ದೆಹಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಪೊಲೀಸ್ ಹೈ ಅಲರ್ಟ್
ನವದೆಹಲಿ, ಮೇ 12: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆಗಳ ಹಾವಳಿ ಮುಂದುವರಿದಿದೆ. ಕೆಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೆ ನಗರದ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.
ದೆಹಲಿಯ ಬುರಾರಿ ಆಸ್ಪತ್ರೆ ಮತ್ತು ಸಂಜಯ್ ಗಾಂಧಿ ಆಸ್ಪತ್ರೆಗಳು ಭಾನುವಾರ ಬಾಂಬ್ ಬೆದರಿಕೆ ಮೇಲ್ ಗಳನ್ನು ಸ್ವೀಕರಿಸಿವೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಲ್ಲೆಡೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಪೊಲೀಸ್ ಶೋಧ
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ದೆಹಲಿ ಉತ್ತರದ ಡಿಸಿಪಿ ಪ್ರಕಾರ, ಬಾಂಬ್ ಬೆದರಿಕೆಯ ಬಗ್ಗೆ ಆಸ್ಪತ್ರೆಗೆ ಯಾರೋ ಇಮೇಲ್ ಕಳುಹಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಮೇತ ಪೊಲೀಸರು ಸ್ಥಳದಲ್ಲಿದ್ದಾರೆ.
ಈ ಆಸ್ಪತ್ರೆಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳಿವೆಯೇ ಎಂದು ಪರಿಶೀಲಿಸಲಾಗುತ್ತಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ. ಇ-ಮೇಲ್ ಬಂದಿದ್ದರ ಕುರಿತು ತನಿಖೆ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಮೇ 1 ರಂದು 100 ಶಾಲೆಗಳಲ್ಲಿ ಬಾಂಬ್ ಬೆದರಿಕೆ
ಇದೇ ತಿಂಗಳು ಮೇ 1 ರಂದು ನವದೆಹಲಿ ಮತ್ತು ನೋಯ್ಡಾದ 100 ಶಾಲೆಗಳಲ್ಲಿ ಬಾಂಬ್ ಇದೆ ಎಂದು ಹೀಗೆಯೇ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಈ ಕಾರಣಕ್ಕಾಗಿ ಎಲ್ಲ ಶಾಲೆಗಳನ್ನು ಬಂದ್ ಮಾಡಿ, ಸೂಕ್ತ ತಪಾಸಣೆ ನಡೆಸಲಾಗಿತ್ತು. ಇದರಿಂದ ಇಡೀ ದೆಹಲಿಯೇ ಬೆಚ್ಚಿ ಬಿದ್ದಿದ್ದು, ನಿವಾಸಿಗಳು, ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗಿದ್ದರು.
ಮುಂಜಾಗೃತಾ ದೃಷ್ಟಿಯಿಂದ ಎಲ್ಲಾ ಶಾಲೆಗಳನ್ನು ಮುಚ್ಚುವ ಜೊತೆಗೆ ತ್ವರಿತವಾಗಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಪ್ರತಿ ಶಾಲೆಯಲ್ಲೂ ಕೂಲಂಕುಷವಾಗಿ ಹುಡುಕಾಟ ನಡೆಸಿದ್ದರು. ಆದರೆ ಅಂದಿನ ಬೆದರಿಕೆಗಳು ಹುಸಿಯಾಗಿತ್ತು ಎಂದು ತಿಳಿದು ಬಂದಿದೆ. ಈ ಘಟನೆ ಮಾಸುವ ಮುನ್ನವೇ ದೆಹಲಿ ಎರಡು ಪ್ರಮುಖ ಆಸ್ಪತ್ರೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications