ಕಡತದೊಳಗಿನ ಸತ್ಯ: ನೇತಾಜಿ 1945ರ ನಂತರವೂ ಬದುಕಿದ್ದರು
ಕೋಲ್ಕತ್ತಾ, ಸೆಪ್ಟೆಂಬರ್. 18: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು 1945ರ ನಂತರವೂ ಬದುಕಿದ್ದರು ಎಂಬುದಕ್ಕೆ ಕೆಲ ಕಡತಗಳು ಸಾಕ್ಷಿ ಹೇಳುತ್ತವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.
ಈ ಆಧಾರದಲ್ಲಿಯೇ ಅವರ ಕುಟುಂಬದ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ. ನೇತಾಜಿ ಆಗಸ್ಟ್ 18, 1945 ರಂದು ತೈವಾನ್ ವಿಮಾನ ದುರಂತದಲ್ಲಿ ಕಣ್ಮರೆಯಾದರು ಎಂದು ಇತಿಹಾಸ ಹೇಳುತ್ತದೆ.[ನೇತಾಜಿ ರಹಸ್ಯ ಬಯಲು : ಮಮತಾ ಸೂಪರ್ ಟೈಮಿಂಗ್]

ದಾಖಲೆಗಳು ನೇತಾಜಿ ಬದುಕಿದ್ದರು ಎನ್ನುತ್ತವೆ
ನೇತಾಜಿಗೆ ಸಂಬಂಧಿಸಿದ 64 ದಾಖಲೆಗಳನ್ನು ಪಶ್ಚಿಮ ಬಂಗಾಳ ಸರ್ಕಾರ ಬಿಡುಗಡೆ ಮಾಡಿದೆ. ಇದರಲ್ಲಿ ನೇತಾಜಿ ಮತ್ತು ಒಂದು ಮಗುವಿನ ಬಗ್ಗೆ ಉಲ್ಲೇಖ ಬರುತ್ತಿದ್ದು ಅದರ ಆಧಾರದಲ್ಲಿಯೇ ಬೇಹುಗಾರಿಕೆ ನಡೆದಿದೆ ಎಂದು ಹೇಳಿದ್ದಾರೆ.
ಕುಟುಂಬದ ಮೂಲ ಹುಡುಕಾಟ
ನೇತಾಜಿ ಕುಟುಂಬದ ಮೇಲೆ ಒಟ್ಟು 14 ಗುಪ್ತಚರ ದಳಗಳು ನಿರಂತರವಾಗಿ ಮಾಹಿತಿ ಸಂಗ್ರಹಿಸುತ್ತಲೇ ಇದ್ದವು. ಪಶ್ಚಿಮ ಬಂಗಾಳ 1967ರ ತನಕ ಕಾಂಗ್ರೆಸ್ ಆಡಳಿತದ ಅಡಿಯಲ್ಲೇ ಇತ್ತು. ಹಾಗಾಗಿ ಸರ್ಕಾರದ ಆದೇಶಕ್ಕೆ ಅನುಗುಣವಾಗಿಯೇ ಸಂಸ್ಥೆಗಳು ನಡೆದುಕೊಳ್ಳುತ್ತಿದ್ದವು ಎಂದು ಮಮತಾ ಹೇಳಿದರು.[ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದ 64 ರಹಸ್ಯ ದಾಖಲೆ ಬಹಿರಂಗ]
ದಾಖಲೆಗಳ ಬಗ್ಗೆ ಸ್ಪಷ್ಟನೆ
ಕೇಂದ್ರ ಸರ್ಕಾರದ ಮೇಲೆ ಈ ಎಲ್ಲ ದಾಖಲೆಗಳ ಬಗ್ಗೆ ಸ್ಪಷ್ಟವಾದ ವಿವರ ನೀಡುವ ಜವಾಬ್ದಾರಿ ಇದೆ. ಇಂಥ ವಿಚಾರಗಳನ್ನು ಅಡಗಿಸುವುದರಿಂದ ಯಾವ ಲಾಭವಿದೆ ಎಂಬುದು ತಿಳಿಯುತ್ತಿಲ್ಲ. ನಾನು ನನ್ನ ಆಡಳಿತದ ಅಡಿ ಏನು ಮಾಡಬೇಕೋ ಅದನ್ನು ಮಾಡಿದ್ದೇನೆ. ಕೇಂದ್ರ ಸರ್ಕಾರ ಇನ್ನು 130 ಫೈಲ್ ಗಳನ್ನು ಬಹಿರಂಗ ಮಾಡಬೇಕಿದೆ ಎಂದು ಹೇಳಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications