ದೆಹಲಿ- ಲಾಹೋರ್ ಬಸ್ ಸೇವೆ ಸೋಮವಾರದಿಂದ ರದ್ದುಗೊಳಿಸಿದ ಡಿಟಿಸಿ
ದೆಹಲಿ- ಲಾಹೋರ್ ಮಧ್ಯದ ಬಸ್ ಸೇವೆಯನ್ನು ದೆಹಲಿ ಸಂಚಾರ ನಿಗಮವು ಸೋಮವಾರ ರದ್ದು ಮಾಡಿದೆ. ಭಾರತ ಸರಕಾರವು ಜಮ್ಮು- ಕಾಶ್ಮೀರದ ವಿಶೇಷ ಸ್ಥಾನಮಾನ ತೆಗೆದ ಮೇಲೆ ಪಾಕಿಸ್ತಾನವು ಆ ಕಡೆಯಿಂದ ಬಸ್ ಸೇವೆ ನಿಲ್ಲಿಸಲು ತೀರ್ಮಾನಿಸಿದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಾರ್ವಜನಿಕ ಸಾರಿಗೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ದೆಹಲಿ ಸಂಚಾರ ನಿಗಮದ ಬಸ್ ಲಾಹೋರ್ ಗೆ ತೆರಳಲು ಸೋಮವಾರ ಬೆಳಗ್ಗೆ ಆರು ಗಂಟೆಗೆ ಹೊರಡಬೇಕಿತ್ತು. ಆದರೆ ಬಸ್ ಸೇವೆಯನ್ನು ರದ್ದು ಮಾಡಲು ಪಾಕಿಸ್ತಾನ ತೀರ್ಮಾನ ಕೈಗೊಂಡ ಹಿನ್ನೆಲೆಯಲ್ಲಿ ಭಾರತದ ಕಡೆಯಿಂದಲೂ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಕಿಸ್ತಾನ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರದಿಂದ ಶನಿವಾರ ದೂರವಾಣಿ ಕರೆ ಮಾಡಿ, ಬಸ್ ಸೇವೆ ರದ್ದು ಮಾಡುತ್ತಿರುವ ಬಗ್ಗೆ ದೆಹಲಿ ಸಂಚಾರ ನಿಗಮಕ್ಕೆ ಮಾಹಿತಿ ನೀಡಲಾಗಿದೆ. ದೆಹಲಿಯಿಂದ ಲಾಹೋರ್ ಗೆ ಶನಿವಾರ ಬೆಳಗ್ಗೆ ಹೊರಟ ಬಸ್ ನಲ್ಲಿ ಇಬ್ಬರು ಪ್ರಯಾಣಿಕರು ಇದ್ದರು. ಇನ್ನು ಅದೇ ದಿನ ಸಂಜೆ ಲಾಹೋರ್ ನಿಂದ ದೆಹಲಿಗೆ ತಲುಪಿದ ಬಸ್ ನಲ್ಲಿ ಹತ್ತೊಂಬತ್ತು ಮಂದಿ ಇದ್ದರು. ಭಾನುವಾರದಂದು ಬಸ್ ಸೇವೆ ಇರಲಿಲ್ಲ.

ಬಸ್ ಸೇವೆ ಮೊದಲ ಬಾರಿಗೆ 1999ರಲ್ಲಿ ಆರಂಭವಾಯಿತು. 2001ರಲ್ಲಿ ಭಾರತದ ಸಂಸತ್ ಮೇಲೆ ದಾಳಿ ನಡೆದ ನಂತರ ರದ್ದಾಗಿತ್ತು. ಆ ನಂತರ 2003ರ ಜುಲೈನಲ್ಲಿ ಬಸ್ ಸೇವೆ ಪುನರಾರಂಭ ಆಗಿತ್ತು. ಈ ವರ್ಷ ಫೆಬ್ರವರಿಯಲ್ಲಿ ಪುಲ್ವಾಮಾ ಉಗ್ರ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಬಾಲಾಕೋಟ್ ದಾಳಿ ಆದ ನಂತರ ಬಸ್ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗುತ್ತಾ ಬಂದಿತ್ತು.
ಲಾಹೋರ್- ದೆಹಲಿಗೆ ಡಿಟಿಸಿ ಬಸ್ ಗಳು ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಮತ್ತು ದೆಹಲಿ- ಲಾಹೋರ್ ಪಿಟಿಡಿಸಿ ಬಸ್ ಗಳು ಮಂಗಳವಾರ, ಗುರುವಾರ, ಶುಕ್ರವಾರದಂದು ಕಾರ್ಯಾಚರಣೆ ನಡೆಸುತ್ತಿದ್ದವು. ವಾಪಸ್ ಪ್ರಯಾಣಕ್ಕೆ ಡಿಟಿಸಿ ಬಸ್ ಗಳು ಲಾಹೋರ್ ನಿಂದ ಪ್ರತಿ ಮಂಗಳವಾರ ಗುರುವಾರ ಹಾಗೂ ಶನಿವಾರ ಮತ್ತು ಪಿಟಿಡಿಸಿ ಬಸ್ ಗಳು ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಸಂಚರಿಸುತ್ತಿದ್ದವು.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ












Click it and Unblock the Notifications