ನೆಹರೂ ಅಜ್ಜ ಮುಸ್ಲಿಂ: ನರೇಂದ್ರ ಮೋದಿ ಮಾತನಾಡಲಿ
ನವದೆಹಲಿ ಜು, 02: : ಆನ್ಲೈನ್ ವಿಶ್ವಕೋಶ ವಿಕಿಪೀಡಿಯಾದಲ್ಲಿ ಪಂಡಿತ್ ಜವಾಹರ್ಲಾಲ್ ನೆಹರೂ ಕುರಿತ ವೈಯಕ್ತಿಕ ಮಾಹಿತಿ ತಿರುಚಿದ ಪ್ರಕರಣ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತಿವೆ.
ಪ್ರಧಾನ ಮಂತ್ರಿ ಕಚೇರಿಯ ಐಪಿ ವಿಳಾಸದಿಂದಲೇ ತಿದ್ದುಪಡಿ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.[ನೇತಾಜಿ ಮೇಲೆ ಸ್ಪೈ, ನೆಹರೂ ಜನ್ಮ ಜಾಲಾಡಿದ ಟ್ವಿಟ್ಟರಿಗರು]

ಒಂದೆಡೆ ಡಿಜಿಟಲ್ ಇಂಡಿಯಾವನ್ನು ಜಾರಿ ಮಾಡುವ ಪ್ರಧಾನಿ ಇನ್ನೊಂದೆಡೆ ಇಂಥ ಪ್ರಕರಣಗಳ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸುರ್ಜೆವಾಲಾ ಆರೋಪ ಮಾಡಿದ್ದಾರೆ.
ಲಲಿತ್ ಮೋದಿ ವೀಸಾ ವಿವಾದ, ನಕಲಿ ಪದವಿ ವಿವಾದ ದಲ್ಲಿ ಸಿಲುಕಿರುವ ಬಿಜೆಪಿಗೆ ಇಂಥ ವಿಚಾರಗ ಬಗ್ಗೆ ತಲೆ ಕೆಡಿಸಿಕೊಳ್ಳಲು ಸಮಯವಿಲ್ಲ ಎಂದು ವ್ಯಂಗವಾಡಿದ್ದಾರೆ.[ನೆಹರೂ, ಇಂದಿರಾಗಿಂತ ಮನಮೋಹನ್ ಶ್ರೇಷ್ಠ]
ತಿದ್ದುಪಡಿ ಮಾಡಿದ ವಿಚಾರವೇನು?
ಪಂಡಿತ್ ಜವಾಹರಲಾಲ್ ನೆಹರು ಅವರ ಅಜ್ಜ ಗಂಗಾಧರ ನೆಹರು ಮುಸ್ಲಿಮರಾಗಿದ್ದರು ಎಂದು ತಿದ್ದುಪಡಿಯಾಗಿತ್ತು. ಗಂಗಾಧರ ನೆಹರು ಮುಸ್ಲಿಂ ಕುಟುಂಬದಲ್ಲಿ ಜನಿಸಿದ್ದರು. ಘಿಯಾಸುದ್ದೀನ್ ಘಾಜಿ ಎನ್ನುವುದು ಅವರ ಹೆಸರಾಗಿತ್ತು. ಆದರೆ, ಬ್ರಿಟಿಷರ ಕಪಿಮುಷ್ಠಿಯಿಂದ ತಪ್ಪಿಸಿಕೊಳ್ಳಲು ಅವರು ಹಿಂದೂ ಆಗಿ ಮತಾಂತರ ಹೊಂದಿದ್ದರು ಎಂದು ಉಲ್ಲೇಖವಾಗಿದ್ದೇ ವಿವಾದದ ಕೇಂದ್ರ ಬಿಂದು. ಆದರೆ ಈ ಮಾಹಿತಿಗಳನ್ನು ವಿಕಿಪೀಡಿಯಾದ 'ಎನ್ಸೈಕ್ಲೋಪೀಡಿಯಾ ಎಡಿಟರ್' ಸ್ವಯಂ ಡಿಲೀಟ್ ಮಾಡಿದೆ.
ಯಾರೂ ಬೇಕಾದರೂ ತಿದ್ದುಪಡಿ ಮಾಡಬಹುದು
ವಿಕಿಪೀಡಿಯಾದ ಪೇಜ್ ನ್ನು ಯಾರೂ ಬೇಕಾದರೂ ತಿದ್ದುಪಡಿ ಮಾಡಲು ಸಾಧ್ಯವಿದೆ. ಎಡಿಟ್ ಆಯ್ಕೆಗೆ ತೆರಳಿ ಹೊಸ ಮಾಹಿತಿಯನ್ನು ಸೇರಿಸಬಹುದು. ಪ್ರಧಾನಿ ಕಚೇರಿಯಿಂದಲೇ ತಿದ್ದುಪಡಿಯಾಗಿದ್ದು ವಿವಾದ ಮತ್ತಷ್ಟು ತಾರಕ್ಕೇರಲು ಕಾರಣವಾಗಿದೆ. ಆದರೆ ಇಲ್ಲಿಯವರೆಗೆ ಬಿಜೆಪಿ ಅಥವಾ ಯಾವುದೇ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications