'ಪಕ್ಷದ ವಿಚಾರದಲ್ಲಿ ನೀವೇ ನನ್ನ ಬಾಸ್': ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಹೊಗಳಿದ ಪ್ರಧಾನಿ
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರದ ಪ್ರಬಲ ನಾಯಕ, 45 ವರ್ಷದ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಪಕ್ಷಕ್ಕೆ ಸಂಬಂಧಿಸಿದ ವಿಷಯಗಳಲ್ಲಿ 'ಈ ಯುವ ನಾಯಕನೇ ತಮಗೆ ಬಾಸ್' ಆಗಿರುತ್ತಾರೆ ಎಂದು ಘೋಷಿಸುವ ಮೂಲಕ ಹೊಸ ನಾಯಕತ್ವಕ್ಕೆ ಪ್ರಧಾನಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಬೂತ್ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಪಕ್ಷದ ವಿವಿಧ ಹುದ್ದೆಗಳಿಗೆ ನಡೆದ ಬೃಹತ್ ಚುನಾವಣೆ ಪ್ರಕ್ರಿಯೆಯಾದ 'ಸಂಘಟನಾ ಪರ್ವ'ದ (Sangathan Parva) ಮುಕ್ತಾಯದ ನಂತರ, ಈ ಘೋಷಣೆ ಹೊರ ಬಿದ್ದಿದೆ. ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ನಿತಿನ್ ನಬಿನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಕ್ಷದ ವಿಷಯಗಳಿಗೆ ಬಂದಾಗ, ಮಾನನೀಯ ನಿತಿನ್ ನಬಿನ್ ಜೀ, ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ನೀವೇ ನನ್ನ ಬಾಸ್ ಎಂದು ಪುನರುಚ್ಚರಿಸಿದರು. ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷದ ನೇತೃತ್ವವನ್ನು ಯುವ ನಾಯಕನಿಗೆ ವಹಿಸಿದ್ದೀರಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ನಿತಿನ್ ನಬಿನ್ ಅವರನ್ನು "Millennial" ಎಂದು ಬಣ್ಣಿಸಿದ ಪ್ರಧಾನಿ ಮೋದಿ, ಭಾರತದಲ್ಲಿ ಕಣ್ಣಮುಂದೆಯೇ ಆಗುತ್ತಿರುವ ದೊಡ್ಡ ಬದಲಾವಣೆಗಳಿಗೆ, ತಂತ್ರಜ್ಞಾನದ ಕ್ರಾಂತಿಗೆ ಮತ್ತು ನವ ಭಾರತದ ಉದಯಕ್ಕೆ ಸಾಕ್ಷಿಯಾದ ಪೀಳಿಗೆಗೆ ನಬಿನ್ ಸೇರಿದವರಾಗಿದ್ದಾರೆ. ಇಂತಹ ಯುವ ದೃಷ್ಟಿಕೋನವು ಪಕ್ಷಕ್ಕೆ ಹೊಸ ದಿಕ್ಕನ್ನು ನೀಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷರಾಗುವ ಮೂಲಕ ನಿತಿನ್ ನಬಿನ್ ಅವರು ನಮ್ಮೆಲ್ಲರ ಅಧ್ಯಕ್ಷರಾಗಿದ್ದಾರೆ. ಅವರ ಜವಾಬ್ದಾರಿ ಕೇವಲ ಬಿಜೆಪಿಯನ್ನು ನಿರ್ವಹಿಸುವುದು ಮಾತ್ರವಲ್ಲ. ಎಲ್ಲ ಎನ್ಡಿಎ ಮಿತ್ರಪಕ್ಷಗಳ ನಡುವೆ ಸರಿಯಾದ ಸಮನ್ವಯವನ್ನು ಖಚಿತಪಡಿಸಿಕೊಳ್ಳುವುದು ಕೂಡ ಆಗಿದೆ ಎಂದು ಪ್ರಧಾನಿ ತಿಳಿಸಿದರು.
ಯಾರು ಈ ನಿತಿನ್ ನಬಿನ್?
ಬಿಹಾರದ ಪಾಟ್ನಾ ಮೂಲದವರಾದ ನಿತಿನ್ ನಬಿನ್, ದೀರ್ಘಕಾಲದಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಇವರು ಬಿಹಾರದ ಬಾಕಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು ಮತ್ತು ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಖಾತೆ ಸಚಿವರಾಗಿ ಉತ್ತಮ ಕಾರ್ಯಕ್ಷಮತೆ ತೋರಿದ್ದರು. ಭಾರತೀಯ ಜನತಾ ಯುವ ಮೋರ್ಚಾದಲ್ಲಿ (BJYM) ರಾಷ್ಟ್ರೀಯ ಮಟ್ಟದಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಛತ್ತೀಸ್ಗಢ ಮತ್ತು ಇತರ ರಾಜ್ಯಗಳ ಚುನಾವಣಾ ಉಸ್ತುವಾರಿಯಾಗಿಯೂ ಇವರು ಪಕ್ಷವನ್ನು ಸಂಘಟಿಸಿದ್ದರು. ಹಿರಿಯ ಬಿಜೆಪಿ ನಾಯಕ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರರಾಗಿರುವ ನಿತಿನ್, ತಳಮಟ್ಟದ ರಾಜಕಾರಣವನ್ನು ಬಲ್ಲವರಾಗಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications