ಕಡತದೊಳಗಿನ ಸತ್ಯ: ನೇತಾಜಿ 1945ರ ನಂತರವೂ ಬದುಕಿದ್ದರು
ಕೋಲ್ಕತ್ತಾ, ಸೆಪ್ಟೆಂಬರ್. 18: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1945ರ ನಂತರವೂ ಬದುಕಿದ್ದರು ಎಂಬುದಕ್ಕೆ ಕೆಲ ಕಡತಗಳು ಸಾಕ್ಷಿ ಹೇಳುತ್ತವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಈ ಆಧಾರದಲ್ಲಿಯೇ ಅವರ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ನೇತಾಜಿ ಆಗಸ್ಟ್ 18, 1945 ರಂದು ತೈವಾನ್ ವಿಮಾನ ದುರಂತದಲ್ಲಿ ಕಣ್ಮರೆಯಾದರು ಎಂದು ಇತಿಹಾಸ ಹೇಳುತ್ತದೆ.[ನೇತಾಜಿ ರಹಸ್ಯ ಬಯಲು : ಮಮತಾ ಸೂಪರ್ ಟೈಮಿಂಗ್]

ದಾಖಲೆಗಳು ನೇತಾಜಿ ಬದುಕಿದ್ದರು ಎನ್ನುತ್ತವೆ
ನೇತಾಜಿಗೆ ಸಂಬಂಧಿಸಿದ 64 ದಾಖಲೆಗಳನ್ನು ಪಶ್ಚಿಮ ಬಂಗಾಳ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ ನೇತಾಜಿ ಮತ್ತು ಒಂದು ಮಗುವಿನ ಬಗ್ಗೆ ಉಲ್ಲೇಖ ಬರುತ್ತಿದ್ದು ಅದರ ಆಧಾರದಲ್ಲಿಯೇ ಬೇಹುಗಾರಿಕೆ ನಡೆದಿದೆ ಎಂದು ಹೇಳಿದ್ದಾರೆ.
ಕುಟುಂಬದ ಮೂಲ ಹುಡುಕಾಟ
ನೇತಾಜಿ ಕುಟುಂಬದ ಮೇಲೆ ಒಟ್ಟು 14 ಗುಪ್ತಚರ ದಳಗಳು ನಿರಂತರವಾಗಿ ಮಾಹಿತಿ ಸಂಗ್ರಹಿಸುತ್ತಲೇ ಇದ್ದವು. ಪಶ್ಚಿಮ ಬಂಗಾಳ 1967ರ ತನಕ ಕಾಂಗ್ರೆಸ್ ಆಡಳಿತದ ಅಡಿಯಲ್ಲೇ ಇತ್ತು. ಹಾಗಾಗಿ ಸರ್ಕಾರದ ಆದೇಶಕ್ಕೆ ಅನುಗುಣವಾಗಿಯೇ ಸಂಸ್ಥೆಗಳು ನಡೆದುಕೊಳ್ಳುತ್ತಿದ್ದವು ಎಂದು ಮಮತಾ ಹೇಳಿದರು.[ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದ 64 ರಹಸ್ಯ ದಾಖಲೆ ಬಹಿರಂಗ]
ದಾಖಲೆಗಳ ಬಗ್ಗೆ ಸ್ಪಷ್ಟನೆ
ಕೇಂದ್ರ ಸರ್ಕಾರದ ಮೇಲೆ ಈ ಎಲ್ಲ ದಾಖಲೆಗಳ ಬಗ್ಗೆ ಸ್ಪಷ್ಟವಾದ ವಿವರ ನೀಡುವ ಜವಾಬ್ದಾರಿ ಇದೆ. ಇಂಥ ವಿಚಾರಗಳನ್ನು ಅಡಗಿಸುವುದರಿಂದ ಯಾವ ಲಾಭವಿದೆ ಎಂಬುದು ತಿಳಿಯುತ್ತಿಲ್ಲ. ನಾನು ನನ್ನ ಆಡಳಿತದ ಅಡಿ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ಕೇಂದ್ರ ಸರ್ಕಾರ ಇನ್ನು 130 ಫೈಲ್ ಗಳನ್ನು ಬಹಿರಂಗ ಮಾಡಬೇಕಿದೆ ಎಂದು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications