ಮುನ್ನಾಭಾಯಿ ಎಂಬಿಬಿಎಸ್ನಂತೆ ವೈದ್ಯಕೀಯ ಸೀಟುಗಳ ಮಾರಾಟ ದಂಧೆ ಪತ್ತೆ
ನವದೆಹಲಿ,ಜುಲೈ.19: ವೈದ್ಯಕೀಯ ಕೋರ್ಸ್ಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಬರೆದುಕೊಟ್ಟು ನಿಗದಿತ ಸೀಟುಗಳನ್ನು ಮಾರಾಟ ಮಾಡಿ ಅಂತರಾಜ್ಯ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.
ಈ ಮೋಸದ ಕಾರ್ಯಾಚರಣೆಯು ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಹರಿಯಾಣದಾದ್ಯಂತ ಹರಡಿತ್ತು. ಬಾಲಿವುಡ್ ಬ್ಲಾಕ್ ಬಾಸ್ಟರ್ ಸಿನಿಮಾ ಮುನ್ನಾಭಾಯಿ ಎಂಬಿಬಿಎಸ್ ಮಾದರಿಯಲ್ಲಿ ಈ ಸೀಟು ಮಾರಾಟ ದಂಧೆ ಕೆಲಸ ಮಾಡಿದೆ. ಪರಿಣಿತ ಉತ್ತರ ಪತ್ರಿಕೆ ಬರೆಯುವವರು ವಿದ್ಯಾರ್ಥಿಗಳನ್ನು ಯಾಮಾರಿಸಿ ದೊಡ್ಡ ಮೊತ್ತದ ಹಣಕ್ಕೆ ಉತ್ತರ ಪತ್ರಿಕೆಗಳನ್ನು ಬರೆದಿದ್ದಾರೆ ಎನ್ನಲಾಗಿದೆ.
ಪ್ರತಿ ಸೀಟಿನ ಬೆಲೆ 20 ಲಕ್ಷ ರುಪಾಯಿಗೆ ಮಾತನಾಡಿ ಅದರಲ್ಲಿ 5 ಲಕ್ಷ ರುಪಾಯಿಯನ್ನು ವಿದ್ಯಾರ್ಥಿಯಂತೆ ನಟಿಸಿ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ) ಪ್ರಶ್ನೆ ಪತ್ರಿಕೆಯನ್ನು ಬೆರೆದ ವ್ಯಕ್ತಿಗೆ ನೀಡಲಾಗಿದೆ. ಉಳಿದ ಹಣವನ್ನು ಮಧ್ಯವರ್ತಿಗಳು ಮತ್ತು ಇತರರು ಹಂಚಿಕೊಂಡಿದ್ದಾರೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಈ ಪ್ರಕರಣದಲ್ಲಿ 11 ಮಂದಿಯ ಹೆಸರನ್ನು ಸಿಬಿಐ ಗುರುತು ಮಾಡಿಕೊಂಡಿದ್ದು, ಈವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ನಡೆಯುತ್ತಿದೆ. ದಂಧೆಯ ಮಾಸ್ಟರ್ ಮೈಂಡ್ ಆದ ಸಪ್ದರ್ ಜಂಗ್ನ ಸುಶೀಲ್ ರಂಜನ್ ಎಂಬಾತನು ಉತ್ತರ ಪತ್ರಿಕೆಗೆ ಬರೆಯುವವರನ್ನು ನೇಮಿಸಿದ್ದನು ಮತ್ತು ಹಣವನ್ನು ಸಂಗ್ರಹಿಸಿದ್ದನು ಎಂದು ಎನ್ಡಿಟಿವಿ ವರದಿ ಮಾಡಿದೆ.
ಪ್ರಕರಣದ ತನಿಖೆಯ ವ್ಯಾಪ್ತಿಯನ್ನು ವಿಸ್ತರಿಸಲು ಸಿಬಿಐ ಸಂಸ್ಥೆಯು ಪರೀಕ್ಷಾ ಅಭ್ಯರ್ಥಿಗಳೊಂದಿಗೆ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಕೋಚಿಂಗ್ ಸಂಸ್ಥೆಗಳ ಪಾತ್ರವೂ ಇರುವುದರ ಬಗ್ಗೆ ತನಿಖೆಯಲ್ಲಿ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ದಂಧೆಯು ಮಾರ್ಫ್ ಮಾಡಿದ ಛಾಯಾಚಿತ್ರಗಳನ್ನು ಬಳಸಿಕೊಂಡು ನೀಟ್ ಗುರುತಿನ ಚೀಟಿಗಳನ್ನು ತಿರುಚುವಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಪತ್ರಿಕೆಗೆ ಉತ್ತರಿಸುವವರು ಪರೀಕ್ಷಾ ಹಾಲ್ನಲ್ಲಿ ಪ್ರವೇಶವನ್ನು ಪಡೆದಿದ್ದರು. ಆರೋಪಿಗಳು ಅಭ್ಯರ್ಥಿಗಳ ಯೂಸರ್ ಐಡಿ ಮತ್ತು ಪಾಸ್ವರ್ಡ್ಗಳನ್ನು ಸಂಗ್ರಹಿಸಿ ಬಯಸಿದ ಪರೀಕ್ಷಾ ಕೇಂದ್ರಗಳನ್ನು ಪಡೆಯಲು ಅಗತ್ಯ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದು ಬಂದಿದೆ.

ಜುಲೈ 17 ರಂದು ನಡೆದ ನೀಟ್ ಪದವಿಪೂರ್ವ ಪರೀಕ್ಷೆಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ನಡೆಸಲಾಗಿತ್ತು. ಇದು ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿ ಔಷಧ ಮತ್ತು ನರ್ಸಿಂಗ್ ಕೋರ್ಸ್ಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳಿಗೆ ಕಡ್ಡಾಯ ಪರೀಕ್ಷೆಯಾಗಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications