ಮೇ.7: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ಮೇ.7: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
17.15: ಚೆನ್ನೈ ಸಮೀಪದ ಸಿಂಗಪೆರುಮಾಳ್ ಕೋಯಿಲ್ ನಲ್ಲಿರುವ ಮಹೀಂದ್ರಾ ವರ್ಲ್ಡ್ ಸಿಟಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಭೇಟಿ ನೀಡಿದ್ದಾರೆ. ಬಿಎಂಡಬ್ಲ್ಯೂ ಕಾರು ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಸಿಬ್ಬಂದಿಯಂತೆ ಯೂನಿಫಾರ್ಮ್ ಧರಿಸಿ ಫ್ಯಾಕ್ಟರಿಯಲ್ಲಿ ಓಡಾಡಿದರು.
17.00: ಡಾಲರ್ ಎದುರು ರುಪಾಯಿ ದರ ಕುಸಿತ. 64ರುಗೆ ಇಳಿಕೆ. 20 ತಿಂಗಳಲ್ಲಿ ಇದೇ ಮೊದಲ ಬಾರಿಗೆ ಈ ಹಂತಕ್ಕೆ ಬಂದ ಮೌಲ್ಯ.

16.45: ಪ್ರಧಾನಿ ನರೇಂದ್ರ ಮೋದಿ ಆರು ಜಾಫ್ನಾದಲ್ಲಿರುವ ತಮಿಳರಿಗೆ 27,000 ಮನೆ ಹಸ್ತಾಂತರಿಸಿದ್ದಾರೆ.
15.30: ಗಾಯಕ ಅಭಿಜಿತ್ ವಿರುದ್ಧ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬುಧವಾರ ಮಾಡಿದ ಟ್ವೀಟ್ ಗೆ ಅಭಿಜಿತ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
Chennai: Sachin Tendulkar paid visit to BMW plant, earlier today pic.twitter.com/oTk2FaEiZu
— ANI (@ANI_news) May 7, 2015 14.45: ಆರ್ ಜೆ ಡಿಯಿಂದ ಪಪ್ಪುಯಾದವ್ ಅವರನ್ನು ಉಚ್ಚಾಟಿಸಲಾಗಿದೆ.
14.20: ಸೆನ್ಸೆಕ್ಸ್ ಮತ್ತೆ 250 ಅಂಶಗಳು ಕುಸಿತ. ನಿಫ್ಟಿ 8 ಅಂಕಗಳು 8,000 ಅಂಶಗಳಿಗೆ ಇಳಿದಿದೆ.
14.30: ಬಾಲಾಪರಾಧಿ ತಿದ್ದುಪಡಿ ಕಾಯ್ದೆಗೆ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
14.00: ಹಿಟ್ ಅಂಡ್ ರನ್ ಕೇಸಿನಲ್ಲಿ ಫಿಟ್ ಆಗಿರುವ ಸಲ್ಮಾನ್ ಖಾನ್ ಅವರನ್ನು ನೋಡಲು ಬಾಂದ್ರಾ ನಿವಾಸಕ್ಕೆ ನಟ ಅಮೀರ್ ಖಾನ್, ರಾಜ್ ಠಾಕ್ರೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
13.15: ರಾಹುಲ್ ಗಾಂಧಿ ಅವರು ಮೇ 12ರಂದು ಪಾದಯಾತ್ರೆ ಮುಂದುವರೆಸಿ ತೆಲಂಗಾಣದ ಆದಿಲಾಬಾದ್ ಜಿಲ್ಲೆಯ 5 ಗ್ರಾಮಗಳಲ್ಲಿ ಸಂಚರಿಸಲಿದ್ದಾರೆ.

12.45: ಪಶ್ಚಿಮ ಬಂಗಾಲದ ದುರ್ಗಾಪುರದ ಕಲ್ಲಿದ್ದಲು ಗಣಿಯಲ್ಲಿ 45ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಗಣಿ ಮೇಲ್ಛಾವಣಿ ಕುಸಿತ ಉಂಟಾಗಿದೆ.
12.40: 2002ರ ಹಿಟ್ ಅಂಡ್ ರನ್ ಕೇಸಿನಲ್ಲಿ ಸಲ್ಮಾನ್ ಖಾನ್ ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಪಿಟೀಷನ್ ಹಾಕಲಾಗಿದೆ.
12.30: ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ, ಅಮೇಥಿಯಲ್ಲಿ ಫುಡ್ ಪಾರ್ಕ್ ನಿಂದ ರೈತರಿಗೆ ಲಾಭವಾಗುತ್ತಿತ್ತು. ಅದರೆ, ಮೋದಿ ಇದನ್ನು ಕಿತ್ತುಕೊಂಡರು. ಅಮೇಥಿಗೆ ಫುಡ್ ಪಾರ್ಕ್ ನೀಡಿ ಎಂದು ಕೇಳಿದರು.
12.15: ಕೇರಳ: ತರಬೇತುದಾರನ ಕಿರುಕುಳಕ್ಕೆ ಬೇಸತ್ತು ಮಹಿಳಾ ಅಥ್ಲೀಟ್ ಗಳು ವಿಷ ಸೇವಿಸಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಓರ್ವ ಅಥ್ಲೀಟ್ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. [ಹೆಚ್ಚಿನ ಸುದ್ದಿ ಇಲ್ಲಿ ಓದಿ]
12.00: ಪಂಜಾಬಿನ ಮೋಗಾ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಡಿಜಿಪಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
11.45: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ತಾತ್ಕಾಲಿಕ ರಿಲೀಫ್. ಆರೆಸ್ಸೆಸ್ ವಿರುದ್ಧ ಗಾಂಧೀಜಿ ಹತ್ಯೆ ಆರೋಪ ಹೊರೆಸಿದ್ದ ರಾಹುಲ್ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಸುಪ್ರೀಂಕೋರ್ಟ್ ಈ ಕೇಸಿನ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿದೆ.
11.40: ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅರುಣ್ ಜೇಟ್ಲಿ ಅವರು ಇ-ಭಾರತ್/ಇಂಡಿಯಾ ಹಾಗೂ ಇ-ಬುಕ್ ಪ್ರಕಟಿಸಿದ್ದಾರೆ.

11.30: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಜಿಎಸ್ ಟಿ, ರಿಯಲ್ ಎಸ್ಟೇಟ್ ಮಸೂದೆ ನಂತರ ಕಪ್ಪುಹಣ ವಾಪಸ್ ಕುರಿತಂತೆ ಮಸೂದೆ ಮಂಡನೆ ಮಾಡಲಿದೆ.
11.15: ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಮೇಲಿನ ಆರೋಪ ಪ್ರಕರಣ ಈಗ ದೆಹಲಿ ಗವರ್ನರ್ ಲೆ. ನಜೀಬ್ ಜಂಗ್ ಅಂಗಳಕ್ಕೆ ಇಳಿದಿದೆ. ಕೇಂದ್ರ ಸರ್ಕಾರದ ನೆರವು ಅಗತ್ಯವಿದೆ ಎಂದು ಮಹಿಳಾ ಆಯೋಗದ ಬರ್ಖಾ ಶುಕ್ಲಾ ಹೇಳಿದ್ದಾರೆ.
11.00: ಭ್ರಷ್ಟಾಚಾರ ಬಯಲಿಗೆಳೆಯುವವರ ಸಂರಕ್ಷಣಾ ಕಾಯ್ದೆಗೆ ಎನ್ ಡಿಎ ಕ್ಯಾಬಿನೆಟ್ ಒಪ್ಪಿಗೆ ಸಿಕ್ಕಿದೆ. ಇದರಿಂದ ಆರ್ ಟಿಐ ಕಾರ್ಯಕರ್ತರಿಗೆ ಸೂಕ್ತ ಭದ್ರತೆ ಸಿಕ್ಕಂತಾಗುತ್ತದೆ. (ಒನ್ ಇಂಡಿಯಾ ಸುದ್ದಿ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications