ಅಂದು ನೆಹರೂ ಬದಲು ಇಂದಿರಾಗಾಂಧಿ ಪ್ರಧಾನಿಯಾಗಿದ್ದರೆ, ನೇಪಾಳ ಭಾರತದ ಭಾಗವಾಗುತ್ತಿತ್ತು: ಪ್ರಣಬ್ ಮುಖರ್ಜಿ
ನವದೆಹಲಿ, ಜನವರಿ 06: ಅಂದು ನೆಹರೂ ಬದಲು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೆ ನೇಪಾಳವು ಭಾರತದ ಭಾಗವಾಗಿರುತ್ತಿತ್ತು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.
ಅವರ ಆತ್ಮಚರಿತ್ರೆ ದಿ ಪ್ರೆಸಿಡೆನ್ಷಿಯಲ್ ಇಯರ್ಸ್ ನಿನ್ನೆಯಷ್ಟೇ ಬಿಡುಗಡೆಯಾಗಿದೆ.ಅದರಲ್ಲಿ ಅಂದು ಜವಾಹರ್ಲಾಲ್ ನೆಹರೂ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನೇಪಾಳದ ರಾಜ ತ್ರಿಭುವನ್ ಬೀರ್ ಬಿಕ್ರಮ್ ಸಿಂಗ್ ಶಾಹ್ ನೇಪಾಳವನ್ನು ಭಾರತಕ್ಕೆ ಸೇರಿಸುವ ಮಾತನ್ನು ಮುಂದಿಟ್ಟಿದ್ದರು. ಆದರೆ ನೆಹರೂ ಅದನ್ನು ತಿರಸ್ಕರಿಸಿದ್ದರು. ಆ ಸಂದರ್ಭದಲ್ಲಿ ಇಂದಿರಾ ಗಾಂಧಿ ಪ್ರಧಾನಿಯಾಗಿದ್ದರೇ ಖಂಡಿತವಾಗಿಯೂ ನೇಪಾಳ ಭಾರತದ ಭಾಗವಾಗಿರುತ್ತಿತ್ತು ಎಂದು ಮುಖರ್ಜಿ ಬರೆದಿದ್ದಾರೆ.
ಪ್ರತಿಯೊಬ್ಬ ಪ್ರಧಾನಿಗೂ ತನ್ನದೇ ಆದ ಕಾರ್ಯಶೈಲಿ ಇರುತ್ತದೆ. ಲಾಲ್ಬಹದ್ದೂರ್ ಶಾಸ್ತ್ರಿ ನೆಹರೂ ಅವರಿಗಿಂತ ವಿಭಿನ್ನವಾಗಿದ್ದರು.

ಅವರು ತಮ್ಮ ಆತ್ಮಚರಿತ್ರೆಯಲ್ಲಿ ಮತ್ತೊಂದು ವಿಷಯವನ್ನು ಪ್ರಸ್ತಾಪಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಭಿನ್ನಮತೀಯರ ಮಾತುಗಳನ್ನು ಖಂಡಿತವಾಗಿಯೂ ಕೇಳಬೇಕು, ಸಂಸತ್ತಿನಲ್ಲಿ ಹೆಚ್ಚೆಚ್ಚು ಮಾತನಾಡಬೇಕು, ವಿರೋಧ ಪಕ್ಷದವರಿಗೆ ಮನದಟ್ಟು ಮಾಡಲು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಲು ಸಂಸತ್ತಿನ ವೇದಿಕೆಯನ್ನು ಅವರು ಸರಿಯಾಗಿ ಬಳಸಿಕೊಂಡು ದೇಶಕ್ಕೆ ಸ್ಪಷ್ಟ ಸಂದೇಶ ರವಾನಿಸಬೇಕು ಎಂದಿದ್ದಾರೆ.
ಪ್ರಧಾನ ಮಂತ್ರಿಯವರು ಈಗ ತಮ್ಮ ಎರಡನೇ ಅವಧಿಯಲ್ಲಿ ತಮ್ಮ ಹಿಂದಿನ ಪ್ರಧಾನ ಮಂತ್ರಿಗಳ ಕಾರ್ಯವೈಖರಿಯಿಂದ ಸ್ಪೂರ್ತಿ ಪಡೆದುಕೊಂಡು ಪ್ರಬಲ ನಾಯಕತ್ವ ನೀಡಿ, ತಮ್ಮ ಇರುವಿಕೆಯನ್ನು ಸಂಸತ್ತಿನಲ್ಲಿ ತೋರಿಸಿಕೊಡುವ ಮೂಲಕ ಮೊದಲ ಅವಧಿಯಲ್ಲಿ ಆದಂತೆ ಸಂಸತ್ತಿನ ಬಿಕ್ಕಟ್ಟು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಬರೆದಿದ್ದಾರೆ.
ಪ್ರಧಾನಿ ಭೌತಿಕವಾಗಿ ಸಂಸತ್ತಿನಲ್ಲಿ ಹಾಜರಿದ್ದರೂ ಅದರಿಂದ ಸಾಕಷ್ಟು ಬದಲಾವಣೆಯನ್ನು ತರಬಹುದು, ಅದು ಜವಹರಲಾಲ್ ಆಗಿರಲಿ, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಅಥವಾ ಡಾ ಮನಮೋಹನ್ ಸಿಂಗ್ ಅವರಾಗಿರಲಿ ಪ್ರತಿಯೊಬ್ಬರೂ ಮಾಜಿ ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ತಮ್ಮ ಇರುವಿಕೆಯ ಅಗತ್ಯವನ್ನು ತೋರಿಸಿಕೊಟ್ಟಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications