NEET-UG 2024 ಫಲಿತಾಂಶ ವಿವಾದ: ಗ್ರೇಸ್ ಅಂಕ ಪಡೆದ 1563 ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ- ಸುಪ್ರೀಂ
NEET-UG ಫಲಿತಾಂಶ ಪ್ರಕಟವಾದ ನಂತರ ರ್ಯಾಂಕ್ ವಿಷಯದಲ್ಲಿ ಭಾರೀ ವಿವಾದ ಶುರುವಾಗಿದ್ದು ಈ ಬಗ್ಗೆ ಇಂದು ಕೋರ್ಟ್ನಲ್ಲಿ ವಿಚಾರಣೆ ನಡೆಯಿತು.
ಇಡಿ-ಟೆಕ್ ಸಂಸ್ಥೆಯ 'ಫಿಸಿಕ್ಸ್ ವಲ್ಲಾ' ಮುಖ್ಯ ಕಾರ್ಯನಿರ್ವಹಕರು ಸಲ್ಲಿಸಿದ್ದ ಅರ್ಜಿ ಸೇರಿದಂತೆ ಮೂರು ಅರ್ಜಿಗಳ ವಿಚಾರಣೆಯನ್ನು ಇಂದು ಮಾಡಲಾಯಿತು. ಸುಪ್ರೀಂಕೋರ್ಟಿನ ನವೀಕರಿಸಿದ ವಿಚಾರಣಾ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನು ಒಳಗೊಂಡ ರಜಾಕಾಲದ ಪೀಠವು 2024ರ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ-ಪದವಿಪೂರ್ವ (ನೀಟ್-ಯುಜಿ), 2024 ರ ನಡವಳಿಕೆಗೆ ಸಂಬಂಧಿಸಿದ ದೂರುಗಳ ಅರ್ಜಿಗಳನ್ನು ವಿಚಾರಣೆ ನಡೆಸಿದರು.

ಈ ವೇಳೆ NEET-UG 2024 ಪರೀಕ್ಷೆ ಮತ್ತು ಅದರ ಫಲಿತಾಂಶಗಳಿಗೆ ಸಂಬಂಧಿಸಿದಂತೆ ವಿವಾದಗಳಿಗೆ ಸಂಬಂಧಿಸಿದಂತೆ ವಿಧ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ವಿದ್ಯಾರ್ಥಿಗಳಿಗೆ ಮಹತ್ವದ ಸಲಹೆ ನೀಡಿದೆ.
ಗ್ರೇಸ್ ಮಾರ್ಕ್ ನೀಡಿದ್ದ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ್ದು, ಗ್ರೇಸ್ ಅಂಕಗಳನ್ನು ಪಡೆದ 1563 ವಿದ್ಯಾರ್ಥಿಗಳು ಮತ್ತೆ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ ಎಂದು ಕೋರ್ಟ್ ಹೇಳಿದೆ. ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಹೀಗಾಗಿ NEET-UG 2024 ಪರೀಕ್ಷೆಯಲ್ಲಿ ಗ್ರೇಸ್ ಅಂಕಗಳನ್ನು ಪಡೆದ ಅಭ್ಯರ್ಥಿಗಳು ಪುನ: ಹಾಜರಾಗಬೇಕಾಗುತ್ತದೆ. ಈ ಪರೀಕ್ಷೆಯ ಫಲಿತಾಂಶ ಜೂನ್ 23ರಂದು ಬಿಡುಗಡೆಯಾಗಲಿದೆ ಎಂದು ಕೋರ್ಟ್ ಹೇಳಿದೆ. ಇದಾದ ಬಳಿಕವಷ್ಟೇ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸಲಾಗುವುದು ಎಂದಿದೆ.

ಸಂಕ್ಷಿಪ್ತವಾಗಿ ಹೇಳುವುದಾದರೆ, ಅಕ್ರಮಗಳ ಬಗ್ಗೆ ಅನುಮಾನಗಳನ್ನು ಎತ್ತುವ ಮೂರು ಅರ್ಜಿಗಳನ್ನು ನ್ಯಾಯಾಲಯವು ಪರಿಗಣಿಸುತ್ತಿದೆ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 1500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ NEET UG 2024 ರ ನಡವಳಿಕೆಯಲ್ಲಿ 'ಸಮಯದ ನಷ್ಟ' ಆಧಾರದ ಮೇಲೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕಿಂಗ್ ನೀಡಲಾಗುತ್ತದೆ.
ಸಮಸ್ಯೆ ಏನು?
ಕಳೆದ ವರ್ಷದ NEET ಫಲಿತಾಂಶಗಳಿಗೆ ಹೋಲಿಸಿದರೆ, ಅವರ ನಿರೀಕ್ಷಿತ ರ್ಯಾಂಕ್ ಶ್ರೇಣಿಗಳು ಈಗ 20ರಿಂದ 25 ಸಾವಿರದಷ್ಟು ಕೆಳಗೆ ಇಳಿದಿದೆ. ಇದರಿಂದಾಗಿ ಅವರು ಬಯಸಿದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಸಿಗುತ್ತಿಲ್ಲ. ವೈದ್ಯಕೀಯ ಪದವಿ ಗಳಿಸುವ ತಮ್ಮ ಕನಸನ್ನು ಈಡೇರಿಸಿಕೊಳ್ಳಲು ಅನಿವಾರ್ಯವಾಗಿ ಸಣ್ಣ ಪಟ್ಟಣಗಳಲ್ಲಿರುವ ವೈದ್ಯಕೀಯ ಕಾಲೇಜುಗಳನ್ನು ನೋಡಬೇಕಾಗಿದೆ ಎಂದು ಹಲವರು ಅಸಹಾಯಕತೆ ತೋರಿಸಿಕೊಳ್ಳುತ್ತಿದ್ದಾರೆ.
ಈ ವರ್ಷದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 720 ಕ್ಕೆ 640 ಅಂಕಗಳನ್ನು ಗಳಿಸಿದ ಮತ್ತು 2024ರಲ್ಲಿ 38,000 ರ್ಯಾಂಕ್ ಪಡೆದ ವಿದ್ಯಾರ್ಥಿಯು 2023 ರ ಮಾನದಂಡಕ್ಕೆ ಹೋಲಿಸಿದ್ದರೆ ತಮ್ಮ ರ್ಯಾಂಕ್ 10 ಸಾವಿರದೊಳಗೆ ಬರಬೇಕಾಗಿತ್ತು ಎನ್ನುತ್ತಾರೆ.
ಈ ಬಗ್ಗೆ TNIE ಪ್ರತಿನಿಧಿಯೊಂದಿಗೆ ಮಾತನಾಡಿದ ಅಖಿಲ್ ಶೀಲಂ, "ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಯ ನಡೆಯಿಂದಾಗಿ ನನ್ನ ರ್ಯಾಂಕ್ ಶ್ರೇಯಾಂಕವು ಶೇಕಡಾ 340ರಷ್ಟು ಏರಿಳಿತ ಕಂಡಿದ್ದು, ಇದು ಸ್ಪರ್ಧಾತ್ಮಕ ಪರೀಕ್ಷೆಗಳ ವಿಚಾರದಲ್ಲಿ ಬಹಳ ಅಪರೂಪ ಪ್ರಕರಣ. ಈ ಹಿಂದೆ ದೇಶದಲ್ಲಿ ಇಂತಹ ಘಟನೆ ಆಗಿರಲಿಲ್ಲ. ನನ್ನ ಸ್ನೇಹಿತ 582 ಅಂಕಗಳನ್ನು ಗಳಿಸಿದ್ದಾನೆ, ಇದು ಬೆಂಗಳೂರಿನಲ್ಲಿ ಖಾಸಗಿ ಅಥವಾ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಉತ್ತಮ ಅಂಕವಾಗಿದೆ. ಆದರೆ ಈಗ, ಅವನು ಈ ವರ್ಷವನ್ನು ಸುಮ್ಮನೆ ಕಳೆದು ಮುಂದಿನ ವರ್ಷ NEET ಪರೀಕ್ಷೆಯನ್ನು ಅನಿವಾರ್ಯವಾಗಿ ತೆಗೆದುಕೊಳ್ಳುವ ಪರಿಸ್ಥಿತಿ ಬಂದಿದೆ ಎನ್ನುತ್ತಾರೆ.
ತನ್ನ ಕಷ್ಟವನ್ನು ವಿವರಿಸಿದ ಅವರು, ನನಗೆ ಬೆಂಗಳೂರಿನ ಕಾಲೇಜಿನಲ್ಲಿ ಓದುವ ಆಸೆಯಿದೆ. ಆದರೆ ರ್ಯಾಂಕಿನ ಏರಿಳಿತದಿಂದ ಎರಡನೇ ದರ್ಜೆ ಹೋಗಬೇಕು ಎನಿಸುತ್ತಿದೆ ಎಂದರು.
ನನ್ನ ಪೋಷಕರು ನನ್ನೊಂದಿಗೆ ಹೋಗಬೇಕಾಗಿರುವುದರಿಂದ ನಮ್ಮ ಜೀವನ ವೆಚ್ಚದ ಮೇಲೆ ಇದು ಪರಿಣಾಮ ಬೀರುತ್ತದೆ. ನಾನು ನಗರದ ಹೊರಗಿನ ಕಾಲೇಜಿನ ಬಗ್ಗೆ ಎಂದಿಗೂ ಯೋಚಿಸಲಿಲ್ಲ, ಆದರೆ ಈಗ ನಾನು ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಹುಬ್ಬಳ್ಳಿಯ ಕಿಮ್ಸ್ ಮತ್ತು ಮಂಡ್ಯ ವೈದ್ಯಕೀಯ ಕಾಲೇಜುಗಳಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ ಎಂದರು.
720 ರಲ್ಲಿ 550 ಮತ್ತು 1.3 ಲಕ್ಷ ರ್ಯಾಂಕ್ ಗಳಿಸಿರುವ ಮತ್ತೊಬ್ಬ ವಿದ್ಯಾರ್ಥಿನಿ ದೇವಿಕಾ ಎನ್, ಈ ವರ್ಷ ಬಿಟ್ಟುಬಿಟ್ಟು ಮುಂದಿನ ವರ್ಷ NEET ಪರೀಕ್ಷೆ ಬರೆಯುವ ಅನಿವಾರ್ಯ ಪರಿಸ್ಥಿತಿ ನನಗೆ ಉಂಟಾಗಿದೆ. ಈ ವರ್ಷದ ರ್ಯಾಂಕ್ ಹಿಡಿದು ಹೋದರೆ ಗ್ರಾಮೀಣ ಪ್ರದೇಶದ ಕಾಲೇಜಿನಲ್ಲಿ ಕೂಡ ನನಗೆ ಪ್ರವೇಶ ಸಿಗುವುದಿಲ್ಲ. ನನ್ನ ಪೋಷಕರಿಗೆ ಖಾಸಗಿ ಕಾಲೇಜುಗಳಲ್ಲಿ ಸೀಟು ಗಿಟ್ಟಿಸುವಷ್ಟು ಆರ್ಥಿಕ ಪರಿಸ್ಥಿತಿಯಿಲ್ಲ ಎಂದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications