ನೀಟ್ ಪರೀಕ್ಷೆ ಬರೆದ 1.33 ಮಿಲಿಯನ್ ವಿದ್ಯಾರ್ಥಿಗಳು
ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್ಇಇಟಿ) ಭಾನುವಾರ ದೇಶದಾದ್ಯಂತ ನಡೆಯಿತು.
ದೇಶದಾದ್ಯಂತ 136 ನಗರಗಳಲ್ಲಿ 13 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸುಮಾರು 2,000 ಕೇಂದ್ರಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಪರೀಕ್ಷೆ ನಡೆಯಿತು. ಎನ್ಇಇಟಿ ಪರೀಕ್ಷೆ ಉತ್ತರಗಳನ್ನು ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್ಇ) ಇದೇ ತಿಂಗಳು ಬಿಡುಗಡೆ ಮಾಡಲಿದೆ. ಜೂನ್ 5ರಂದು ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ 66,000 ಸೀಟುಗಳಿಗೆ 11 ಭಾಷೆಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಪರೀಕ್ಷಾ ಕೇಂದ್ರದೊಳಗೆ ಕಾಗದದ ಚೂರು, ಇರೇಸರ್, ಮೊಬೈಲ್ ಫೋನ್, ಪೆನ್ಸಿಲ್ ಬಾಕ್ಸ್ ಸೇರಿದಂತೆ ವಿವಿಧ ಸಾಮಗ್ರಿಗಳನ್ನು ಒಯ್ಯಲು ಅವಕಾಶ ಇರಲಿಲ್ಲ. ಅದೇ ರೀತಿ, ಪರ್ಸ್, ಕೈಚೀಲ ಕೊಂಡೊಯ್ಯಲು, ಕನ್ನಡಕ, ಬೆಲ್ಟ್, ಟೋಪಿ, ಆಭರಣ, ಶೂ, ಎತ್ತರ ಚಪ್ಪಲಿಗಳನ್ನು ಧರಿಸುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಪರೀಕ್ಷೆ ತುಂಬಾ ಕಷ್ಟವಾಗಿರಲಿಲ್ಲ. ಹಾಗೆಯೇ ಸರಳವಾಗಿಯೂ ಇರಲಿಲ್ಲ ಎಂದು ವಿದ್ಯಾರ್ಥಿಗಳು ಅನುಭವ ಹಂಚಿಕೊಂಡಿದ್ದಾರೆ.
ಎನ್ಇಇಟಿ ಪರೀಕ್ಷೆಯು ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಂದ 180 ಆಯ್ಕೆ ಆಧಾರಿತ ಪ್ರಶ್ನೆಗಳನ್ನು ಒಳಗೊಂಡ ಒಂದು ಪತ್ರಿಕೆಯನ್ನು ಹೊಂದಿರುತ್ತದೆ. ಪರೀಕ್ಷಾ ಕೇಂದ್ರದಲ್ಲಿ ನೀಡಲಾಗುವ ನಿರ್ದಿಷ್ಟ ಬಾಲ್ ಪಾಯಿಂಟ್ ಪೆನ್ ಬಳಸಿ ವಿಶೇಷವಾಗಿ ವಿನ್ಯಾಸಪಡಿಸಿರುವ ಶೀಟ್ನಲ್ಲಿ ಉತ್ತರ ನಮೂದಿಸಬೇಕಾಗಿರುತ್ತದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications