CBSE ನೀಟ್ ಫಲಿತಾಂಶ ಪ್ರಕಟ, ಚೆಕ್ ಮಾಡುವುದು ಹೇಗೆ?
ನವದೆಹಲಿ, ಜೂನ್ 23: ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರನ್ಸ್ ಟೆಸ್ಟ್ (NEET) 2017ರ ಫಲಿತಾಂಶವನ್ನು ಶುಕ್ರವಾರ(ಜೂನ್ 23)ದಂದು ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಕ್ಸಾಮಿನೇಷನ್ (ಸಿಬಿಎಸ್ ಇ) ಪ್ರಕಟಿಸಿದೆ. ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನು ಎಂಬಿಬಿಎಸ್ ಅಥವಾ ಬಿಡಿಎಸ್ ನ ಪ್ರವೇಶಕ್ಕಾಗಿ ನಡೆಸಲಾಗುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ cbseresults.nic.in ಮತ್ತು cbseneet.nic.inನಲ್ಲಿ ನೋಡಬಹುದು.
NEET 2017ರ ಪದವಿ ಪೂರ್ವ ವೈದ್ಯಕೀಯ ಕೋರ್ಸ್ ಗಳ ಫಲಿತಾಂಶವನ್ನು ಪ್ರಕಟಿಸುವುದಕ್ಕೆ ಸಿಬಿಎಸ್ ಇಗೆ ಇತ್ತೀಚೆಗೆ ಅನುಮತಿ ಸಿಕ್ಕಿತ್ತು. ಫಲಿತಾಂಶ ಪ್ರಕಟಿಸುವುದರ ವಿರುದ್ಧದ ಯಾವುದೇ ಅರ್ಜಿಯನ್ನು ಹೈಕೋರ್ಟ್ ಗಳು ಪುರಸ್ಕರಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

* cbseresults.nic.in ಅಥವಾ results.gov.in ಗೆ ಭೇಟಿ ಕೊಡಿ
* CBSE NEET UG Result 2017 ಎಂಬುದರ ಮೇಲೆ ಕ್ಲಿಕ್ ಮಾಡಿ. ಮತ್ತೊಂದು ಪುಟಕ್ಕೆ ನಿಮ್ಮನ್ನು ಕರೆದೊಯ್ಯಲಾಗುವುದು.
* ಅಪ್ಲಿಕೇಷನ್ ನಂಬರ್, ರೋಲ್ ನಂಬರ್, ಹುಟ್ಟಿದ ದಿನಾಂಕ ಸೇರಿದಂತೆ ಪ್ರಮುಖ ಅಂಶಗಳನ್ನು ದಾಖಲಿಸಿ.
* ನಿಮ್ಮ ಸ್ಕ್ರೀನ್ ಮೇಲೆ ಬರುವ ಫಲಿತಾಂಶವನ್ನು ವೀಕ್ಷಿಸಿ, ಸೇವ್ ಮಾಡಿಕೊಳ್ಳಿ ಹಾಗೂ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಎಂಬಿಬಿಎಸ್ ಹಾಗೂ ಬಿಡಿಎಸ್ ಪ್ರವೇಶಕ್ಕೆ ಐವತ್ತಾರು ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನೀಟ್ ಪರೀಕ್ಷೆ ಮೇ 7ರಂದು ನಡೆದಿತ್ತು. ದೇಶದಾದ್ಯಂತ 11 ಲಕ್ಷ ಮಂದಿ ಪರೀಕ್ಷೆ ಬರೆದಿದ್ದರು. ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮರಾಠಿ, ಕನ್ನಡ, ಬೆಂಗಾಲಿ, ಅಸ್ಸಾಮಿ, ಗುಜರಾತಿ ಮತ್ತು ಒಡಿಯಾ ಸೇರಿ ಹತ್ತು ಪ್ರಾದೇಶ್ಸಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಇತ್ತು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications