JNU ವಿವಾದ: ದೆಹಲಿಯಲ್ಲಿ ವಕೀಲರು VS ಪತ್ರಕರ್ತರು
ನವದೆಹಲಿ, ಫೆಬ್ರವರಿ, 16: ನವದೆಹಲಿಯಲ್ಲಿ ಮಂಗಳವಾರವೂ ಪ್ರತಿಭಟನೆಯದ್ದೇ ಕಾವು. ಪತ್ರಕರ್ತರು ಪ್ರತಿಭಟನೆಗೆ ಇಳಿದಿದ್ದು ವಿಶೇಷ. ಪಟಿಯಾಲಾ ಕೋರ್ಟ್ ಸಮೀಪ ಪತ್ರಕರ್ತರು ಪ್ರತಿಭಟನೆ ನಡೆಸಿದರು. ಫೆಬ್ರವರಿ 15, ಸೋಮವಾರ ವಕೀಲರು ತಮ್ಮ ಮೇಲೆ ಹಲ್ಲೆ ಮಾಡಿದ್ದು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಬರ್ಖಾ ದತ್, ರಾಜ್ ದೀಪ್ ಸರ್ದೇಸಾಯಿ, ಸಿದ್ಧಾರ್ಥ್ ವರದರಾಜನ್, ರವೀಶ್ ಕುಮಾರ್ ಸೇರಿದಂತೆ ಸಾವಿರಾರು ಪತ್ರಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮೆರವಣಿಗೆಯಲ್ಲಿ ತೆರಳಿದ ಪತ್ರಕರ್ತರು ಹಲ್ಲೆ ಮಾಡಿದ ವಕೀಲರಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಕೆ ಮಾಡಿತು.[ಅಮಿತ್ ಶಾ 8 ಪ್ರಶ್ನೆಗಳಿಗೆ ಕಾಂಗ್ರೆಸ್ ಒಂದೇ ವಾಕ್ಯದ ಉತ್ತರ!]
ಸೋಮವಾರದ ವಿಚಾರಣೆ ವೇಳೆ ವಕೀಲರ ತಂಡವೊಂದು ಭಾರತ ಮಾತಾಕೀ ಜೈ ಎಂದು ಹೇಳುತ್ತ ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳು ಮತ್ತು ಪತ್ರಕರ್ತರ ಮೇಲೆ ಹಲ್ಲೆ ಮಾಡಿತ್ತು. ಇದಾದ ಮೇಲೆ ಪತ್ರಕರ್ತರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದರು.

ಗೃಹ ಸಚಿವರಿಗೂ ಮನವಿ
ದೆಹಲಿ ಪೊಲೀಸರು ಇಂಥ ಪ್ರಕರಣ ನಡೆದರೂ ಸರಿಯಾದ ಭದ್ರತೆ ಒದಗಿಸಿಲ್ಲ ಎಂದು ಪತ್ರಕರ್ತರು ಆರೋಪಿಸಿದರು. ಇನ್ನೊಂದೆಡೆ ಪತ್ರಕರ್ತರ ನಿಯೋಗ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರಿಗೂ ಮನವಿ ಸಲ್ಲಿಕೆ ಮಾಡಿದೆ.

ಲೈಸೆನ್ಸ್ ಕ್ಯಾನ್ಸಲ್ ಮಾಡಿ
ಹಲ್ಲೆ ಮಾಡಿದ ವಕೀಲರನ್ನು ಗುರುತಿಸಿ ಅವರ ಬಾರ್ ಕೌನ್ಸಿಲ್ ಲೈಸನ್ಸ್ ಕಾನ್ಸಲ್ ಮಾಡಬೇಕು ಎಂದು ಪತ್ರಕರ್ತರು ಘೋಷಣೆ ಕೂಗಿದರು.

ದಿನ ಕಳೆದರೂ ಕ್ರಮವಿಲ್ಲ
ಘಟನೆ ನಡೆದು ಒಂದು ದಿನ ಕಳೆದಿದ್ದರೂ ದೆಹಲಿ ಪೊಲೀಸರು ಇನ್ನು ಯಾರನ್ನು ಬಂಧಿಸಿ ಕರೆತಂದಿಲ್ಲ. ಇಲ್ಲಿ ಪ್ರಮುಖ ವ್ಯಕ್ತಿಗಳ ಕೈವಾಡ ಇರುವುದು ಸಾಬೀತಾಗುತ್ತಿದೆ.

ವಿಚಾರಣೆಗೆ ಬರಲಿದೆ
ಪತ್ರಕರ್ತರು ಮಾಧ್ಯಮ ಸ್ವಾತಂತ್ರ್ಯ ಹರಣ ಆಗುತ್ತಿದೆ ಎಂದು ಸಲ್ಲಿಕೆ ಮಾಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications