ಸೇಕ್ರೆಡ್ ಗೇಮ್ಸ್ ನಲ್ಲಿ ರಾಜೀವ್ ಬಗ್ಗೆ ಡೈಲಾಗ್, ರಾಹುಲ್ ಪ್ರತಿಕ್ರಿಯೆ
ನವದೆಹಲಿ, ಜುಲೈ 15: ನೆಟ್ ಫ್ಲಿಕ್ಸ್ ನ ಜನಪ್ರಿಯ ವೆಬ್ ಸರಣಿ 'ಸೇಕ್ರೆಡ್ ಗೇಮ್ಸ್'ನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ನಿಂದಿಸುವಂಥ ಡೈಲಾಗ್ ಇಡಲಾಗಿದೆ ಎಂಬ ಆರೋಪದ ಬಗ್ಗೆ ಎಐಸಿಸಿ ಅಧ್ಯಕ್ಷ, ರಾಜೀವ್ ಗಾಂಧಿ ಅವರ ಪುತ್ರ ರಾಹುಲ್ ಗಾಂಧಿ ಅವರು ಪ್ರತಿಕ್ರಿಯಿಸಿದ್ದಾರೆ.
'ನನ್ನ ತಂದೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಒಂದು ವೆಬ್ ಸರಣಿ ನನ್ನ ತಂದೆಯ ಖ್ಯಾತಿಯನ್ನು ಕುಗ್ಗಿಸಲು ಸಾಧ್ಯವಿಲ್ಲ' ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಆರ್ಎಸ್ಎಸ್ ಮತ್ತು ಬಿಜೆಪಿ ವಾಕ್ ಸ್ವಾತಂತ್ರವನ್ನು ಹತ್ತಿಕ್ಕಲು ನೋಡುತ್ತದೆ. ಆದರೆ, ನಾವು ವಾಕ್ ಸ್ವಾತಂತ್ರ್ಯವನ್ನು ಗೌರವಿಸುತ್ತೇವೆ. ನನ್ನ ತಂದೆ ದೇಶಕ್ಕಾಗಿ ಬದುಕಿದ್ದರು ಮತ್ತು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಟ ನವಾಜುದ್ದೀನ್ ಸಿದ್ದಿಕಿ, ನೆಟ್ಫ್ಲಿಕ್ಸ್ ವೆಬ್ ಸರಣಿಯ ನಿರ್ಮಾಪಕರ ವಿರುದ್ಧ ಕೋಲ್ಕತ್ತಾ ಪೊಲೀಸ್ ಠಾಣೆಯಲ್ಲಿ ಪಶ್ಚಿಮ ಬಂಗಾಲದ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದು, ರಾಜೀವ್ ಗಾಂಧಿ ಅವರನ್ನು ಅವಮಾನಿಸುವಂಥ ಸಂಭಾಷಣೆ ಇಡಲಾಗಿದೆ ಎಂದು ಆರೋಪಿಸಿದ್ದರು.
BJP/RSS believe the freedom of expression must be policed & controlled. I believe this freedom is a fundamental democratic right.
— Rahul Gandhi (@RahulGandhi) July 14, 2018
My father lived and died in the service of India. The views of a character on a fictional web series can never change that.#SacredGames
ರಾಜೀವ್ ಕುಮಾರ್ ಸಿನ್ಹಾ ಎಂಬುವರು ಕೋಲ್ಕತ್ತಾದ ಗಿರೀಶ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ರಾಜೀವ್ ಗಾಂಧಿ ವಿರುದ್ಧ ಅಸಂವಿಧಾನಿಕ ಪದಗಳನ್ನು ಬಳಸಲಾಗಿದೆ. ಇದು ದೇಶದ ಜನತೆಗೆ ತಪ್ಪು ಸಂದೇಶ ನೀಡುತ್ತದೆ ಎಂದು ತಿಳಿಸಿದ್ದರು.
ವಿಕ್ರಮ್ ಚಂದ್ರ ಎಂಬವರ ಕಾದಂಬರಿ ಆಧಾರಿತ ಕಥೆಯನ್ನು ಅನುರಾಗ್ ಕಶ್ಯಪ್ ನಿರ್ದೇಶಿಸಿದ್ದಾರೆ. ಇನ್ನು ಸೈಫ್ ಅಲಿ ಖಾನ್, ನವಾಜುದ್ದೀನ್ ಸಿದ್ದಿಕಿ ಹಾಗೂ ರಾಧಿಕಾ ಅಪ್ಟೆ ಮುಖ್ಯ ಭೂಮಿಕೆಯಲ್ಲಿದ್ದು, ಈಗಾಗಲೇ ಈ ವೆಬ್ ಸರಣಿ ವೀಕ್ಷಕರ ಮನ ಗೆದ್ದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications