ದೆಹಲಿಯ 2 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಸಂದೇಶ: ಪೊಲೀಸ್ ಹೈ ಅಲರ್ಟ್
ನವದೆಹಲಿ, ಮೇ 12: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಾಂಬ್ ಬೆದರಿಕೆ ಕರೆಗಳ ಹಾವಳಿ ಮುಂದುವರಿದಿದೆ. ಕೆಲವು ಶಾಲೆಗಳಿಗೆ ಇತ್ತೀಚೆಗೆ ಬಾಂಬ್ ಬೆದರಿಕೆ ಬಂದಿತ್ತು. ಇದರ ಬೆನ್ನಲ್ಲೆ ನಗರದ ಎರಡು ಪ್ರಮುಖ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ.
ದೆಹಲಿಯ ಬುರಾರಿ ಆಸ್ಪತ್ರೆ ಮತ್ತು ಸಂಜಯ್ ಗಾಂಧಿ ಆಸ್ಪತ್ರೆಗಳು ಭಾನುವಾರ ಬಾಂಬ್ ಬೆದರಿಕೆ ಮೇಲ್ ಗಳನ್ನು ಸ್ವೀಕರಿಸಿವೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಲ್ಲೆಡೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಪೊಲೀಸ್ ಶೋಧ
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಆಸ್ಪತ್ರೆಗಳಲ್ಲಿ ಶ್ವಾನ ದಳದಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ದೆಹಲಿ ಉತ್ತರದ ಡಿಸಿಪಿ ಪ್ರಕಾರ, ಬಾಂಬ್ ಬೆದರಿಕೆಯ ಬಗ್ಗೆ ಆಸ್ಪತ್ರೆಗೆ ಯಾರೋ ಇಮೇಲ್ ಕಳುಹಿಸಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಮೇತ ಪೊಲೀಸರು ಸ್ಥಳದಲ್ಲಿದ್ದಾರೆ.
ಈ ಆಸ್ಪತ್ರೆಗಳಲ್ಲಿ ಯಾವುದೇ ಸ್ಫೋಟಕ ವಸ್ತುಗಳಿವೆಯೇ ಎಂದು ಪರಿಶೀಲಿಸಲಾಗುತ್ತಿದೆ. ಅದೃಷ್ಟವಶಾತ್ ಇದುವರೆಗೆ ಯಾವುದೇ ಅನುಮಾನಾಸ್ಪದವಾಗಿ ಪತ್ತೆಯಾಗಿಲ್ಲ. ಇ-ಮೇಲ್ ಬಂದಿದ್ದರ ಕುರಿತು ತನಿಖೆ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಮೇ 1 ರಂದು 100 ಶಾಲೆಗಳಲ್ಲಿ ಬಾಂಬ್ ಬೆದರಿಕೆ
ಇದೇ ತಿಂಗಳು ಮೇ 1 ರಂದು ನವದೆಹಲಿ ಮತ್ತು ನೋಯ್ಡಾದ 100 ಶಾಲೆಗಳಲ್ಲಿ ಬಾಂಬ್ ಇದೆ ಎಂದು ಹೀಗೆಯೇ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಈ ಕಾರಣಕ್ಕಾಗಿ ಎಲ್ಲ ಶಾಲೆಗಳನ್ನು ಬಂದ್ ಮಾಡಿ, ಸೂಕ್ತ ತಪಾಸಣೆ ನಡೆಸಲಾಗಿತ್ತು. ಇದರಿಂದ ಇಡೀ ದೆಹಲಿಯೇ ಬೆಚ್ಚಿ ಬಿದ್ದಿದ್ದು, ನಿವಾಸಿಗಳು, ಮಕ್ಕಳು, ಪೋಷಕರು ಆತಂಕಕ್ಕೆ ಒಳಗಾಗಿದ್ದರು.
ಮುಂಜಾಗೃತಾ ದೃಷ್ಟಿಯಿಂದ ಎಲ್ಲಾ ಶಾಲೆಗಳನ್ನು ಮುಚ್ಚುವ ಜೊತೆಗೆ ತ್ವರಿತವಾಗಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಪ್ರತಿ ಶಾಲೆಯಲ್ಲೂ ಕೂಲಂಕುಷವಾಗಿ ಹುಡುಕಾಟ ನಡೆಸಿದ್ದರು. ಆದರೆ ಅಂದಿನ ಬೆದರಿಕೆಗಳು ಹುಸಿಯಾಗಿತ್ತು ಎಂದು ತಿಳಿದು ಬಂದಿದೆ. ಈ ಘಟನೆ ಮಾಸುವ ಮುನ್ನವೇ ದೆಹಲಿ ಎರಡು ಪ್ರಮುಖ ಆಸ್ಪತ್ರೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆಗಳು ಬಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications