Covid 19: ಭಾರತದಲ್ಲಿ ಪತ್ತೆಯಾಯ್ತು ಕೋವಿಡ್ ಹೊಸ ಉಪತಳಿ; ವೈದ್ಯರು ಹೇಳಿದ್ದೇನು?
ಏಷ್ಯಾದ ಹಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಭಾರತದಲ್ಲಿ ಕೂಡ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಆದರೆ ಎಲ್ಲವೂ ಸೌಮ್ಯ ಸ್ವಭಾವ ಹೊಂದಿವೆ ಎಂದು ಎಂದು ಹೇಳಿರುವುದು ನಿಟ್ಟುಸಿರು ಬಿಡುವಂತೆ ಮಾಡಿತ್ತು. ಆದರೆ ಕೋವಿಡ್ನ ಹೊಸ ಉಪತಳಿಗಳು ಪತ್ತೆಯಾಗಿವೆ.
ಕೋವಿಡ್-19 ರೋಗಕ್ಕೆ ಕಾರಣವಾದ ಕಾರಣವಾದ ಎರಡು ಹೊಸ ರೂಪಾಂತರಿ ಕೊರೊನಾವೈರಸ್ ಭಾರತದಲ್ಲಿ ಪತ್ತೆಯಾಗಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ತಿಳಿಸಿದೆ. ಹೊಸದಾಗಿ ಪತ್ತೆಯಾಗಿರುವ ಕೋವಿಡ್-19 ರೂಪಾಂತರ NB.1.8.1 ನ ಒಂದು ಪ್ರಕರಣ ದಾಖಲಾಗಿದ್ದರೆ, LF.7 ರೂಪಾಂತರಿಯ ನಾಲ್ಕು ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿವೆ.

INSACOG ನ ದತ್ತಾಂಶದ ಪ್ರಕಾರ, ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ NB.1.8.1 ನ ಒಂದು ಪ್ರಕರಣವನ್ನು ಗುರುತಿಸಲಾಗಿದ್ದು ಮತ್ತು ಮೇ ತಿಂಗಳಲ್ಲಿ ಗುಜರಾತ್ನಲ್ಲಿ LF.7 ನ ನಾಲ್ಕು ಪ್ರಕರಣಗಳು ಪತ್ತೆಯಾಗಿವೆ ಎಂದು ಪಿಟಿಐ ವರದಿಯಲ್ಲಿ ತಿಳಿಸಿದೆ.
ಅಪಾಯದ ಮುನ್ಸೂಚನೆಯಾ?
LF.7 ಮತ್ತು NB.1.8 ಉಪ ರೂಪಾಂತರಿ ವೈರಸ್ ಬಗ್ಗೆ ಇದೇ ತಿಂಗಳಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದ್ದು, ಇವು ನಿಗಾದಲ್ಲಿರುವ ರೂಪಾಂತರಿ ವೈರಸ್ ಎಂದು ವರ್ಗೀಕರಿಸಿದೆ. ಅಂದರೆ ಈ ವೈರಸ್ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದೆ.
ಈಗ ಲಭ್ಯವಿರುವ ಪುರಾವೆಗಳನ್ನು ಪರಿಗಣಿಸಿ, NB.1.8.1 ನಿಂದ ಹೆಚ್ಚಿನ ಅಪಾಯ ಇಲ್ಲ ಎಂದು ಹೇಳಿದೆ. ಜಾಗತಿಕ ಮಟ್ಟದಲ್ಲಿ ಈ ವೈರಸ್ ಅಪಾಯಕಾರಿಯಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ. ಪ್ರಸ್ತುತ ಅನುಮೋದಿತ ಕೋವಿಡ್-19 ಲಸಿಕೆಗಳು ರೋಗಲಕ್ಷಣ ಮತ್ತು ತೀವ್ರ ಕಾಯಿಲೆಯ ವಿರುದ್ಧ ಈ ರೂಪಾಂತರಿ ವೈರಸ್ ವಿರುದ್ಧ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದೆ.
ಭಾರತದಲ್ಲಿ ಪತ್ತೆಯಾಗಿರುವ ಹೆಚ್ಚಿನ ಪ್ರಕರಣಗಳು JN.1 ಆಗಿದೆ. ಪರೀಕ್ಷೆ ಮಾಡಿರುವ ಮಾದರಿಗಳಲ್ಲಿ 53% ರಷ್ಟು JN.1 ರೂಪಾಂತರಿಯಾಗಿದೆ. BA.2 ಶೇಕಡಾ 26 ರಷ್ಟಿದ್ದು ಓಮಿಕ್ರಾನ್ ಉಪವಂಶಾವಳಿಗಳು ಶೇಕಡಾ 20 ರಷ್ಟಿವೆ ಎಂದು ವರದಿ ತಿಳಿಸಿದೆ.
ಭಯಪಡುವ ಅಗತ್ಯವಿಲ್ಲ
JN.1 ರೂಪಾಂತರಕ್ಕೆ ಸಂಬಂಧಿಸಿದ ಕೋವಿಡ್-19 ಪ್ರಕರಣಗಳ ಹೆಚ್ಚಳದ ಬಗ್ಗೆ ಭಯಪಡಬೇಡಿ ಎಂದು ವೈದ್ಯರು ಜನರಿಗೆ ಸಲಹೆ ನೀಡಿದ್ದಾರೆ. ಹೊಸ ತಳಿಯ ವೈರಸ್ ರೋಗ ಲಕ್ಷಣಗಳು ತೀವ್ರವಾಗಿಲ್ಲ ಮತ್ತು ಹೆಚ್ಚಿನ ರೋಗಿಗಳು ಸೌಮ್ಯ ಲಕ್ಷಣಗಳನ್ನು ಮಾತ್ರ ಹೊಂದಿರುವುದಾಗಿ ವರದಿಯಾಗಿದೆ.
ಭಾರತೀಯ ವೈದ್ಯಕೀಯ ಸಂಘದ ಜೂನಿಯರ್ ವೈದ್ಯರ ಜಾಲ (IMA JDN) ರಾಷ್ಟ್ರೀಯ ವಕ್ತಾರ ಡಾ. ಧ್ರುವ್ ಚೌಹಾಣ್ ಪಿಟಿಐ ಜೊತೆ ಮಾತನಾಡಿದ್ದು, ಓಮಿಕ್ರಾನ್ BA.2.86 ರ ವಂಶಸ್ಥರಾದ JN.1 ರೂಪಾಂತರದ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಈ ವೈರಸ್ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲವಾದರೂ, ಜನರು ಕೈಗಳ ನೈರ್ಮಲ್ಯ ಕಾಪಾಡಿಕೊಳ್ಳುವುದು, ಆಸ್ಪತ್ರೆಗಳು ಅಥವಾ ಜನದಟ್ಟಣೆಯ ಸ್ಥಳಗಳಲ್ಲಿ ಅಗತ್ಯವಿರುವಲ್ಲಿ ಮಾಸ್ಕ್ ಧರಿಸುವುದು ಮತ್ತು ಉಸಿರಾಟದ ನೈರ್ಮಲ್ಯವನ್ನು ಅನುಸರಿಸುವುದು ಸೇರಿದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications