ಇನ್ಮುಂದೆ ಫಾಸ್ಟ್ ಟ್ಯಾಗ್ ಪಾಸ್, ಒಂದು ಟ್ರಿಪ್ಗೆ ಕೇವಲ 15 ರೂಪಾಯಿ: ನಿತಿನ್ ಗಡ್ಕರಿ ಬಿಗ್ ಅಪ್ಡೇಟ್ಸ್
ಟೋಲ್ ಶುಲ್ಕ ಮತ್ತು ಫಾಸ್ಟ್ ಟ್ಯಾಗ್ಗೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹತ್ವದ ಅಪ್ಡೇಟ್ಸ್ ನೀಡಿದ್ದಾರೆ. ಟೋಲ್ಗಳಲ್ಲಿ ಫಾಸ್ಟ್ಟ್ಯಾಗ್ ಗೊಂದಲದ ಬಗ್ಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಪದೇ ಪದೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಟೋಲ್ ಶುಲ್ಕ ಹಾಗೂ ಫಾಸ್ಟ್ ಟ್ಯಾಗ್ಗೆ ಸಂಬಂಧಿಸಿದಂತೆ ನಿತಿನ್ ಗಡ್ಕರಿ ಅವರು ಮಹತ್ವದ ಟ್ವೀಟ್ ಮಾಡಿದ್ದಾರೆ. ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಟೋಲ್ ಶುಲ್ಕ ಹಾಗೂ ಫಾಸ್ಟ್ ಟ್ಯಾಗ್ನಲ್ಲಿ ಮೂರು ಪ್ರಮುಖ ಬದಲಾವಣೆಗಳನ್ನು ತರುವುದಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರವು ಟೋಲ್ ಶುಲ್ಕದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಈ ಬಗ್ಗೆ ನಿತಿನ್ ಗಡ್ಕರಿ ಅವರೇ ಅಪ್ಡೇಟ್ಸ್ ಕೊಟ್ಟಿದ್ದಾರೆ.

🔹 ತೊಂದರೆ ರಹಿತ ಹಾಗೂ ಸರಳವಾಗಿ ಹೆದ್ದಾರಿಗಳಲ್ಲಿ ದೇಶದ ಜನ ಪ್ರಯಾಣಿಸುವ ಉದ್ದೇಶಕ್ಕಾಗಿ ಇನ್ಮುಂದೆ ₹3,000 ಬೆಲೆಯ ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದ್ದೇವೆ. ಈ ಹೊಸ ಫಾಸ್ಟ್ಟ್ಯಾಗ್ ಪಾಸ್ ಇದೇ ಆಗಸ್ಟ್ 15, 2025 ರಿಂದ ಜಾರಿಗೆ ಬರಲಿದೆ ಎಂದು ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ಈ ಪಾಸ್ ಆಕ್ಟೀವ್ ಆದ ದಿನದಿಂದ ಒಂದು ವರ್ಷದ ವರೆಗೆ ಅಥವಾ 200 ಟ್ರಿಪ್ಗಳವರೆಗೆ ಆಕ್ಟೀವ್ ಆಗಿರಲಿದೆ. ಇದೆರಡರಲ್ಲಿ ಯಾವುದು ಮೊದಲು ಬರಲಿದೆಯೋ ಅದಕ್ಕೆ ಅನ್ವಯವಾಗಲಿದೆ. ಇನ್ನು ಮುಖ್ಯವಾಗಿ ಈ ವಾರ್ಷಿಕ ಪಾಸ್ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಮಾತ್ರ ಅನ್ವಯವಾಗಲಿದೆ ಅಂತ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.
🔹 ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ಕಡಿಮೆ ವೆಚ್ಚ ಹಾಗೂ ಸುಖಕರ ಪ್ರಯಾಣದ ಉದ್ದೇಶಕ್ಕಾಗಿ ಪರಿಚಯಿಸಲಾಗಿದೆ. ಈ ಫಾಸ್ಟ್ ಟ್ಯಾಗ್ ಆಕ್ಟಿವೇಟ್ ಮತ್ತು ನವೀಕರಣಕ್ಕಾಗಿ ಹೊಸ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್ಮಾರ್ಗ್ ಯಾತ್ರಾ ಅಪ್ಲಿಕೇಶನ್ನಲ್ಲಿ Rajmarg Yatra App ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್ಸೈಟ್ಗಳಲ್ಲಿ ಇಷ್ಟರಲ್ಲೇ ಸಿಗಲಿವೆ ಎಂದಿದ್ದಾರೆ.

🔹 ಈ ನೀತಿಯು 60 ಕಿಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುತ್ತದೆ. ಒಂದೇಪಾಸ್ ಮತ್ತು ಕೈಗೆಟುಕುವ ಬೆಲೆಯಲ್ಲಿ ಟೋಲ್ ಶುಲ್ಕವನ್ನು ಪಾವತಿ ಮಾಡುವುದನ್ನು ಸರಳೀಕರಣ ಮಾಡುತ್ತದೆ. ಟೋಲ್ಗಳಲ್ಲಿ ಜನ ಹೆಚ್ಚು ಸಮಯ ಕಾಯುವ ಅವಶ್ಯಕತೆ ಇರುವುದಿಲ್ಲ. ಕಡಿಮೆ ಸಮಯ ಮತ್ತು ದಟ್ಟಣೆ ಕಡಿಮೆ ಮಾಡುವ ಮೂಲಕ ಮತ್ತು ಟೋಲ್ ಪ್ಲಾಜಾಗಳಲ್ಲಿ ಗೊಂದಲಗಳನ್ನು ಕಡಿಮೆ ಮಾಡುವ ಮೂಲಕ, ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾಗಿ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಗುರಿಯನ್ನು ವಾರ್ಷಿಕ ಪಾಸ್ ಹೊಂದಿದೆ ಎಂದು ನಿತಿನ್ ಗಡ್ಕರಿ ಅವರು ಟ್ವೀಟ್ ಮೂಲಕ ಹೇಳಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications