ಸಿಂಗಪುರ ರೂಪಾಂತರ ಸೋಂಕಿನ ಕುರಿತು ಹೇಳಿಕೆ; ನೆಟ್ಟಿಗರ ಆಕ್ರೋಶ
ನವದೆಹಲಿ, ಮೇ 19: ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ರೂಪಾಂತರ ಸೋಂಕು ಅತ್ಯಂತ ಅಪಾಯಕಾರಿಯಾಗಿದ್ದು, ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎಂಬ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಆಕ್ರೋಶ ವ್ಯಕ್ತಗೊಂಡಿದ್ದು, ಅರವಿಂದ್ ಕೇಜ್ರಿವಾಲ್ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಅವರ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಎಂದು ಸಿಂಗಪುರದ ನೆಟ್ಟಿಗರು ಆಗ್ರಹಿಸಿದ್ದಾರೆ.
"ಸಿಂಗಪುರದಲ್ಲಿ ಪತ್ತೆಯಾಗಿರುವ ಕೊರೊನಾ ರೂಪಾಂತರ ಸೋಂಕು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು. ಮಕ್ಕಳ ಮೇಲೆ ಇದು ಹೆಚ್ಚಿನ ಪರಿಣಾಮ ಬೀರುತ್ತದೆ. ಹೀಗಾಗಿ ಕೂಡಲೇ ಸಿಂಗಪುರ-ಭಾರತದ ನಡುವಿನ ವಿಮಾನ ಯಾನವನ್ನು ರದ್ದುಪಡಿಸಬೇಕು. ಮಕ್ಕಳಿಗೆ ಶೀಘ್ರವೇ ಲಸಿಕೆ ಅಭಿವೃದ್ಧಿ ಪಡಿಸುವತ್ತ ಚಿಂತನೆ ನಡೆಸಬೇಕು" ಎಂದು ಕೇಂದ್ರಕ್ಕೆ ಆಗ್ರಹಿಸಿ ಟ್ವೀಟ್ ಮಾಡಿದ್ದರು.
ಈ ಹೇಳಿಕೆಗೆ ಸಿಂಗಪುರದ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. B.1.617 ಕೊರೊನಾ ರೂಪಾಂತರ ನಿಮ್ಮ ದೇಶದಿಂದಲೇ ಬಂದಿರುವುದು ಎಂದು ಪ್ರತಿಕ್ರಿಯಿಸಿದ್ದಾರೆ.

ಸಿಂಗಪುರ ವಿದೇಶಾಂಗ ಸಚಿವ ವಿವಿಯನ್ ಬಾಲಕೃಷ್ಣನ್ ಅವರು ಕೂಡ ಟ್ವೀಟ್ ಮಾಡಿದ್ದು, "ಸಿಂಗಪುರ ಕೊರೊನಾ ರೂಪಾಂತರ ಸೋಂಕು ಎಂಬುದೇ ಇಲ್ಲ. ರಾಜಕಾರಣಿಗಳು ಸತ್ಯ ಅರಿತು ಮಾತನಾಡಬೇಕು. ಕೇಜ್ರಿವಾಲ್ ಹೇಳಿಕೆಯಿಂದ ಉಂಟಾದ ಗೊಂದಲ ನಿವಾರಿಸಿದ್ದಕ್ಕೆ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಧನ್ಯವಾದ" ಎಂದು ಟ್ವೀಟ್ ಮಾಡಿದ್ದಾರೆ.
ಸಿಂಗಪುರದ ಭಾರತೀಯ ರಾಯಭಾರಿ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಕೊರೊನಾ ವಿರುದ್ಧದ ಹೋರಾಟದಲ್ಲಿ ಸಿಂಗಪುರ ಮತ್ತು ಭಾರತ ಜೊತೆಯಾಗಿದೆ. ಆಮ್ಲಜನಕ ಸರಬರಾಜು ಮೊದಲಾದ ವಿಚಾರದಲ್ಲಿ ಸಿಂಗಪುರದ ಸಹಾಯ ಶ್ಲಾಘನಾರ್ಹ. ಕೆಲವರ ಬೇಜವಾಬ್ದಾರಿ ಹೇಳಿಕೆಗಳು ಉಭಯ ದೇಶಗಳ ಸಂಬಂಧಕ್ಕೆ ಹಾನಿ ಉಂಟು ಮಾಡುತ್ತದೆ. ಆದ್ದರಿಂದ ದೆಹಲಿ ಸಿಎಂ ಭಾರತದ ಪರವಾಗಿ ಮಾತನಾಡುತ್ತಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications