NEET ಶಾಕ್: ಯುವತಿಗೆ ಒಳಉಡುಪು ಕಳಚಲು ಹೇಳಿದ ಪರೀಕ್ಷಾಧಿಕಾರಿ
ಒಳ ಉಡುಪಿನಲ್ಲಿರುವ ಲೋಹದ ಬಟನ್, ಬ್ರಾ ಹುಕ್ ಗಳಲ್ಲಿರುವ ಲೋಹದ ಬಟನ್ ಗಳಿಗೂ ನಿಷೇಧ ಹೇರಲಾಗಿತ್ತು. ಪರೀಕ್ಷಾ ಅಕ್ರಮ ತಡೆಗಟ್ಟಲು ಕೈಗೊಂಡ ಈ ನಿಯಮಗಳು ಹಲವು ಮುಜುಗರದ ಸನ್ನಿವೇಶವನ್ನೂ ತಂದೊಡ್ಡಿದ್ದು ವರದಿಯಾಗಿದೆ.
ನವದೆಹಲಿ, ಮೇ 8: ಭಾನುವಾರ ದೇಶದಾದ್ಯಂತ ಮೊದಲ ಬಾರಿಗೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿಷಯಗಳಿಗೆ ನಡೆದ ನೀಟ್ ಪರೀಕ್ಷೆ ಯಶಸ್ವಿಯಾಗಿದೆ. ಆದರೆ ಈ ಸಂದರ್ಭ ನಡೆದ ಕೆಲವು ಘಟನೆಗಳು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ಅದರಲ್ಲೂ ನೀಟ್ ನ ಕೆಲವು ನಿಯಮಗಳು ಟೀಕೆಗೆ ಗುರಿಯಾಗಿದ್ದು ಈ ಸಂಬಂಧ ದೂರು ನೀಡುವುದಾಗಿ ಹಲವರು ಗುಡುಗಿದ್ದಾರೆ. ಇವರಲ್ಲಿ ಕೇರಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರೂ ಸೇರಿದ್ದಾರೆ.[ಮುಗಿದ ನೀಟ್ ಪರೀಕ್ಷೆ, ಜೂನ್ 8ಕ್ಕೆ ಫಲಿತಾಂಶ]

ಅಂಥದ್ದೇನಾಯ್ತು?
ಡ್ರೆಸ್ ಕೋಡ್ (ವಸ್ತ್ರ ಸಂಹಿತೆ) ಹಾಗೂ ಸಮಯದ ವಿಚಾರದಲ್ಲಿ ಈ ಬಾರಿ ಕಠಿಣ ನಿಲುವು ತೆಗೆದುಕೊಳ್ಳಲಾಗಿತ್ತು. ಹೀಗಾಗಿ ಹಲವು ಗೊಂದಲಗಳು ನಿರ್ಮಾಣವಾದ ವರದಿಗಳು ದೇಶಾದ್ಯಂತ ಕೇಳಿ ಬಂದಿವೆ.
ತುಂಬು ತೋಳಿನ ಅಂಗಿ ಹಾಗೂ ಗಾಢ ಬಣ್ಣದ ಪ್ಯಾಂಟುಗಳನ್ನು ಹಾಕದಂತೆ ನಿರ್ಬಂಧ ವಿಧಿಸಲಾಗಿತ್ತು. ಶೂ, ಹೈ ಹೀಲ್ಡ್ ಚಪ್ಪಲಿಗಳು, ಲೋಹದ ಬಟನ್ ಗಳು, ಲೋಹದ ಕಿವಿಯೋಲೆಗಳು, ದೊಡ್ಡ ಹೇರ್ ಪಿನ್ ಗಳಿಗೆಲ್ಲಾ ಪರೀಕ್ಷಾ ಹಾಲಿನೊಳಗೆ ನಿಷೇಧ ಹೇರಲಾಗಿತ್ತು.
ಎಲ್ಲಿಯವರೆಗೆ ಅಂದರೆ ಒಳ ಉಡುಪಿನಲ್ಲಿರುವ ಲೋಹದ ಬಟನ್, ಬ್ರಾ ಹುಕ್ ಗಳಲ್ಲಿರುವ ಲೋಹದ ಬಟನ್ ಗಳಿಗೂ ನಿಷೇಧ ಹೇರಲಾಗಿತ್ತು. ಪರೀಕ್ಷಾ ಅಕ್ರಮ ತಡೆಗಟ್ಟಲು ಕೈಗೊಂಡ ಈ ನಿಯಮಗಳು ಹಲವು ಮುಜುಗರದ ಸನ್ನಿವೇಶವನ್ನೂ ತಂದೊಡ್ಡಿದ್ದು ವರದಿಯಾಗಿದೆ.
ಕೇರಳದ ಕಣ್ಣೂರಿನಲ್ಲಿ ಪರೀಕ್ಷೆ ಬರೆಯಲು ಹೊರಟ ವಿದ್ಯಾರ್ಥಿಯೋರ್ವಳ ಬ್ರಾ ತೆಗೆಯುವಂತೆ ಸೂಚಿಸಲಾಯಿತು. ಆಕೆಯ ಬ್ರಾ ಹುಕ್ ಲೋಹದ್ದಾದ್ದರಿಂದ ಅನಿವಾರ್ಯವಾಗಿ ಬ್ರಾ ಕಳಚಬೇಕಾಯಿತು. "ಪರೀಕ್ಷಾ ಕೇಂದ್ರದೊಳಕ್ಕೆ ಹೋದ ನನ್ನ ಮಗಳು ಸ್ವಲ್ಪ ಸಮಯದಲ್ಲೇ ಹಿಂದಕ್ಕೆ ಬಂದಳು. ಆಕೆಯ ಬ್ರಾವನ್ನು ನನ್ನ ಕೈಗಿಡಲು ಆಕೆ ಬಂದಿದ್ದಳು," ಎಂಬುದಾಗಿ ವಿದ್ಯಾರ್ಥಿನಿಯ ತಾಯಿ ಎನ್ಡಿಟಿವಿಗೆ ತಿಳಿಸಿದ್ದಾರೆ.
ಇನ್ನೊಬ್ಬಾಕೆ ಯುವತಿಗೆ ಪ್ಯಾಂಟಿನ ಕಿಸೆ ಹರಿಯುವಂತೆ, ಪ್ಯಾಂಟಿನ ಬಟನ್ ತೆಗೆಯುವಂತೆ ಸೂಚಿಸಿದ್ದು ವರದಿಯಾಗಿದೆ. ಕೊನೆಗೆ ಅನಿವಾರ್ಯವಾಗಿ ಬ್ಲೇಡಿನಿಂದ ಪ್ಯಾಂಟಿನ ಕಿಸೆ ಕತ್ತರಿಸಿ, ಪ್ಯಾಂಟಿನ ಬಟನ್ ತೆಗೆಯಲಾಗಿತ್ತು. ನಂತರ ಆಕೆ ಪರೀಕ್ಷೆ ಮುಗಿಸಿ ಬರುವ ವೇಳೆಗೆ ಪೋಷಕರು ಆಕೆಗೆ ಹೊಸ ಬಟ್ಟೆ ಖರೀದಿಸಿ ತರಬೇಕಾಯಿತು; ಅದೂ ಮೂರು ಕಿಲೋಮೀಟರ್ ದೂರ ಹೋಗಿ.
ಇನ್ನು ಬೆಂಗಳೂರಿನಲ್ಲಿ ಹಲವು ವಿದ್ಯಾರ್ಥಿಗಳು ತಮ್ಮ ಬಟ್ಟೆ ವಸ್ತ್ರ ಸಂಹಿತೆಗೆ ಮ್ಯಾಚ್ ಆಗದ ಕಾರಣ ಟೀ ಶರ್ಟ್ ಧರಿಸಿ ಪರೀಕ್ಷೆ ಬರೆದರು. ಶೂ ಹಾಕಿದ ವಿದ್ಯಾರ್ಥಿಗಳನ್ನು ಶೂ ಕಳಚಿ ಪರೀಕ್ಷಾ ಕೇಂದ್ರದೊಳಕ್ಕೆ ಬಿಡಲಾಯಿತು. ಚೆನ್ನೈನಲ್ಲಿ ವಿದ್ಯಾರ್ಥಿಗಳು ತುಂಬು ತೋಳಿನ ಅಂಗಿ ಕತ್ತರಿಸಿಕೊಂಡರೆ, ಆಂಧ್ರದಲ್ಲಿ ಹೆಣ್ಣು ಮಕ್ಕಳ ತಲೆ ಕೂದನ್ನು ಫ್ರೀ ಬಿಡುವಂತೆ ಸೂಚಿಸಿದ್ದು ವರದಿಯಾಗಿದೆ.
ಇಷ್ಟೆಲ್ಲಾ ಬೆಳವಣಿಗೆಯ ನಂತರ ಯುವತಿಯರು ಧೈರ್ಯವಾಗಿ ಪರೀಕ್ಷೆ ಬರೆಯುವುದಾದರೂ ಹೇಗೆ ಎಂದು ಪ್ರಶ್ನಿಸಿರುವ ಕೇರಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಿಂದು ಕೃಷ್ಣಾ, ಈ ಸಂಬಂಧ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ದೂರು ಸಲ್ಲಿಸುವುದಾಗಿ ಹೇಳಿದ್ದಾರೆ.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications