ಹಿಂದಿ ಹೇರಿಕೆ ವಿರುದ್ಧ ಹೊಸ ಅಭಿಯಾನ: ನಟ ಪ್ರಕಾಶ್ ರಾಜ್ ಟ್ವೀಟ್ ವೈರಲ್!
ನಟ ಪ್ರಕಾಶ್ ರಾಜ್ ಅವರು ಸಾಮಾಜಿಕ ಜವಾಬ್ದಾರಿಯಿಂದ ಕೆಲವೊಂದು ಪ್ರಮುಖ ಅಭಿಯಾನಗಳನ್ನು ನಡೆಸುವುದು ಇದೆ. ಅದರಲ್ಲೂ ಪ್ರಮುಖವಾಗಿ ಹಿಂದಿ ಹೇರಿಕೆಯನ್ನು ವಿರೋಧಿಸಿ ಅವರು ಈ ಹಿಂದೆಯೂ ಕೆಲವೊಂದು ಅಭಿಯಾನಗಳನ್ನು ನಡೆಸಿದ್ದಾರೆ. ಕರ್ನಾಟಕದಲ್ಲಿ ಮೊಸರು ಪ್ಯಾಕೆಟ್ಗಳ ಮೇಲೆ ದಹಿ ಎಂದು ಪ್ರಕಟಿಸಿ ಹಿಂದಿ ಪ್ರಚಾರಕ್ಕೆ ಮುಂದಾದ ಸಂದರ್ಭದಲ್ಲಿ ಅವರು ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಇದೀಗ ಹಿಂದಿ ಹೇರಿಕೆಯನ್ನು ವಿರೋಧಿಸಿ ಮತ್ತೊಂದು ಅಭಿಯಾನಕ್ಕೆ ನಟ ಪ್ರಕಾಶ್ ರಾಜ್ ಅವರು ಕರೆ ನೀಡಿದ್ದಾರೆ. ಅದೇನು ಎನ್ನುವ ವಿವರ ನೋಡೋಣ.
ದೇಶದಲ್ಲಿ ಒಂದಿಲ್ಲೊಂದು ಮಾರ್ಗದಲ್ಲಿ ಹಿಂದಿ ಹೇರಿಕೆ ಆಗುತ್ತಲ್ಲೇ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರವೂ ಸಹ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳುವುದಾಗಿ ಒಪ್ಪಿಕೊಂಡಿದೆಯಾದರೂ ದ್ವಿಭಾಷಾ ನೀತಿ ಸೂತ್ರ ಅಳವಡಿಸಿಕೊಳ್ಳುವುದಕ್ಕೆ ಬೇಕಾದ ಕೆಲಸವನ್ನು ಮಾಡುತ್ತಿಲ್ಲ. ಕೇವಲ ಕನ್ನಡಿಗರ ಕಣ್ಣೊರೆಸುವ ತಂತ್ರವನ್ನು ಅನುಸರಿಸುತ್ತಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ನಡುವೆ ಹಿಂದಿ ಹೇರಿಕೆ ವಿಚಾರ ಪದೇ ಪದೇ ಚರ್ಚೆ ಆಗುತ್ತಿದೆ.

ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಹೊಸ ಅಭಿಯಾನ ಶುರುವಾಗಿದೆ. ಬುಡಕಟ್ಟು ಮಕ್ಕಳ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ವಿಷಯದ ಬಗ್ಗೆ ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದಾರೆ. Emrs (EMRS stands for Eklavya Model Residential Schools)ನ ಉಪ ಆಯುಕ್ತರು ಹಿಂದಿ ನಮ್ಮ ರಾಷ್ಟ್ರೀಯ ಭಾಷೆ ಎಂದು ಹೇಳಿದ್ದಾರೆ ಎಂದು ಹೇಳಲಾಗಿದ್ದು, ಇದು ಹೊಸ ವಿವಾದ ಹಾಗೂ ವಿರೋಧಕ್ಕೂ ಕಾರಣವಾಗಿದೆ. ಇಎಂಆರ್ಎಸ್ ಶಾಲೆಗಳಲ್ಲಿ ಬುಡಕಟ್ಟು ಮಕ್ಕಳ ಮೇಲೆ ಹಿಂದಿ ಹೇರಿಕೆ ನಡೆಯುತ್ತಿದೆ ಎಂದು ಪ್ರಶ್ನೆ ಕೇಳಲಾಗಿದ್ದು, ಬುಡಕಟ್ಟು ಶಿಕ್ಷಣದ ಉಪ ಆಯುಕ್ತರು "ರಾಷ್ಟ್ರೀಯ ಭಾಷೆಯಾಗಿ ಹಿಂದಿ ಅತ್ಯಗತ್ಯ." ಎಂದು ಉತ್ತರಿಸಿದ್ದಾರೆ ಎಂದು ಹೇಳಲಾಗಿದೆ.
Requesting everyone to please go through this thread and share it around. #MustRead #justasking https://t.co/PfQ6cwnCQ5
— Prakash Raj (@prakashraaj) July 20, 2025
ಶಿಕ್ಷಣದ ಪ್ರಮುಖ ಹುದ್ದೆಯಲ್ಲಿ ಇರುವವರು ಹಿಂದಿ ರಾಷ್ಟ್ರೀಯ ಭಾಷೆ ಎಂದು ಕರೆದರೆ ಪರಿಸ್ಥಿತಿ ಏನು. ಈ ವ್ಯವಸ್ಥೆಯಡಿ ಬುಡಕಟ್ಟು ವಿದ್ಯಾರ್ಥಿಗಳ ದುಃಸ್ಥಿತಿಯನ್ನು ಊಹಿಸಿ. ಇದು ಆಕಸ್ಮಿಕವಲ್ಲ, ಉದ್ದೇಶ ಪೂರ್ವಕವಾಗಿ ಹಿಂದಿ ಹೇರಿಕೆಯ ವಿಧಾನವಾಗಿದೆ ಎಂದು ನಯನಿ ಅನುರಾಗ್ ರೆಡ್ಡಿ ಎನ್ನುವವರು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಅನ್ನು ನಟ ಪ್ರಕಾಶ್ ರಾಜ್ ಅವರು ರೀ ಟ್ವೀಟ್ ಮಾಡಿದ್ದಾರೆ. ಆದರೆ ಇದು ಹಳೆಯ ಟ್ವೀಟ್ ಆಗಿದ್ದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ವೈರಲ್ ಆಗುತ್ತಿದೆ.
-
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Political Trends: ನಿಂದಾ ರಾಜಕೀಯದ ದಾರಿ ತಪ್ಪಿದ ಪ್ರಜಾತಂತ್ರ: ಯಾವ ಮನೆಯ ಸಾಸಿವೆ ತರ ಹೊರಟಿದ್ದೀರಿ: ರಾಜಾರಾಂ ತಲ್ಲೂರು ಬರಹ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ











Click it and Unblock the Notifications