Covid 19: ಭಾರತದಲ್ಲಿ ಪತ್ತೆಯಾಯ್ತು ಕೋವಿಡ್ ಹೊಸ ಉಪತಳಿ; ವೈದ್ಯರು ಹೇಳಿದ್ದೇನು?
ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರತದಲ್ಲಿ ಕೂಡ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ ಎಲ್ಲವೂ ಸೌಮ್ಯ ಸ್ವಭಾವ ಹೊಂದಿವೆ ಎಂದು ಎಂದು ಹೇಳಿರುವುದು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಆದರೆ ಕೋವಿಡ್ನ ಹೊಸ ಉಪತಳಿಗಳು ಪತ್ತೆಯಾಗಿವೆ.
ಕೋವಿಡ್-19 ರೋಗಕ್ಕೆ ಕಾರಣವಾದ ಕಾರಣವಾದ ಎರಡು ಹೊಸ ರೂಪಾಂತರಿ ಕೊರೊನಾವೈರಸ್ ಭಾರತದಲ್ಲಿ ಪತ್ತೆಯಾಗಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ತಿಳಿಸಿದೆ. ಹೊಸದಾಗಿ ಪತ್ತೆಯಾಗಿರುವ ಕೋವಿಡ್-19 ರೂಪಾಂತರ NB.1.8.1 ನ ಒಂದು ಪ್ರಕರಣ ದಾಖಲಾಗಿದ್ದರೆ, LF.7 ರೂಪಾಂತರಿಯ ನಾಲ್ಕು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ.

INSACOG ನ ದತ್ತಾಂಶದ ಪ್ರಕಾರ, ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ NB.1.8.1 ನ ಒಂದು ಪ್ರಕರಣವನ್ನು ಗುರುತಿಸಲಾಗಿದ್ದು ಮತ್ತು ಮೇ ತಿಂಗಳಲ್ಲಿ ಗುಜರಾತ್ನಲ್ಲಿ LF.7 ನ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ ಎಂದು ಪಿಟಿಐ ವರದಿಯಲ್ಲಿ ತಿಳಿಸಿದೆ.
ಅಪಾಯದ ಮುನ್ಸೂಚನೆಯಾ?
LF.7 ಮತ್ತು NB.1.8 ಉಪ ರೂಪಾಂತರಿ ವೈರಸ್ ಬಗ್ಗೆ ಇದೇ ತಿಂಗಳಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದ್ದು, ಇವು ನಿಗಾದಲ್ಲಿರುವ ರೂಪಾಂತರಿ ವೈರಸ್ ಎಂದು ವರ್ಗೀಕರಿಸಿದೆ. ಅಂದರೆ ಈ ವೈರಸ್ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಈಗ ಲಭ್ಯವಿರುವ ಪುರಾವೆಗಳನ್ನು ಪರಿಗಣಿಸಿ, NB.1.8.1 ನಿಂದ ಹೆಚ್ಚಿನ ಅಪಾಯ ಇಲ್ಲ ಎಂದು ಹೇಳಿದೆ. ಜಾಗತಿಕ ಮಟ್ಟದಲ್ಲಿ ಈ ವೈರಸ್ ಅಪಾಯಕಾರಿಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಪ್ರಸ್ತುತ ಅನುಮೋದಿತ ಕೋವಿಡ್-19 ಲಸಿಕೆಗಳು ರೋಗಲಕ್ಷಣ ಮತ್ತು ತೀವ್ರ ಕಾಯಿಲೆಯ ವಿರುದ್ಧ ಈ ರೂಪಾಂತರಿ ವೈರಸ್ ವಿರುದ್ಧ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದೆ.
ಭಾರತದಲ್ಲಿ ಪತ್ತೆಯಾಗಿರುವ ಹೆಚ್ಚಿನ ಪ್ರಕರಣಗಳು JN.1 ಆಗಿದೆ. ಪರೀಕ್ಷೆ ಮಾಡಿರುವ ಮಾದರಿಗಳಲ್ಲಿ 53% ರಷ್ಟು JN.1 ರೂಪಾಂತರಿಯಾಗಿದೆ. BA.2 ಶೇಕಡಾ 26 ರಷ್ಟಿದ್ದು ಓಮಿಕ್ರಾನ್ ಉಪವಂಶಾವಳಿಗಳು ಶೇಕಡಾ 20 ರಷ್ಟಿವೆ ಎಂದು ವರದಿ ತಿಳಿಸಿದೆ.
ಭಯಪಡುವ ಅಗತ್ಯವಿಲ್ಲ
JN.1 ರೂಪಾಂತರಕ್ಕೆ ಸಂಬಂಧಿಸಿದ ಕೋವಿಡ್-19 ಪ್ರಕರಣಗಳ ಹೆಚ್ಚಳದ ಬಗ್ಗೆ ಭಯಪಡಬೇಡಿ ಎಂದು ವೈದ್ಯರು ಜನರಿಗೆ ಸಲಹೆ ನೀಡಿದ್ದಾರೆ. ಹೊಸ ತಳಿಯ ವೈರಸ್ ರೋಗ ಲಕ್ಷಣಗಳು ತೀವ್ರವಾಗಿಲ್ಲ ಮತ್ತು ಹೆಚ್ಚಿನ ರೋಗಿಗಳು ಸೌಮ್ಯ ಲಕ್ಷಣಗಳನ್ನು ಮಾತ್ರ ಹೊಂದಿರುವುದಾಗಿ ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಘದ ಜೂನಿಯರ್ ವೈದ್ಯರ ಜಾಲ (IMA JDN) ರಾಷ್ಟ್ರೀಯ ವಕ್ತಾರ ಡಾ. ಧ್ರುವ್ ಚೌಹಾಣ್ ಪಿಟಿಐ ಜೊತೆ ಮಾತನಾಡಿದ್ದು, ಓಮಿಕ್ರಾನ್ BA.2.86 ರ ವಂಶಸ್ಥರಾದ JN.1 ರೂಪಾಂತರದ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಈ ವೈರಸ್ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲವಾದರೂ, ಜನರು ಕೈಗಳ ನೈರ್ಮಲ್ಯ ಕಾಪಾಡಿಕೊಳ್ಳುವುದು, ಆಸ್ಪತ್ರೆಗಳು ಅಥವಾ ಜನದಟ್ಟಣೆಯ ಸ್ಥಳಗಳಲ್ಲಿ ಅಗತ್ಯವಿರುವಲ್ಲಿ ಮಾಸ್ಕ್ ಧರಿಸುವುದು ಮತ್ತು ಉಸಿರಾಟದ ನೈರ್ಮಲ್ಯವನ್ನು ಅನುಸರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
-
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
Top 3 Job Sectors: 2026ರಲ್ಲಿ ಯಾವ ಕ್ಷೇತ್ರ ಆಯ್ಕೆ ಮಾಡಬೇಕು? ಟಾಪ್ 3 ಉದ್ಯೋಗ ವಲಯಗಳು -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications