ವಿಕಿಲೀಕ್ಸ್ ಸ್ಪಷ್ಟನೆ : ತೀವ್ರ ಮುಜುಗರಕ್ಕೀಡಾದ ಮೋದಿ
ನವದೆಹಲಿ, ಮಾ 18: ಜಗತ್ತಿನ ಪ್ರಮುಖ ನಾಯಕರ ಬಣ್ಣ ಬಯಲು ಮಾಡುತ್ತಿರುವ ವಿಕಿಲೀಕ್ಸ್, ಭಾರತೀಯ ಜನತಾ ಪಕ್ಷ ಮತ್ತು ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಮುಜುಗರಕ್ಕೀಡು ಮಾಡುವ ಸತ್ಯವನ್ನು ತೆರೆದಿಟ್ಟಿದೆ.
ನರೇಂದ್ರ ಮೋದಿ ಭ್ರಷ್ಟರಾಗಲು ಸಾಧ್ಯವೇ ಇಲ್ಲ ಎಂದು ತಾನು ಯಾವತ್ತೂ ಹೇಳಿ ಕೊಂಡಿಲ್ಲವೆಂದು ವಿಕಿಲೀಕ್ಸ್ ಸರಣಿ ಟ್ವೀಟ್ ಗಳ ಮೂಲಕ ಸಮಜಾಯಿಷಿ ನೀಡಿದೆ. ಮೋದಿ ಒಬ್ಬ ಪ್ರಾಮಾಣಿಕ ವ್ಯಕ್ತಿ ಮತ್ತು ಭಾರತದ ಏಕೈಕ ಕಳಂಕರಹಿತ ರಾಜಕಾರಣಿ ಎನ್ನುವ ಅರ್ಥದಲ್ಲಿ ನಮ್ಮ ಸಂಸ್ಥೆಯ ಮುಖ್ಯಸ್ಥ ಜೂಲಿಯನ್ ಅಸಾಂಜ್ ಎಂದೂ ಹೇಳಿಲ್ಲ ಎಂದು ವಿಕಿಲೀಕ್ಸ್ ಸ್ಪಷ್ಟನೆ ನೀಡಿದೆ.
ಮೋದಿ ಪ್ರಾಮಾಣಿಕತೆಗೆ ವಿಕಿಲೀಕ್ಸ್ ಶಹಬ್ಬಾಸ್ ಗಿರಿ ನೀಡಿದೆ ಎನ್ನುವ ಅಂಶವನ್ನು ಬಿಜೆಪಿ ತನ್ನ ಚುನಾವಣಾ ಪೋಸ್ಟರ್ ಗಳಲ್ಲಿ ಬಳಸಿಕೊಂಡಿತ್ತು. ಅಸಾಂಜ್ ಬೆಂಬಲ ತನಗಿರುವ ಅರ್ಥದಲ್ಲಿ ಬಿಜೆಪಿ ತನ್ನ ಜಾಹೀರಾತುಗಳಲ್ಲಿ ಬಳಸಿಕೊಳ್ಳುತ್ತಿದೆ. ಬಿಜೆಪಿಯ ಈ ಜಾಹೀರಾತುಗಳು ಸತ್ಯಕ್ಕೆ ದೂರವಾದುದು ಮತ್ತು ಇದಕ್ಕೂ ವಿಕಿಲೀಕ್ಸಿಗೂ ಸಂಬಂಧವಿಲ್ಲ ಎಂದು ವಿಕಿಲೀಕ್ಸ್ ಟ್ವಿಟರ್ ಮೂಲಕ ಸ್ಪಷ್ಟನೆ ನೀಡಿದೆ.

ವಿಕಿಲೀಕ್ಸ್ ಮತ್ತು ಮೋದಿ: ಏನಿದು ವಿವಾದ? 2006ರಲ್ಲಿ ಅಮೆರಿಕಾದ ರಾಜತಾಂತ್ರಿಕ ಅಧಿಕಾರಿ ಮೈಕಲ್ ಓವೆನ್, ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ್ದರು. ಪ್ರಮುಖವಾಗಿ ಬಂಡವಾಳ ಹೂಡಿಕೆಯ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದರು. ಭೇಟಿಯ ನಂತರ ಓವೆನ್ ತನ್ನ ಭೇಟಿಯಲ್ಲಿ ನಡೆದ ಮಾತುಕತೆಯ ಸಾರಾಂಶವನ್ನು ಅಮೆರಿಕಾಕ್ಕೆ ಕಳುಹಿಸಿದ್ದರು.
ಓವೆನ್ ಕಳುಹಿಸಿದ ರಹಸ್ಯ ದಾಖಲೆಗಳನ್ನು ವಿಕಿಲೀಕ್ಸ್ 2011ರಲ್ಲಿ ಸೋರಿಕೆ ಮಾಡಿತ್ತು. ಇದಾದ ನಂತರ ಕಳೆದ ವರ್ಷ ಅಮೆರಿಕ ರಾಯಭಾರಿ ನ್ಯಾನ್ಸಿ ಪೊವೆಲ್ ಗುಜರಾತ್ ರಾಜಧಾನಿಯಲ್ಲಿ ಮೋದಿ ಅವರನ್ನು ಭೇಟಿ ಮಾಡಿದ್ದರು. ಆಗ 2011ರಲ್ಲಿ ಬಿಡುಗಡೆ ಮಾಡಿದ್ದ ದಾಖಲೆಗಳನ್ನು ಮತ್ತೆ ಸುದ್ದಿಗೆ ತಂದ ವಿಕಿಲೀಕ್ಸ್, ಗುಜರಾತಿನ ಪ್ರಮುಖ ಕಾಂಗ್ರೆಸ್ ಮುಖಂಡರೊಬ್ಬರು ಮೋದಿ ಕಾರ್ಯವೈಖರಿಯನ್ನು ಶ್ಲಾಘಿಸಿದ್ದ ಹೇಳಿಕೆಯನ್ನು ಬಳಸಿಕೊಂಡಿತ್ತು.
ಈಗ ಬಿಜೆಪಿ ಅಂದು ತಾವು ಬಳಸಿಕೊಂಡಿದ್ದ ಹೇಳಿಕೆಯನ್ನು ಜಾಹೀರಾತುಗಳಲ್ಲಿ ಬಳಸಿ ಕೊಳ್ಳುತ್ತಿದೆ. ನಿಜಾಂಶ ಏನಂದರೆ ಅದು ನಮ್ಮ ಹೇಳಿಕೆಯಾಗಿರಲಿಲ್ಲ, ಕಾಂಗ್ರೆಸ್ ಮುಖಂಡರೊಬ್ಬರ ಹೇಳಿಕೆಯನ್ನು ನಾವು ಉಲ್ಲೇಖಿಸಿದ್ದೇವೆ. ಮೋದಿ ಪ್ರಾಮಾಣಿಕತೆಗೆ ನಾವು ಸರ್ಟಿಫಿಕೇಟ್ ನೀಡಿಲ್ಲ ಎನ್ನುವುದು ವಿಕಿಲೀಕ್ಸ್ ಈಗ ಕೊಡುತ್ತಿರುವ ಸಮಜಾಯಿಷಿ.
ಬಿಜೆಪಿ ಪ್ರತಿಕ್ರಿಯೆ : ವಿಕಿಲೀಕ್ಸ್ ಮತ್ತು ಅಸಾಂಜ್ ಅವರಿಂದ ಪ್ರಾಮಾಣಿಕತೆಯ ಸರ್ಟಿಫಿಕೇಟ್ ಪಡೆದು ಬಿಜೆಪಿಗೆ ಚುನಾವಣೆಯಲ್ಲಿ ಗೆಲ್ಲುವ ಅನಿವಾರ್ಯತೆ ಇಲ್ಲ. ನರೇಂದ್ರ ಮೋದಿ ಅವರಿಗೆ ಯಾರ ಪ್ರಮಾಣಪತ್ರದ ಅವಶ್ಯಕತೆಯೂ ಇಲ್ಲ ಎಂದು ಬಿಜೆಪಿ ಮುಖಂಡ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications