Delhi Election: ದೆಹಲಿಗೆ ಮಹಿಳಾ ಮುಖ್ಯಮಂತ್ರಿ? ಸೋಮವಾರ ಘೋಷಣೆ ಸಾಧ್ಯತೆ
ದೆಹಲಿ ವಿಧಾನಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ 26 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿಯಲ್ಲಿ ಸರ್ಕಾರ ರಚಿಸಲಿದೆ. ಫಲಿತಾಂಶ ಪ್ರಕಟವಾಗಿ ಒಂದು ವಾರವಾದರೂ ಇನ್ನೂ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿಲ್ಲ, ಸೋಮವಾರ ಬಿಜೆಪಿ ಹೈಕಮಾಂಡ್ ದೆಹಲಿ ನೂತನ ಮುಖ್ಯಮಂತ್ರಿ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.
ದೆಹಲಿ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸೋಮವಾರ ಮಧ್ಯಾಹ್ನ ಬಿಜೆಪಿ ಶಾಸಕಾಂಗ ಸಭೆ ಸೇರಲಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಅಮೆರಿಕ ಪ್ರವಾಸದಿಂದ ಪ್ರಧಾನಿ ನರೇಂದ್ರ ಮೋದಿ ವಾಪಸಾದ ಬಳಿಕವೇ ದೆಹಲಿ ಮುಂದಿನ ಸಿಎಂ ಆಯ್ಕೆ ಮಾಡಲಾಗುತ್ತದೆ ಎಂದು ಬಿಜೆಪಿ ಮೊದಲೇ ತಿಳಿಸಿತ್ತು.

ಪ್ರಾನ್ಸ್ ಮತ್ತು ಅಮೆರಿಕ ಪ್ರವಾಸದಿಂದ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಾಪಸಾಗಿದ್ದು ದೆಹಲಿ ಸರ್ಕಾರ ರಚನೆ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಜೆಪಿ ವೀಕ್ಷಕರನ್ನು ಹೆಸರಿಸಬಹುದು ಎಂದು ವರದಿ ತಿಳಿಸಿದೆ. ದೆಹಲಿ ಬಿಜೆಪಿ ಕಚೇರಿಯಲ್ಲೇ ಶಾಸಕರ ಸಭೆ ನಡೆಯುತ್ತದೆ ಎಂದು ಹೇಳಲಾಗಿದೆ.
26 ವರ್ಷಗಳ ಬಳಿಕ ದೆಹಲಿಯಲ್ಲಿ ಗೆಲುವು ಸಾಧಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿರುವ ಎರಡೂವರೆ ದಶಕಗಳ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಹೊಸ ಮುಖ್ಯಮಂತ್ರಿ ಪ್ರಮಾಣ ವಚನ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಯೋಜಿಸುತ್ತಿದ್ದು, ದೇಶಾದ್ಯಂತ ಪ್ರಮುಖ ಬಿಜೆಪಿ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ.
ಪ್ರಮಾಣ ವಚನ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಬಿಜೆಪಿ ಸಂಸದರು, ಮಾಜಿ ಸಂಸದರು ಮತ್ತು ಎಲ್ಲಾ ಎನ್ಡಿಎ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಹಾಜರಿರುತ್ತಾರೆ.
ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ಬಿಜೆಪಿ ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ಬಿಜೆಪಿ ಗೆಲುವು ಸಾಧಿಸಿದ ಬಳಿಕ ಹಲವು ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಕೇಳಿ ಬಂದಿದೆ. ಮಾಜಿ ಸಿಎಂ ಸಾಹೇಬ್ ಸಿಂಗ್ ವರ್ಮಾ ಅವರ ಪುತ್ರ ಪರ್ವೇಶ್ ವರ್ಮಾ ಸಿಎಂ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ದೆಹಲಿಯ ಮಾಜಿ ಬಿಜೆಪಿ ಮುಖ್ಯಸ್ಥ ಮತ್ತು ಮಾಳವೀಯ ನಗರ ಶಾಸಕ ಸತೀಶ್ ಉಪಾಧ್ಯಾಯ, ಪಕ್ಷದ ಹಿರಿಯ ನಾಯಕ ವಿಜೇಂದರ್ ಗುಪ್ತಾ, ಹೊಸದಾಗಿ ಆಯ್ಕೆಯಾದ ಜನಕ್ಪುರಿ ಶಾಸಕ ಆಶಿಶ್ ಸೂದ್ ಮತ್ತು ಉತ್ತಮ್ ನಗರ ಶಾಸಕ ಪವನ್ ಶರ್ಮಾ ಅವರ ಹೆಸರು ಸಿಎಂ ಹುದ್ದೆಗೆ ಕೇಳಿ ಬಂದಿದೆ.
ಬಿಜೆಪಿ ಅಚ್ಚರಿಯ ಸಿಎಂ ಅನ್ನು ಆಯ್ಕೆ ಮಾಡಿದರೂ ಅಚ್ಚರಿಯಿಲ್ಲ ಎಂದು ಹೇಳಲಾಗಿದೆ. ಮಹಿಳಾ ಸಿಎಂ ಆಯ್ಕೆ ಮಾಡುವ ಬಗ್ಗೆ ಕೂಡ ಪಕ್ಷದ ಉನ್ನತ ನಾಯಕರು ಯೋಚಿಸುತ್ತಿದ್ದಾರೆ ಎನ್ನಲಾಗಿದೆ. ನೀಲಂ ಪಹಲ್ವಾನ್, ರೇಖಾ ಗುಪ್ತಾ, ಪೂನಮ್ ಶರ್ಮಾ ಮತ್ತು ಶಿಖಾ ರಾಯ್ ಪ್ರಮುಖ ಮಹಿಳಾ ನಾಯಕರಾಗಿದ್ದಾರೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications