ನೀಟ್ 2020 ಪರೀಕ್ಷೆ ಫಲಿತಾಂಶ ಯಾವಾಗ? ಎಲ್ಲಿ ನೋಡ್ಬಹುದು?
ನವದೆಹಲಿ, ಅ.12: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಫಲಿತಾಂಶ ಪ್ರಕಟಿಸುವ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನೀಟ್ 2020 ಪರೀಕ್ಷೆ ಫಲಿತಾಂಶ ಯಾವಾಗ? ಎಂಬ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿ ಉತ್ತರಿಸಿದ್ದಾರೆ. ಅಕ್ಟೋಬರ್ 16ರಂದು ನೀಟ್ 2020 ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ಆಕಾಂಕ್ಷಿಗಳಿಗೂ ಅಭಿನಂದಿಸುತ್ತೇನೆ ಎಂದಿದ್ದಾರೆ.
ಕೊರೊನಾವೈರಸ್ ನಡುವೆಯೂ ಸೆಪ್ಟೆಂಬರ್ 13ರಂದು ನೀಟ್ 2020 ಆಯೋಜಿಸಲಾಗಿತ್ತು. ದೇಶದೆಲ್ಲೆಡೆ 3843ಕ್ಕೂ ಅಧಿಕ ಕೇಂದ್ರಗಳಲ್ಲಿ 15 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದರು. ಕೊವಿಡ್ 19 ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಈ ಕುರಿತಂತೆ ಆದೇಶ ನೀಡಿದ್ದಾರೆ. ಪರೀಕ್ಷೆ ಫಲಿತಾಂಶ ಅಕ್ಟೋಬರ್ 16ರಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ.
ವೈದ್ಯಕೀಯ ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ National Eligibility-cum-Entrance Test(NEET)ವಿರುದ್ಧ ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ''ಬಡವರು, ಗ್ರಾಮೀಣ ಭಾಗದವರಿಗೆ ನೀಟ್ ಮಾರಕವಾಗಿ ಪರಿಣಮಿಸಿದೆ. ಶಾಲೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದವರು ನೀಟ್ ಪರೀಕ್ಷೆಯಲ್ಲಿ ವೈಫಲ್ಯ ಕಾಣುತ್ತಿದ್ದಾರೆ. ಖಾಸಗಿ ಕೋಚಿಂಗ್ ಸಿಗದ ಕಾರಣ, ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ'' ಎಂದು ಡಿಎಂಕೆ ಸಂಸದರು ಕಿಡಿಕಾರಿದ್ದರು.

ನೀಟ್ ಭಯದಿಂದ ಧರ್ಮಪುರಿಯ ಇಲಕ್ಕಿಯಂಪಟ್ಟಿ ಎಂಬ ಊರಿನ 20 ವರ್ಷದ ಯುವಕ ಎಂ ಆದಿತ್ಯ, ನಾಮಕ್ಕಲ್ ಜಿಲ್ಲೆ ತಿರುಚೆಂಗೊಡೆಯ 21ವರ್ಷದ ಮೋತಿಲಾಲ್ ಹಾಗೂ ಮದುರೈನ ಯುವತಿ ಜ್ಯೋತಿಶ್ರೀ ಎಲ್ಲರೂ ಪರೀಕ್ಷೆ ಭಯ ಹಾಗೂ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು.
Recommended Video
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications