ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ 'ಸಾಲ್ವರ್ ಗ್ಯಾಂಗ್'!
ನವದೆಹಲಿ, ಜೂನ್ 24: ನೀಟ್ ಪರೀಕ್ಷೆ ಮತ್ತೆ ಸುದ್ದಿಯಾಗಿದೆ. ಒಂದು ದೇಶ, ಒಂದು ಪರೀಕ್ಷೆ ಹೆಸರಿನಲ್ಲಿ ವೈದ್ಯಕೀಯ ಸೀಟುಗಳ ಪ್ರವೇಶಾತಿಗಾಗಿ ಪರಿಚಯಿಸಲಾದ 'ನೀಟ್' ಪರೀಕ್ಷೆ ಬಗ್ಗೆ ಪ್ರತಿವರ್ಷವೂ ಒಂದಲ್ಲ ಒಂದು ಅಪಸ್ವರ ಕೇಳಿ ಬರುತ್ತಿದೆ. ಈ ಬಾರಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.
ಕೇಂದ್ರ ಸರ್ಕಾರ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಬಿಐಗೆ ನೀಡಿದೆ. ಎಫ್ಐಆರ್ ದಾಖಲು ಮಾಡಿಕೊಂಡು ಸಿಬಿಐ ತನಿಖೆ ಆರಂಭಿಸಿದೆ. ಆದರೆ ಬಿಹಾರ ಪೊಲೀಸರು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿರುವ ವರದಿಯಲ್ಲಿ ಸೋರಿಕೆ ಹಗರಣದಲ್ಲಿ 'ಸಾಲ್ವರ್ ಗ್ಯಾಂಗ್' ಕೈವಾಡವಿದೆ ಎಂದು ಹೇಳಿದೆ.

ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡುವ ಬಹುದೊಡ್ಡ ಜಾಲವೇ 'ಸಾಲ್ವರ್ ಗ್ಯಾಂಗ್'. ಹಲವು ರಾಜ್ಯಗಳಲ್ಲಿ ಗ್ಯಾಂಹ್ ಕಾರ್ಯಜಾಲವನ್ನು ಹೊಂದಿದ್ದು, ಸಾಮಾಜಿಕ ಜಾಲತಾಣದ ಮೂಲಕವೇ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡುತ್ತದೆ. ರವಿ ಅತ್ರಿಯ, ಸಂಜೀವ್ ಮುಖಿಯಾ ಈ ಗ್ಯಾಂಗ್ನ ಪ್ರಮುಖರು.
ಸಿಬಿಐ ತನಿಖೆ ಆರಂಭ: ನೀಟ್ ಪ್ರಶ್ನೆ ಪತ್ರಿಕೆ ಹಗರಣದ ಕುರಿತು ಸಿಬಿಐ ವಂಚನೆ, ಕ್ರಿಮಿನಲ್ ಪಿತೂರಿ ಸೆಕ್ಷನ್ಗಳಡಿ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ಆರಂಭಿಸಿದೆ. ಬಿಹಾರದಲ್ಲಿ ಮೊದಲು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಮಾಹಿತಿ ಇದೆ. ಬಿಹಾರ ಪೊಲೀಸರು ಪ್ರಕರಣದಲ್ಲಿ 'ಸಾಲ್ವರ್ ಗ್ಯಾಂಗ್' ಕೈವಾಡ ಇರುವ ಕುರಿತು ಈಗಾಗಲೇ ಕೇಂದ್ರಕ್ಕೆ ಸಮಗ್ರ ವರದಿ ಸಲ್ಲಿಕೆ ಮಾಡಿದ್ದಾರೆ.
ಮಹಾರಾಷ್ಟ್ರ ರಾಜ್ಯಕ್ಕೆ ಸಹ ಈಗ ಜಾಲ ವಿಸ್ತರಣೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಲಾತೂರ್ನಲ್ಲಿನ ಎಟಿಎಂ ಕೇಂದ್ರದಲ್ಲಿ ಪತ್ರಿಕೆ ಅಭ್ಯರ್ಥಿಗಳ ಕೈ ಸೇರಿತ್ತು ಎಂದು ಆರೋಪಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣದ ಮೂಲಕವೇ ಪತ್ರಿಕೆ ಮಾರಾಟ ಮಾಡಿ, ಆನ್ಲೈನ್ ಮೂಲಕವೇ ಹಣವನ್ನು ಸಂಗ್ರಹ ಮಾಡುವುದು ಈ ಗ್ಯಾಂಗ್ನ ಕಾರ್ಯತಂತ್ರವಾಗಿದೆ.
ರವಿ ಅತ್ರಿಯ 2007ರಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ಬರೆದಿದ್ದ. ಕೋಟಾದಲ್ಲಿ ಖಾಸಗಿ ಕಾಲೇಜಿಗೆ ಸೇರಿದ್ದ ಆತ ಪರೀಕ್ಷಾ ಅಕ್ರಮ ನಡೆಸುವ ಗ್ಯಾಂಗ್ ಸಂಪರ್ಕಕ್ಕೆ ಬಂದ. ಕೋರ್ಸ್ ಪೂರ್ಣಗೊಳಿಸದೇ ಪರೀಕ್ಷೆಗಳ ಪತ್ರಿಕೆಗಳನ್ನು ಮಾರಾಟ ಮಾಡುವ ಕೆಲಸ ಆರಂಭಿಸಿದ.
'ಸಾಲ್ವರ್ ಗ್ಯಾಂಗ್' ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು ಮಾತ್ರವಲ್ಲ. ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಬದಲು ಬೇರೆ ಅಭ್ಯರ್ಥಿಗಳನ್ನು ಕಳಿಸುವ ಕೃತ್ಯಗಳಲ್ಲೂ ಭಾಗಿಯಾಗಿದೆ. ರವಿ ಅತ್ರಿಯನನ್ನು ಉತ್ತರ ಪ್ರದೇಶದಲ್ಲಿ ಈಗ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹಲವು ದಿನಗಳ ಹಿಂದೆ ಈ ಗ್ಯಾಂಗ್ ಕೈ ಸೇರುತ್ತಿತ್ತು. ಪ್ರಶ್ನೆ, ಸಿದ್ದ ಉತ್ತರಗಳಿರುವ ಪತ್ರಿಕೆಗಳನ್ನು ಗ್ಯಾಂಗ್ ಮಾರಾಟ ಮಾಡಿ ಹಣಗಳಿಸುತ್ತಿತ್ತು.
ಹಣ ಕೊಟ್ಟು ಪತ್ರಿಕೆ ಖರೀದಿ ಮಾಡುವ ಅಭ್ಯರ್ಥಿಗಳನ್ನು ಗುರುತಿಸಿ ಈ ಗ್ಯಾಂಗ್ ಸಂಪರ್ಕ ಮಾಡುತ್ತಿತ್ತು. ಯಾರನ್ನೂ ಖುದ್ದಾಗಿ ಭೇಟಿಯಾಗದ ಗ್ಯಾಂಗ್ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಿಕೊಂಡು, ಆ ಮೂಲಕವೇ ತಮ್ಮ ಕಾರ್ಯಾಚರಣೆಯನ್ನು ನಡೆಸುತ್ತಿತ್ತು.
ಈ ಗ್ಯಾಂಗ್ನ ಮತ್ತೊಬ್ಬ ಪ್ರಮುಖ ಸಂಜೀವ್ ಮುಖಿಯಾ. ಈತ ತನ್ನ ಪುತ್ರನೊಂದಿಗೆ ಸೇರಿಕೊಂಡು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿದ್ದ. ನೀಟ್ ಪತ್ರಿಕೆ ಸೋರಿಕೆಯಲ್ಲಿ ಈತನ ಪಾತ್ರ ಬಹಳ ಮುಖ್ಯವಾಗಿದೆ ಎಂಬ ಆರೋಪವಿದ್ದು, ಅಪ್ಪ, ಮಗ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ವಿವಿಧ ರಾಜ್ಯಗಳಲ್ಲಿ 'ಸಾಲ್ವರ್ ಗ್ಯಾಂಗ್' ಜಾಲ ವಿಸ್ತರಣೆ ಮಾಡುವಲ್ಲಿ ಸಂಜೀವ್ ಮುಖಿಯಾ ಕಾರ್ಯಚರಣೆ ಕೈಗೊಳ್ಳುತ್ತಿದ್ದ. ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಿಂದ ಹಿಡಿದು ವಿವಿಧ ಪರೀಕ್ಷೆಗಳ ಪತ್ರಿಕೆಗಳನ್ನು ಈ ಗ್ಯಾಂಗ್ನ ಸೋರಿಕೆ ಮಾಡಿ, ಹಣ ಮಾಡುತ್ತಿದ್ದರು.
ಕಾಂಗ್ರೆಸ್ ಪಕ್ಷ ಒಂದು ದೇಶ, ಒಂದು ಪರೀಕ್ಷೆ ಹೆಸರಿನಲ್ಲಿ ವೈದ್ಯಕೀಯ ಸೀಟುಗಳ ಪ್ರವೇಶಾತಿಗಾಗಿ ಪರಿಚಯಿಸಲಾಗಿರುವ 'ನೀಟ್' ಪರೀಕ್ಷೆ ಬಗ್ಗೆ ಮೊದಲಿನಿಂದಲೂ ಆಕ್ಷೇಪ ಎತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳು ಪರೀಕ್ಷೆಯನ್ನು ವಿರೋಧಿಸುತ್ತವೇ ಇವೆ. ನೀಟ್ ಪರೀಕ್ಷೆ ಬಡವರು ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಹೇಳಿದ್ದಾರೆ.
ಈಗ ಲೋಕಸಭೆ ಚುನಾವಣೆ ಮುಗಿದು ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಬೆಳಕಿಗೆ ಬಂದಿದೆ. ಇದನ್ನು ಮುಂದಿಟ್ಟುಕೊಂಡು ಪ್ರತಿಪ್ಷಕ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡುತ್ತಿದೆ. ಅಕ್ರಮ ತಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications