NEET-UG exam Row: ಬಗೆದಷ್ಟು ಹೊರಬರುತ್ತಿದ್ದೆ ನೀಟ್ ಪರೀಕ್ಷೆಯ ಕರ್ಮಕಾಂಡ, 110 ಆಕಾಂಕ್ಷಿಗಳು ಡಿಬಾರ್
ನವದೆಹಲಿ, ಜೂನ್. 24: ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ನೀಟ್-ಯುಜಿ (NEET-UG exam) ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆಯನ್ನು ವಹಿಸಿಕೊಂಡಿದೆ. ತನಿಖೆಗಾಗಿ ತನ್ನ ತಂಡಗಳನ್ನು ಹಲವು ರಾಜ್ಯಗಳಿಗೆ ಕಳುಹಿಸಿದೆ. ಇತ್ತ, ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ಬಿಹಾರ ಪೊಲೀಸ್ನ ಆರ್ಥಿಕ ಅಪರಾಧಗಳ ಘಟಕವು ಐವರನ್ನು ಬಂಧಿಸಿದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 18 ಮಂದಿಯನ್ನು ಬಂಧಿಸಲಾಗಿದೆ.
ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳ ರದ್ದತಿ ಮತ್ತು ಮುಂದೂಡಿಕೆಗೆ ಸಂಬಂಧಿಸಿದಂತೆ ಫ್ಲಾಕ್ ಸ್ವೀಕರಿಸುತ್ತಿರುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA), ಬಿಹಾರದಲ್ಲಿ 17 ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಂದ ಡಿಬಾರ್ ಮಾಡಿದೆ. ಇದೀಗ, ನೀಟ್ ಪೇಪರ್ ಸೋರಿಕೆ ವಿವಾದ ಭುಗಿಲೆದ್ದ ನಂತರ ಒಟ್ಟು 110 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.

ಗ್ರೇಸ್ ಮಾರ್ಕ್ಸ್ ವಿವಾದದ ಹಿನ್ನೆಲೆಯಲ್ಲಿ ಭಾನುವಾರ 1,563 ವಿದ್ಯಾರ್ಥಿಗಳನ್ನು ನೀಟ್ ಪರೀಕ್ಷೆಯನ್ನು ಮತ್ತೆ ಬರೆಯಲು ಹೇಳಲಾಗಿತ್ತು. ಅದರಲ್ಲಿ 813 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಮೇ 5 ರಂದು ಪರೀಕ್ಷೆಯ ಪ್ರಾರಂಭದಲ್ಲಿ ವಿಳಂಬವಾದ ಕಾರಣ ಆರು ಕೇಂದ್ರಗಳಲ್ಲಿ ಸಮಯದ ನಷ್ಟವನ್ನು ಸರಿದೂಗಿಸಲು ಈ ಅಭ್ಯರ್ಥಿಗಳಿಗೆ ಎನ್ಟಿಎ ಗ್ರೇಸ್ ಅಂಕಗಳನ್ನು ನೀಡಿತ್ತು. ಇದು ದೊಡ್ಡ ವಿವಾದಕ್ಕೆ ಕಾರಣವಾಯಿತು. ಹರಿಯಾಣದ ಅದೇ ಕೇಂದ್ರದ ಅಭ್ಯರ್ಥಿಗಳು ಪರಿಪೂರ್ಣ 720 ಅಂಕಗಳನ್ನು ಗಳಿಸಿದ್ದಾರೆ. NEET-UG ಪರೀಕ್ಷೆಯಲ್ಲಿ ದೇಶಾದ್ಯಂತ 67 ವಿದ್ಯಾರ್ಥಿಗಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ.
ಸಿಬಿಐ ತೆಕ್ಕೆಯಲ್ಲಿ ನೀಟ್ ಪರೀಕ್ಷಾ ವಿವಾದ
ಬಿಹಾರ ಮತ್ತು ಗುಜರಾತ್ ಸರ್ಕಾರಗಳು ತಮ್ಮ ಪೊಲೀಸರು ದಾಖಲಿಸಿರುವ NEET-UG ಪೇಪರ್ ಸೋರಿಕೆ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಿವೆ. NEET-UG ಪ್ರಕರಣದಲ್ಲಿ ಸಿಬಿಐ ಸೆಕ್ಷನ್ 20-B (ಅಪರಾಧದ ಪಿತೂರಿ) ಮತ್ತು 420 (ವಂಚನೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಅಭ್ಯರ್ಥಿಗಳು, ಸಂಸ್ಥೆಗಳು ಮತ್ತು ಮಧ್ಯವರ್ತಿಗಳಿಂದ ಒಳಸಂಚು, ವಂಚನೆ, ಸೋಗು ಹಾಕುವಿಕೆ, ನಂಬಿಕೆ ಉಲ್ಲಂಘನೆ ಮತ್ತು ಸಾಕ್ಷ್ಯ ನಾಶ ಸೇರಿದಂತೆ ಆಪಾದಿತ ಅಕ್ರಮಗಳಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಶಿಕ್ಷಣ ಸಚಿವಾಲಯವು ಸಿಬಿಐಗೆ ಸೂಚಿಸಿದೆ. ಇನ್ನು, ಪರೀಕ್ಷಾ ಸುಧಾರಣೆಗಳನ್ನು ಸೂಚಿಸಲು ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸಲು ರಚಿಸಲಾದ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಸಮಿತಿಯು ಸೋಮವಾರ ಸಭೆ ಸೇರಲಿದೆ. ಇಸ್ರೋ ಮಾಜಿ ಮುಖ್ಯಸ್ಥ ಕೆ ರಾಧಾಕೃಷ್ಣನ್ ಇದರ ನೇತೃತ್ವ ವಹಿಸಿದ್ದಾರೆ.
ಒಟ್ಟು 110 ವಿದ್ಯಾರ್ಥಿಗಳು ಡಿಬಾರ್
NEET ಪರೀಕ್ಷೆಯಲ್ಲಿ ಅನ್ಯಾಯದ ವಿಧಾನಗಳನ್ನು ಅಳವಡಿಸಿಕೊಂಡಿದ್ದಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಬಿಹಾರದಲ್ಲಿ 63 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದೆ. ಶನಿವಾರ ಗುಜರಾತ್ನ ಗೋಧರಾದಿಂದ 30 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿದೆ. ಇದೀಗ ಇನ್ನೂ 17 ಮಂದಿ ಡಿಬಾರ್ ಆಗಿದ್ದು, ಒಟ್ಟು 110ಕ್ಕೆ ಏರಿಕೆಯಾಗಿದೆ.
ಭಾನುವಾರ ಸಂಜೆ ಪಾಟ್ನಾ ಪೊಲೀಸರು ಜಾರ್ಖಂಡ್ನ ದಿಯೋಘರ್ನಿಂದ ಬಂಧಿಸಲಾಗಿರುವ ಬಲದೇವ್ ಕುಮಾರ್, ಮುಖೇಶ್ ಕುಮಾರ್, ಪಂಕು ಕುಮಾರ್, ರಾಜೀವ್ ಕುಮಾರ್ ಮತ್ತು ಪರಮ್ಜೀತ್ ಸಿಂಗ್ ಎಂಬುವವರ ಐವರನ್ನು ಬಂಧಿಸಿದ್ದಾರೆ. ಕುಖ್ಯಾತ ಸಂಜೀವ್ ಕುಮಾರ್ ಅಲಿಯಾಸ್ ಲೂಟಾನ್ ಮುಖಿಯಾ ಗ್ಯಾಂಗ್ನೊಂದಿಗೆ ಸಂಬಂಧ ಹೊಂದಿರುವ ಬಲದೇವ್ ಕುಮಾರ್, ಪರೀಕ್ಷೆಯ ಒಂದು ದಿನ ಮೊದಲು ತನ್ನ ಮೊಬೈಲ್ ಫೋನ್ನಲ್ಲಿ ನೀಟ್-ಯುಜಿ ಪರೀಕ್ಷೆಯ ಉತ್ತರ ಪತ್ರಿಕೆಯನ್ನು ಪಿಡಿಎಫ್ ರೂಪದಲ್ಲಿ ಪಡೆದಿದ್ದಾನೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಮೇ 4 ರಂದು ಪಾಟ್ನಾದ ರಾಮಕೃಷ್ಣನಗರದಲ್ಲಿರುವ ಮನೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳಿಗೆ ಬಲದೇವ್ ಮತ್ತು ಅವರ ಸಂಗಡಿಗರು ಉತ್ತರ ಪತ್ರಿಕೆಯನ್ನು ಮುದ್ರಿಸಿದ್ದಾರೆ. ಈ ಹಿಂದೆ ಬಂಧಿತರಾಗಿದ್ದ ನಿತೀಶ್ ಕುಮಾರ್ ಮತ್ತು ಅಮಿತ್ ಆನಂದ್ ವಿದ್ಯಾರ್ಥಿಗಳನ್ನು ಮನೆಗೆ ಕರೆತಂದಿದ್ದರು ಎಂಬುದು ಬಹಿರಂಗವಾಗಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications