ನಿರ್ಧಾರ ಅಚಲವಾಗಿತ್ತು' ಎಂದು ಅಡ್ವಾಣಿ ಹೇಳಿದ್ದಾರೆ.[ಲಲಿತ್ ಮೋದಿ-ಸುಷ್ಮಾ ವಿವಾದದ ಸಂಪೂರ್ಣ ಚಿತ್ರಣ]
ಲಲಿತ್ ಮೋದಿಗೆ ನೆರವಾದ ಆರೋಪ ಹೊತ್ತಿರುವ ಸುಷ್ಮಾ ಹಾಗೂ ರಾಜೇ ಅವರ ರಾಜೀನಾಮೆ ಅಗತ್ಯವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅಡ್ವಾಣಿ, ನಾನು ನನ್ನ ವಿಚಾರವನ್ನು ಹೇಳಿದ್ದೇನಷ್ಟೆ. ಬೇರೆಯವರು ಏನು ಮಾಡುತ್ತಾರೆ, ಅವರ ವಿಚಾರ, ತೊಂದರೆಗಳೇನೆಂದು ನನಗೆ ಗೊತ್ತಿಲ್ಲ, ಅದಕ್ಕೆ ಪ್ರತಿಕ್ರಿಯಿಸುವುದಿಲ್ಲ' ಎಂದಿದ್ದಾರೆ.[ಲಮೋ ಕಂಡರೆ ರಾಜಕಾರಣಿಗಳು ಏಕೆ ಹೆದರುತ್ತಾರೆ?]
ಈ ಹಿಂದೆ ಭ್ರಷ್ಟಾಚಾರದ ಆರೋಪ ಕೇಳಿ ಬಂದಾಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದನ್ನು ಸ್ಮರಿಸಿದ ಅಡ್ವಾಣಿ ಆರೆಸ್ಸೆಸ್ ಶಾಖೆಗಳಲ್ಲಿ ನಿಷ್ಠೆ, ಪ್ರಮಾಣಿಕತೆ ಬಗ್ಗೆ ಪಾಠ ಕಲಿತವರು ಭ್ರಷ್ಟಾಚಾರದ ಜೊತೆ ಬಾಳುವುದಿಲ್ಲ ಎಂದರು. (ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications