ನೀಟ್ 2020 ಪರೀಕ್ಷೆ ಫಲಿತಾಂಶ ಯಾವಾಗ? ಎಲ್ಲಿ ನೋಡ್ಬಹುದು?
ನವದೆಹಲಿ, ಅ.12: ಮೆಡಿಕಲ್ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಫಲಿತಾಂಶ ಪ್ರಕಟಿಸುವ ದಿನಾಂಕದ ಬಗ್ಗೆ ಮಾಹಿತಿ ಸಿಕ್ಕಿದೆ. ನೀಟ್ 2020 ಪರೀಕ್ಷೆ ಫಲಿತಾಂಶ ಯಾವಾಗ? ಎಂಬ ಪ್ರಶ್ನೆಗೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಅವರು ಟ್ವೀಟ್ ಮಾಡಿ ಉತ್ತರಿಸಿದ್ದಾರೆ. ಅಕ್ಟೋಬರ್ 16ರಂದು ನೀಟ್ 2020 ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ಆಕಾಂಕ್ಷಿಗಳಿಗೂ ಅಭಿನಂದಿಸುತ್ತೇನೆ ಎಂದಿದ್ದಾರೆ.
ಕೊರೊನಾವೈರಸ್ ನಡುವೆಯೂ ಸೆಪ್ಟೆಂಬರ್ 13ರಂದು ನೀಟ್ 2020 ಆಯೋಜಿಸಲಾಗಿತ್ತು. ದೇಶದೆಲ್ಲೆಡೆ 3843ಕ್ಕೂ ಅಧಿಕ ಕೇಂದ್ರಗಳಲ್ಲಿ 15 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆದಿದ್ದರು. ಕೊವಿಡ್ 19 ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡವರಿಗೆ ಅಕ್ಟೋಬರ್ 14ರಂದು ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಅವರು ಈ ಕುರಿತಂತೆ ಆದೇಶ ನೀಡಿದ್ದಾರೆ. ಪರೀಕ್ಷೆ ಫಲಿತಾಂಶ ಅಕ್ಟೋಬರ್ 16ರಂದು ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ.
ವೈದ್ಯಕೀಯ ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ನಡೆಸಲಾಗುವ National Eligibility-cum-Entrance Test(NEET)ವಿರುದ್ಧ ತಮಿಳುನಾಡಿನಲ್ಲಿ ಭಾರಿ ಪ್ರತಿಭಟನೆ ನಡೆದಿತ್ತು. ''ಬಡವರು, ಗ್ರಾಮೀಣ ಭಾಗದವರಿಗೆ ನೀಟ್ ಮಾರಕವಾಗಿ ಪರಿಣಮಿಸಿದೆ. ಶಾಲೆಗಳಲ್ಲಿ ಹೆಚ್ಚಿನ ಅಂಕ ಗಳಿಸಿದವರು ನೀಟ್ ಪರೀಕ್ಷೆಯಲ್ಲಿ ವೈಫಲ್ಯ ಕಾಣುತ್ತಿದ್ದಾರೆ. ಖಾಸಗಿ ಕೋಚಿಂಗ್ ಸಿಗದ ಕಾರಣ, ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ'' ಎಂದು ಡಿಎಂಕೆ ಸಂಸದರು ಕಿಡಿಕಾರಿದ್ದರು.

ನೀಟ್ ಭಯದಿಂದ ಧರ್ಮಪುರಿಯ ಇಲಕ್ಕಿಯಂಪಟ್ಟಿ ಎಂಬ ಊರಿನ 20 ವರ್ಷದ ಯುವಕ ಎಂ ಆದಿತ್ಯ, ನಾಮಕ್ಕಲ್ ಜಿಲ್ಲೆ ತಿರುಚೆಂಗೊಡೆಯ 21ವರ್ಷದ ಮೋತಿಲಾಲ್ ಹಾಗೂ ಮದುರೈನ ಯುವತಿ ಜ್ಯೋತಿಶ್ರೀ ಎಲ್ಲರೂ ಪರೀಕ್ಷೆ ಭಯ ಹಾಗೂ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದರು.
Recommended Video
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications