ಹೊಸ ವರ್ಷದ ಉಡುಗೊರೆ: ಕೇಂದ್ರದಿಂದ ಬಡವರಿಗೆ ಒಂದು ವರ್ಷ ಉಚಿತ ಪಡಿತರ
ನವದೆಹಲಿ ಡಿಸೆಂಬರ್ 24: ಬಡವರಿಗೆ ಹೊಸ ವರ್ಷದ ಉಡುಗೊರೆಯಾಗಿ ಕೇಂದ್ರ ಸರ್ಕಾರ ಒಂದು ವರ್ಷ ಉಚಿತ ಪಡಿತರವನ್ನು ನೀಡಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಎನ್ಎಫ್ಎಸ್ಎ ಅಡಿಯಲ್ಲಿ 81.35 ಕೋಟಿ ಬಡವರಿಗೆ ಒಂದು ವರ್ಷದವರೆಗೆ ಉಚಿತ ಪಡಿತರ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ನಿರ್ಗತಿಕರು ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯುತ್ತಾರೆ. ಇತ್ತೀಚಿನ ಕ್ಯಾಬಿನೆಟ್ನ ಈ ನಿರ್ಧಾರವನ್ನು "ದೇಶದ ಬಡವರಿಗೆ ಹೊಸ ವರ್ಷದ ಉಡುಗೊರೆ" ಎಂದು ಕೇಂದ್ರ ಹೇಳಿಕೊಂಡಿದೆ. ಅಲ್ಲದೆ, ಈ ಯೋಜನೆಗೆ ಕೇಂದ್ರವು ವರ್ಷಕ್ಕೆ ಸುಮಾರು 2 ಲಕ್ಷ ಕೋಟಿ ರೂ. ಖರ್ಚು ಮಾಡಲಿದೆ.
ಟ್ವಿಟರ್ನಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್, ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ಸುಮಾರು 2 ಲಕ್ಷ ಕೋಟಿ ರೂಪಾಯಿ ವೆಚ್ಚದ 100 ಪ್ರತಿಶತವನ್ನು ಭರಿಸಲಿದೆ ಎಂದು ಹೇಳಿದ್ದಾರೆ.
NFSA ಅಡಿಯಲ್ಲಿ, ಇದನ್ನು ಆಹಾರ ಕಾನೂನು ಎಂದೂ ಕರೆಯುತ್ತಾರೆ. ಅಂತ್ಯೋದಯ ಅನ್ನ ಯೋಜನೆ (ಎಎವೈ) ಅಡಿಯಲ್ಲಿ ಬರುವ ಕುಟುಂಬಗಳು ತಿಂಗಳಿಗೆ 35 ಕೆಜಿ ಆಹಾರ ಧಾನ್ಯಗಳನ್ನು ಪಡೆಯುತ್ತವೆ. ಎನ್ಎಫ್ಎಸ್ಎ ಅಡಿಯಲ್ಲಿ ಬಡವರಿಗೆ ಕೆಜಿಗೆ 3 ರೂ.ಗೆ ಅಕ್ಕಿ ಮತ್ತು ಗೋಧಿಯನ್ನು ಕೆಜಿಗೆ 2 ರೂ.ಗೆ ನೀಡಲಾಗುತ್ತದೆ.
ಕೇಂದ್ರ ಸಂಪುಟದ ನಿರ್ಧಾರದ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿದ ಆಹಾರ ಸಚಿವ ಪಿಯೂಷ್ ಗೋಯಲ್, ಎನ್ಎಫ್ಎಸ್ಎ ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುವ ಸಂಪೂರ್ಣ ಹೊರೆಯನ್ನು ಕೇಂದ್ರವು ಭರಿಸಲಿದೆ ಎಂದು ಹೇಳಿದರು.
ऐतिहासिक निर्णय!
— Piyush Goyal (@PiyushGoyal) December 23, 2022
गरीबों को खाद्य सुरक्षा के लिए अब कोई पैसा नहीं देना होगा। PM @NarendraModi जी के नेतृत्व में केंद्र सरकार इस पर होने वाले लगभग 2 लाख करोड़ रूपए के खर्च को शत-प्रतिशत वहन करेगी।#AnnSeAntyoday pic.twitter.com/NJGBh973od
ಫಲಾನುಭವಿಗಳು ಆಹಾರ ಧಾನ್ಯ ಪಡೆಯಲು ಒಂದು ರೂಪಾಯಿ ಪಾವತಿಸಬೇಕಾಗಿಲ್ಲ. ಈ ಯೋಜನೆಗಾಗಿ ಕೇಂದ್ರವು ಈಗ ವರ್ಷಕ್ಕೆ ಸುಮಾರು 2 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡುತ್ತದೆ ಎಂದು ಗೋಯಲ್ ಹೇಳಿದ್ದಾರೆ.