ಗಮನಿಸಿ, ವಿಮಾನ ಪ್ರಯಾಣಿಕರಿಗೆ ಇಂದಿನಿಂದ ಹೊಸ ನಿಯಮಾವಳಿ
ಇತ್ತೀಚೆಗೆ, ಮಹಾರಾಷ್ಟ್ರದ ಶಿವಸೇನೆ ಪಕ್ಷದ ಸಂಸದ ರವೀಂದ್ರ ಗಾಯಕ್ವಾಡ್ ಅವರು, ಏರ್ ಇಂಡಿಯಾ ವಿಮಾನದ ಹಿರಿಯ ಅಧಿಕಾರಿಯೊಬ್ಬರನ್ನು ಚಪ್ಪಲಿಯಿಂದ ಹೊಡೆದ ಪ್ರಕರಣ ದೊಡ್ಡ ವಿವಾದ ಎಬ್ಬಿಸಿದ ಹಿನ್ನೆಲೆಯಲ್ಲಿ ಈ ನಿಯಮ ಜಾರಿಗೆ ತರಲಾಗುತ್ತಿದೆ.
ನವದೆಹಲಿ, ಮೇ 5: ಭಾರತದಲ್ಲಿ ವಿಮಾನ ಸೇವೆ ಬಳಸುವ ಯಾವುದೇ ಪ್ರಯಾಣಿಕರು ವಿಮಾನದಲ್ಲಾಗಲೀ ಅಥವಾ ವಿಮಾನ ನಿಲ್ದಾಣಗಳಲ್ಲೇ ಆಗಲಿ ಸೌಜನ್ಯದಿಂದ ವರ್ತಿಸಬೇಕೆಂಬ ನಿಟ್ಟಿನಲ್ಲಿ ಡೈರೆಕ್ಟರ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಹೊಸ ನಿಯಮಾವಳಿಗಳನ್ನು ರೂಪಿಸಿದೆ.
ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು ಮೇ 5ರಂದು ಈ ಹೊಸ ನಿಯಮಾವಳಿಗಳನ್ನು ಪ್ರಕಟಿಸಲಿದ್ದಾರೆ.
ಇತ್ತೀಚೆಗೆ, ಮಹಾರಾಷ್ಟ್ರದ ಶಿವಸೇನೆ ಪಕ್ಷದ ಸಂಸದ ರವೀಂದ್ರ ಗಾಯಕ್ವಾಡ್ ಅವರು, ಏರ್ ಇಂಡಿಯಾ ವಿಮಾನದ ಹಿರಿಯ ಅಧಿಕಾರಿಯೊಬ್ಬರನ್ನು ಚಪ್ಪಲಿಯಿಂದ ಹೊಡೆದ ಪ್ರಕರಣ ದೊಡ್ಡ ವಿವಾದ ಎಬ್ಬಿಸಿದ ಹಿನ್ನೆಲೆಯಲ್ಲಿ ಈ ಹೊಸ ನಿಯಮಾವಳಿಗಳನ್ನು ಜಾರಿಗೆ ತರಲಾಗುತ್ತಿದೆ.[ಚಪ್ಪಲಿ ಹೊಡೆತ ಪ್ರಕರಣ: ಸಂಸದ ರವೀಂದ್ರ ಮೇಲೆ ಏರ್ ಲೈನ್ ಗಳ ನಿಷೇಧ]

ಆಧಾರ್ ಇಲ್ಲದಿದ್ರೆ ಟಿಕೆಟ್ ಇಲ್ಲ
ಯಾವುದೇ ಏರ್ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರು ಇನ್ನು ಮುಂದೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಿದೆ.

ಈ ಪಟ್ಟೀಲಿ ಸೇರಿದರೆ ಮುಗೀತು
ವಿಮಾನದೊಳಗೇ ಆಗಲಿ, ವಿಮಾನ ನಿಲ್ದಾಣದಲ್ಲೇ ಆಗಲಿ ಅನುಚಿತವಾಗಿ ವರ್ತಿಸುವ ಪ್ರಯಾಣಿಕರನ್ನು ನೋ- ಫ್ಲೈ ಎಂಬ ಪಟ್ಟಿಗೆ ಸೇರ್ಪಡೆಗೊಳಿಸಲಾಗುತ್ತದೆ. ಅಂದರೆ, ಆ ಪ್ರಯಾಣಿಕರ ಮೇಲೆ ವಿಮಾನ ಸೇವೆಗಳಿಂದ ನಿಷೇಧ ಹೇರಲಾಗುತ್ತದೆ.

ಸೌಜನ್ಯದಿಂದ ಇರಲೇಬೇಕು
ವಿಮಾನ ಸಂಸ್ಥೆಗಳ ಸಿಬ್ಬಂದಿಯೊಡನೆ ಮಾತ್ರವಲ್ಲ ಸಹ ಪ್ರಯಾಣಿಕರೊಂದಿಗೆ ಅಸಭ್ಯ, ಅನುಚಿತವಾಗಿ ವರ್ತಿಸಿದರೆ ಅಥವಾ ಮತ್ಯಾವುದೇ ತರಲೆಗಳನ್ನು ಮಾಡಿದರೂ ಅಂಥವನ್ನು ನೋ- ಫ್ಲೈ ಪಟ್ಟಿಗೆ ಸೇರಿಸಲಾಗುವುದು.

ಗಾಢ, ಗಂಭೀರ
ಈ ನಿಷೇಧ ತಾತ್ಕಾಲಿಕವಾಗಿರುತ್ತದಾದರೂ, ಆ ಅವಧಿಯಲ್ಲಿ ಆ ನಿರ್ದಿಷ್ಟ ಪ್ರಯಾಣಿಕರು ಭಾರತದಲ್ಲಿ ಯಾವುದೇ ವಿಮಾನ ಯಾನ ಸೇವೆಯನ್ನು ಬಳಸುವಂತಿರುವುದಿಲ್ಲ.

ಪತ್ತೆ ಹಚ್ಚಲು ಆಧಾರ್ ಇದೆಯಲ್ಲಾ?
ಹಾಗೊಮ್ಮೆ ವಿಮಾನ ಯಾನಕ್ಕಾಗಿ ನಿಷೇಧಿತ ಪ್ರಯಾಣಿಕರು ಪ್ರಯತ್ನಿಸಿದರೂ, ಟಿಕೆಟ್ ಬುಕಿಂಗ್ ವೇಳೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಲೇಬೇಕಿರುವುದರಿಂದ ನಿಷೇಧಿತ ಪ್ರಯಾಣಿಕರನ್ನು ಸುಲಭವಾಗಿ ಪತ್ತೆ ಹಚ್ಚಲು ಸಾಧ್ಯವಾಗುತ್ತದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications