ಕೆನಡಾ ಪಾಸ್ಪೋರ್ಟ್ ಇದೆ, ಆದರೆ ತೆರಿಗೆ ಕಟ್ಟುವುದು ಭಾರತಕ್ಕೆ: ಅಕ್ಷಯ್ ಕುಮಾರ್
ನವದೆಹಲಿ, ಮೇ 3: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಇರುವುದಕ್ಕೆ ತೀವ್ರ ಟೀಕೆಗೆ ಗುರಿಯಾಗಿದ್ದ ನಟ ಅಕ್ಷಯ್ ಕುಮಾರ್ ಅವರ ಪೌರತ್ವದ ಬಗ್ಗೆ ಪ್ರಶ್ನೆಗಳು ವ್ಯಕ್ತವಾಗಿದ್ದವು. ಅವುಗಳಿಗೆ ಅಕ್ಷಯ್ ಕುಮಾರ್ ಸ್ಪಷ್ಟೀಕರಣ ನೀಡಿದ್ದಾರೆ.
'ನಾನು ಕೆನಡಾ ಪಾಸ್ಪೋರ್ಟ್ ಹೊಂದಿರುವುದನ್ನು ಬಚ್ಚಿಟ್ಟಿಲ್ಲ ಅಥವಾ ನಿರಾಕರಿಸಿಲ್ಲ. ನಾನು ಭಾರತದಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಎಲ್ಲ ತೆರಿಗೆಗಳನ್ನೂ ಭಾರತದಲ್ಲಿ ಕಟ್ಟುತ್ತೇನೆ' ಎಂದು ಅಕ್ಷಯ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಷಯ್ ಕುಮಾರ್ ಅವರ ಪತ್ನಿ ಟ್ವಿಂಕಲ್ ಖನ್ನಾ, ಮುಂಬೈನಲ್ಲಿ ಮತದಾನ ಮಾಡಿದ ಬಳಿಕ ಅದರ ಸೆಲ್ಫಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು. ಆದರೆ ಅಕ್ಷಯ್ ಕುಮಾರ್ ಹೆಸರು ಮತಗಟ್ಟೆಗಳಲ್ಲಿ ಕಾಣಿಸಿರಲಿಲ್ಲ. ದೇಶಭಕ್ತಿಯ ಬಗ್ಗೆ ಸಿನಿಮಾಗಳನ್ನು ಮಾಡುವ ಅಕ್ಷಯ್ ಮತದಾನವನ್ನೇ ಮಾಡಿಲ್ಲ ಎಂದು ಟ್ರೋಲ್ ಮಾಡಲಾಗಿತ್ತು.

ಈಗ ತಮ್ಮ ಕೆನಡಾ ಪೌರತ್ವದ ಬಗ್ಗೆ ಅಕ್ಷಯ್ ಅಧಿಕೃತ ಸ್ಪಷ್ಟೀಕರಣ ನೀಡಿದ್ದಾರೆ. 'ನನ್ನ ನಾಗರಿಕತ್ವದ ಕುರಿತು ಅನಗತ್ಯ ಆಸಕ್ತಿ ಮತ್ತು ನಕಾರಾತ್ಮಕ ವಿಚಾರ ಹರಡುತ್ತಿರುವುದು ಏಕೆಂದು ನನಗೆ ನಿಜಕ್ಕೂ ಅರ್ಥವಾಗುತ್ತಿಲ್ಲ. ನಾನು ಕೆನಡಾ ಪಾಸ್ಪೋರ್ಟ್ ಹೊಂದಿದ್ದೇನೆ ಎಂಬುದನ್ನು ಬಚ್ಚಿಟ್ಟಿಲ್ಲ, ನಿರಾಕರಿಸಿಯೂ ಇಲ್ಲ. ಕಳೆದ ಏಳು ವರ್ಷಗಳಿಂದ ಕೆನಡಾಕ್ಕೆ ನಾನು ಭೇಟಿ ನೀಡಿಲ್ಲ ಎನ್ನುವುದೂ ಅಷ್ಟೇ ಸತ್ಯ. ನಾನು ಭಾರತದಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಎಲ್ಲ ತೆರಿಗೆಗಳನ್ನೂ ಭಾರತದಲ್ಲಿಯೇ ಪಾವತಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
— Akshay Kumar (@akshaykumar) 3 May 2019
'ಇಷ್ಟು ವರ್ಷಗಳಲ್ಲಿ ನಾನು ಭಾರತದೆಡೆಗಿನ ನನ್ನ ಪ್ರೀತಿಯನ್ನು ಯಾರಿಗೂ ಸಾಬೀತುಪಡಿಸಬೇಕಿರಲಿಲ್ಲ. ಅನಗತ್ಯವಾದ ವಿವಾದಕ್ಕೆ ನನ್ನ ಪೌರತ್ವದ ವಿಚಾರವನ್ನು ನಿರಂತರವಾಗಿ ಎಳೆದು ತರುತ್ತಿರುವುದಕ್ಕೆ ನನಗೆ ಬೇಸರವಾಗಿದೆ. ಇದು ವೈಯಕ್ತಿಕ, ಕಾನೂನಾತ್ಮಕ ಮತ್ತು ರಾಜಕೀಯೇತರ ವಿಚಾರ. ಮತ್ತು ಬೇರೆಯವರಿಗೆ ಸಂಬಂಧಿಸಿದ್ದೂ ಅಲ್ಲ. ಕೊನೆಯದಾಗಿ, ನಾನು ಭಾರತವನ್ನು ಹೆಚ್ಚು ಹೆಚ್ಚು ಬಲಗೊಳಿಸುವ ಕಾರ್ಯಗಳನ್ನು ನಂಬಿರುವ ನನ್ನ ಸಣ್ಣ ಕೊಡುಗೆಯನ್ನು ಮುಂದುವರಿಸಲು ಬಯಸುತ್ತೇನೆ' ಎಂದು ಹೇಳಿದ್ದಾರೆ.
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications